ಹೆಮ್ಮಾಡಿ ಜನತಾ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ,ಗುರು ನಮನ ಕಾರ್ಯಕ್ರಮ

Share

Advertisement
Advertisement
Advertisement

ಕುಂದಾಪುರ:ಶಿಕ್ಷಣ ಮತ್ತು ಸಂಸ್ಕಾರದ ಕುರಿತಾಗಿ ಸಾಕಷ್ಟು ಸ್ವಾರಸ್ಯಕರವಾಗಿರುವ ವಿಚಾರಗಳನ್ನು ಮನ ಮುಟ್ಟುವಂತೆ ವಿದ್ಯಾರ್ಥಿಗಳಿಗೆ ಜನತಾ ಕಾಲೇಜು ಶಿಕ್ಷಣ ಸಂಸ್ಥೆ ಬೋಧನೆ ಮಾಡುತ್ತಿರುವುದು ಶೈಕ್ಷಣಿಕ ಕ್ರಾಂತಿಗೆ ಮುನ್ನುಡಿ ಬರೆದಂತೆ ಇದೆ ಎಂದು ಕಂಬದಕೋಣೆ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಶಿಕ್ಷಕ ವಿಶ್ವನಾಥ ಶೆಟ್ಟಿ ಹೇಳಿದರು.
ಕುಂದಾಪುರ ತಾಲೂಕಿನ ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆದ ಶಿಕ್ಷಕರ ದಿನಾಚರಣೆ ಮತ್ತು ಗುರು ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಆಡಳಿತ ಮಂಡಳಿ ಅಧ್ಯಕ್ಷರಾದ ಕಾಲೇಜಿನ ಪ್ರಿನ್ಸಿಪಾಲ್ ಗಣೇಶ ಮೊಗವೀರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಜನತಾ ಪ್ರೌಢಶಾಲೆ ಮುಖ್ಯ ಶಿಕ್ಷಕ ಮಂಜು ಕಾಳವಾರ,ಕಾಲೇಜಿನ ವೈಸ್ ಪ್ರಿನ್ಸಿಪಾಲ್ ರಮೇಶ್ ಪೂಜಾರಿ,ಬೋಧಕ,ಬೋಧಕೇತರ ಸಿಬ್ಬಂದಿಗಳು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಅವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ನಮಿಸಲಾಯಿತು.ಉಪನ್ಯಾಸಕ ಉದಯ್ ನಾಯ್ಕ್ ಪರಿಚಯಿಸಿದರು.ವಿದ್ಯಾರ್ಥಿಗಳಾದ ಕೇದಾರ್ ಮರವಂತೆ ಪ್ರಾರ್ಥಿಸಿದರು.ಪ್ರತೀಕ್ಷಾ ನಿರೂಪಿಸಿದರು.ಗೌತಮ್ ವಂದಿಸಿದರು.ಜನತಾ ಕಾಲೇಜಿನ ವಿದ್ಯಾರ್ಥಿಗಳು ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶುಭಾಶಯವನ್ನು ಕೋರಿದರು.

Advertisement


Share

Leave a comment

Your email address will not be published. Required fields are marked *

You cannot copy content of this page