ಮುಳ್ಳಿಕಟ್ಟೆ:ಭಾರತೀಯ ಭೂ ಸೇನೆಯಲ್ಲಿ ಸಿಪಾಯಿ ಹುದ್ದೆಗೆ ಸೇರಿ ಹವಾಲ್ದಾರರಾಗಿ 21 ವರ್ಷಗಳ ಕಾಲ ಸೇವೆ ಸಲ್ಲಿಸಿ ಆ.31 ರಂದು ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ಕುಂದಾಪುರ ತಾಲೂಕಿನ ಆಲೂರು ಗ್ರಾಮದ ಕಾಳಿಕಾಂಬಾ ನಗರದ ನಿವಾಸಿ ಶಂಕರ ಆಚಾರ್ಯ ಮತ್ತು ಸುಶೀಲ ಆಚಾರ್ಯ ದಂಪತಿಗಳ ಪುತ್ರ ನಿವೃತ್ತ ಸೇನಾ ಹವಾಲ್ದಾರ್ ದಿನೇಶ್ ಆಚಾರ್ಯ ಅವರನ್ನು ಮುಳ್ಳಿಕಟ್ಟೆಯಲ್ಲಿ ಚಂಡೆಯೊಂದಿಗೆ ಆರತಿ ಬೆಳಗಿ ಅದ್ದೂರಿಯಾಗಿ ಮಂಗಳವಾರ ಸ್ವಾಗತಿಸಿಕೊಳ್ಳಲಾಯಿತು.
ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ಹುಟ್ಟೂರಿಗೆ ಆಗಮಿಸಿದ ನಿವೃತ್ತ ಸೇನಾ ಹವಾಲ್ದಾರ್ ದಿನೇಶ್ ಆಚಾರ್ಯ ಅವರನ್ನು ಶಂಕರನಾಗ ಆಟೋ ಸ್ಟ್ಯಾಂಡ್ ಮುಳ್ಳಿಕಟ್ಟೆ ಮತ್ತು ಹೊಸಾಡು ಗ್ರಾಮಸ್ಥರ ವತಿಯಿಂದ ಮುಳ್ಳಿಕಟ್ಟೆ ಆಟೋ ಸ್ಟ್ಯಾಂಡ್ನಲ್ಲಿ ಸನ್ಮಾನಿಸಲಾಯಿತು.ಈ ಸಂದರ್ಭ ಶಂಕರನಾಗ ಆಟೋ ಸ್ಟ್ಯಾಂಡ್ ಅಧ್ಯಕ್ಷ ಚಂದ್ರ ಹಕ್ಲಾಡಿ ಮತ್ತು ಪದಾಧಿಕಾರಿಗಳು,ಸದಸ್ಯರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
(ಭಾರತೀಯ ಭೂ ಸೇನೆಯಲ್ಲಿ 21 ವರ್ಷಗಳ ಕಾಲ ದೇಶ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ನಿವೃತ್ತ ಸೇನಾ ಹವಾಲ್ದಾರ್ ದಿನೇಶ್ ಆಚಾರ್ಯ ಅವರನ್ನು ಮುಳ್ಳಿಕಟ್ಟೆಯಿಂದ ಹುಟ್ಟೂರಾದ ಆಲೂರು ತನಕ ಭವ್ಯ ಮೆರವಣಿಗೆ ಮೂಲಕ ಬರ ಮಾಡಿಕೊಳ್ಳಲಾಯಿತು)
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…