ಮುಳ್ಳಿಕಟ್ಟೆ:ಭಾರತೀಯ ಭೂ ಸೇನೆಯಲ್ಲಿ ಸಿಪಾಯಿ ಹುದ್ದೆಗೆ ಸೇರಿ ಹವಾಲ್ದಾರರಾಗಿ 21 ವರ್ಷಗಳ ಕಾಲ ಸೇವೆ ಸಲ್ಲಿಸಿ ಆ.31 ರಂದು ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ಕುಂದಾಪುರ ತಾಲೂಕಿನ ಆಲೂರು ಗ್ರಾಮದ ಕಾಳಿಕಾಂಬಾ ನಗರದ ನಿವಾಸಿ ಶಂಕರ ಆಚಾರ್ಯ ಮತ್ತು ಸುಶೀಲ ಆಚಾರ್ಯ ದಂಪತಿಗಳ ಪುತ್ರ ನಿವೃತ್ತ ಸೇನಾ ಹವಾಲ್ದಾರ್ ದಿನೇಶ್ ಆಚಾರ್ಯ ಅವರನ್ನು ಮುಳ್ಳಿಕಟ್ಟೆಯಲ್ಲಿ ಚಂಡೆಯೊಂದಿಗೆ ಆರತಿ ಬೆಳಗಿ ಅದ್ದೂರಿಯಾಗಿ ಮಂಗಳವಾರ ಸ್ವಾಗತಿಸಿಕೊಳ್ಳಲಾಯಿತು.
ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ಹುಟ್ಟೂರಿಗೆ ಆಗಮಿಸಿದ ನಿವೃತ್ತ ಸೇನಾ ಹವಾಲ್ದಾರ್ ದಿನೇಶ್ ಆಚಾರ್ಯ ಅವರನ್ನು ಶಂಕರನಾಗ ಆಟೋ ಸ್ಟ್ಯಾಂಡ್ ಮುಳ್ಳಿಕಟ್ಟೆ ಮತ್ತು ಹೊಸಾಡು ಗ್ರಾಮಸ್ಥರ ವತಿಯಿಂದ ಮುಳ್ಳಿಕಟ್ಟೆ ಆಟೋ ಸ್ಟ್ಯಾಂಡ್ನಲ್ಲಿ ಸನ್ಮಾನಿಸಲಾಯಿತು.ಈ ಸಂದರ್ಭ ಶಂಕರನಾಗ ಆಟೋ ಸ್ಟ್ಯಾಂಡ್ ಅಧ್ಯಕ್ಷ ಚಂದ್ರ ಹಕ್ಲಾಡಿ ಮತ್ತು ಪದಾಧಿಕಾರಿಗಳು,ಸದಸ್ಯರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
(ಭಾರತೀಯ ಭೂ ಸೇನೆಯಲ್ಲಿ 21 ವರ್ಷಗಳ ಕಾಲ ದೇಶ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ನಿವೃತ್ತ ಸೇನಾ ಹವಾಲ್ದಾರ್ ದಿನೇಶ್ ಆಚಾರ್ಯ ಅವರನ್ನು ಮುಳ್ಳಿಕಟ್ಟೆಯಿಂದ ಹುಟ್ಟೂರಾದ ಆಲೂರು ತನಕ ಭವ್ಯ ಮೆರವಣಿಗೆ ಮೂಲಕ ಬರ ಮಾಡಿಕೊಳ್ಳಲಾಯಿತು)
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಶಕಟಪುರ ಶ್ರೀ ವಿದ್ಯಾಪೀಠಾಧೀಶ್ವರ ಶ್ರೀ ಜಗದ್ಗುರು ಬದರೀಶಂಕರಾಚಾರ್ಯ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ವಾರ್ಷಿಕೋತ್ಸವ "ಐಕ್ಯಂ" 2025 ಅದ್ದೂರಿಯಿಂದ ನಡೆಯಿತು.ವಿಭಿನ್ನ ರೀತಿಯ ನೃತ್ಯ, ಸಂಗೀತದಿಂದ ಹಾಗೂ ಕಾಲೇಜಿನ ವಿದ್ಯಾರ್ಥಿಗಳೇ…
ಕುಂದಾಪುರ:ಸಾಮಾಜಿಕ ಧಾರ್ಮಿಕ ಶೈಕ್ಷಣಿಕ ಕಾರ್ಯಗಳೊಂದಿಗೆ ಊರಿನ ಅಭಿವೃದ್ಧಿಗೆ ಶ್ರಮಿಸುತ್ತಿರುವ ಯುವಕ ಮಂಡಲದ ಕಾರ್ಯ ಇತರ ಸಂಘಟನೆಗಳಿಗೆ ಮಾದರಿ ಆಗಿದೆ ಎಂದು…
ಉಡುಪಿ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ವಿದ್ಯಾರ್ಥಿಗಳಿಂದ ಉಡುಪಿ ಕೃಷ್ಣ ಮಠದ ರಾಜಾಂಗಣದಲ್ಲಿ ಭರತ ನಾಟ್ಯ ಪ್ರದರ್ಶನ ನಡೆಯಿತು.ವಿದ್ಯಾರ್ಥಿಗಳು ಹೆಜ್ಞೆ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮಹಾತ್ಮ ಗಾಂಧಿ ಮೈದಾನ ಅಜ್ಜರಕಾಡುನಲ್ಲಿ ಜರುಗಿತು.ಹಿರಿಯ ದೈಹಿಕ ನಿರ್ದೇಶಕ ಯುನೈಟೆಡ್ ಉಡುಪಿ…
ಕುಂದಾಪುರ:ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶವಿದ್ದು,ಇಲ್ಲಿಗೆ ಬರುವಂತೆ ಸಂಸದರು, ಶಾಸಕರು ಮನವಿ ಮಾಡಿದ್ದರು. ಆ ಹಿನ್ನೆಲೆಯಲ್ಲಿ ಈ ಭಾಗದ ಪ್ರವಾಸೋದ್ಯಮ…