ಮುಳ್ಳಿಕಟ್ಟೆ:ಭಾರತೀಯ ಭೂ ಸೇನೆಯಲ್ಲಿ ಸಿಪಾಯಿ ಹುದ್ದೆಗೆ ಸೇರಿ ಹವಾಲ್ದಾರರಾಗಿ 21 ವರ್ಷಗಳ ಕಾಲ ಸೇವೆ ಸಲ್ಲಿಸಿ ಆ.31 ರಂದು ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ಕುಂದಾಪುರ ತಾಲೂಕಿನ ಆಲೂರು ಗ್ರಾಮದ ಕಾಳಿಕಾಂಬಾ ನಗರದ ನಿವಾಸಿ ಶಂಕರ ಆಚಾರ್ಯ ಮತ್ತು ಸುಶೀಲ ಆಚಾರ್ಯ ದಂಪತಿಗಳ ಪುತ್ರ ನಿವೃತ್ತ ಸೇನಾ ಹವಾಲ್ದಾರ್ ದಿನೇಶ್ ಆಚಾರ್ಯ ಅವರನ್ನು ಮುಳ್ಳಿಕಟ್ಟೆಯಲ್ಲಿ ಚಂಡೆಯೊಂದಿಗೆ ಆರತಿ ಬೆಳಗಿ ಅದ್ದೂರಿಯಾಗಿ ಮಂಗಳವಾರ ಸ್ವಾಗತಿಸಿಕೊಳ್ಳಲಾಯಿತು.
ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ಹುಟ್ಟೂರಿಗೆ ಆಗಮಿಸಿದ ನಿವೃತ್ತ ಸೇನಾ ಹವಾಲ್ದಾರ್ ದಿನೇಶ್ ಆಚಾರ್ಯ ಅವರನ್ನು ಶಂಕರನಾಗ ಆಟೋ ಸ್ಟ್ಯಾಂಡ್ ಮುಳ್ಳಿಕಟ್ಟೆ ಮತ್ತು ಹೊಸಾಡು ಗ್ರಾಮಸ್ಥರ ವತಿಯಿಂದ ಮುಳ್ಳಿಕಟ್ಟೆ ಆಟೋ ಸ್ಟ್ಯಾಂಡ್ನಲ್ಲಿ ಸನ್ಮಾನಿಸಲಾಯಿತು.ಈ ಸಂದರ್ಭ ಶಂಕರನಾಗ ಆಟೋ ಸ್ಟ್ಯಾಂಡ್ ಅಧ್ಯಕ್ಷ ಚಂದ್ರ ಹಕ್ಲಾಡಿ ಮತ್ತು ಪದಾಧಿಕಾರಿಗಳು,ಸದಸ್ಯರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
(ಭಾರತೀಯ ಭೂ ಸೇನೆಯಲ್ಲಿ 21 ವರ್ಷಗಳ ಕಾಲ ದೇಶ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ನಿವೃತ್ತ ಸೇನಾ ಹವಾಲ್ದಾರ್ ದಿನೇಶ್ ಆಚಾರ್ಯ ಅವರನ್ನು ಮುಳ್ಳಿಕಟ್ಟೆಯಿಂದ ಹುಟ್ಟೂರಾದ ಆಲೂರು ತನಕ ಭವ್ಯ ಮೆರವಣಿಗೆ ಮೂಲಕ ಬರ ಮಾಡಿಕೊಳ್ಳಲಾಯಿತು)
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…