ಮುಳ್ಳಿಕಟ್ಟೆ:ಭಾರತೀಯ ಭೂ ಸೇನೆಯಲ್ಲಿ ಸಿಪಾಯಿ ಹುದ್ದೆಗೆ ಸೇರಿ ಹವಾಲ್ದಾರರಾಗಿ 21 ವರ್ಷಗಳ ಕಾಲ ಸೇವೆ ಸಲ್ಲಿಸಿ ಆ.31 ರಂದು ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ಕುಂದಾಪುರ ತಾಲೂಕಿನ ಆಲೂರು ಗ್ರಾಮದ ಕಾಳಿಕಾಂಬಾ ನಗರದ ನಿವಾಸಿ ಶಂಕರ ಆಚಾರ್ಯ ಮತ್ತು ಸುಶೀಲ ಆಚಾರ್ಯ ದಂಪತಿಗಳ ಪುತ್ರ ನಿವೃತ್ತ ಸೇನಾ ಹವಾಲ್ದಾರ್ ದಿನೇಶ್ ಆಚಾರ್ಯ ಅವರನ್ನು ಮುಳ್ಳಿಕಟ್ಟೆಯಲ್ಲಿ ಚಂಡೆಯೊಂದಿಗೆ ಆರತಿ ಬೆಳಗಿ ಅದ್ದೂರಿಯಾಗಿ ಮಂಗಳವಾರ ಸ್ವಾಗತಿಸಿಕೊಳ್ಳಲಾಯಿತು.
ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ಹುಟ್ಟೂರಿಗೆ ಆಗಮಿಸಿದ ನಿವೃತ್ತ ಸೇನಾ ಹವಾಲ್ದಾರ್ ದಿನೇಶ್ ಆಚಾರ್ಯ ಅವರನ್ನು ಶಂಕರನಾಗ ಆಟೋ ಸ್ಟ್ಯಾಂಡ್ ಮುಳ್ಳಿಕಟ್ಟೆ ಮತ್ತು ಹೊಸಾಡು ಗ್ರಾಮಸ್ಥರ ವತಿಯಿಂದ ಮುಳ್ಳಿಕಟ್ಟೆ ಆಟೋ ಸ್ಟ್ಯಾಂಡ್ನಲ್ಲಿ ಸನ್ಮಾನಿಸಲಾಯಿತು.ಈ ಸಂದರ್ಭ ಶಂಕರನಾಗ ಆಟೋ ಸ್ಟ್ಯಾಂಡ್ ಅಧ್ಯಕ್ಷ ಚಂದ್ರ ಹಕ್ಲಾಡಿ ಮತ್ತು ಪದಾಧಿಕಾರಿಗಳು,ಸದಸ್ಯರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
(ಭಾರತೀಯ ಭೂ ಸೇನೆಯಲ್ಲಿ 21 ವರ್ಷಗಳ ಕಾಲ ದೇಶ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ನಿವೃತ್ತ ಸೇನಾ ಹವಾಲ್ದಾರ್ ದಿನೇಶ್ ಆಚಾರ್ಯ ಅವರನ್ನು ಮುಳ್ಳಿಕಟ್ಟೆಯಿಂದ ಹುಟ್ಟೂರಾದ ಆಲೂರು ತನಕ ಭವ್ಯ ಮೆರವಣಿಗೆ ಮೂಲಕ ಬರ ಮಾಡಿಕೊಳ್ಳಲಾಯಿತು)
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…