ಕುಂದಾಪುರ:ಶಿಕ್ಷಣ ಮತ್ತು ಸಂಸ್ಕಾರದ ಕುರಿತಾಗಿ ಸಾಕಷ್ಟು ಸ್ವಾರಸ್ಯಕರವಾಗಿರುವ ವಿಚಾರಗಳನ್ನು ಮನ ಮುಟ್ಟುವಂತೆ ವಿದ್ಯಾರ್ಥಿಗಳಿಗೆ ಜನತಾ ಕಾಲೇಜು ಶಿಕ್ಷಣ ಸಂಸ್ಥೆ ಬೋಧನೆ ಮಾಡುತ್ತಿರುವುದು ಶೈಕ್ಷಣಿಕ ಕ್ರಾಂತಿಗೆ ಮುನ್ನುಡಿ ಬರೆದಂತೆ ಇದೆ ಎಂದು ಕಂಬದಕೋಣೆ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಶಿಕ್ಷಕ ವಿಶ್ವನಾಥ ಶೆಟ್ಟಿ ಹೇಳಿದರು.
ಕುಂದಾಪುರ ತಾಲೂಕಿನ ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆದ ಶಿಕ್ಷಕರ ದಿನಾಚರಣೆ ಮತ್ತು ಗುರು ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಆಡಳಿತ ಮಂಡಳಿ ಅಧ್ಯಕ್ಷರಾದ ಕಾಲೇಜಿನ ಪ್ರಿನ್ಸಿಪಾಲ್ ಗಣೇಶ ಮೊಗವೀರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಜನತಾ ಪ್ರೌಢಶಾಲೆ ಮುಖ್ಯ ಶಿಕ್ಷಕ ಮಂಜು ಕಾಳವಾರ,ಕಾಲೇಜಿನ ವೈಸ್ ಪ್ರಿನ್ಸಿಪಾಲ್ ರಮೇಶ್ ಪೂಜಾರಿ,ಬೋಧಕ,ಬೋಧಕೇತರ ಸಿಬ್ಬಂದಿಗಳು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಅವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ನಮಿಸಲಾಯಿತು.ಉಪನ್ಯಾಸಕ ಉದಯ್ ನಾಯ್ಕ್ ಪರಿಚಯಿಸಿದರು.ವಿದ್ಯಾರ್ಥಿಗಳಾದ ಕೇದಾರ್ ಮರವಂತೆ ಪ್ರಾರ್ಥಿಸಿದರು.ಪ್ರತೀಕ್ಷಾ ನಿರೂಪಿಸಿದರು.ಗೌತಮ್ ವಂದಿಸಿದರು.ಜನತಾ ಕಾಲೇಜಿನ ವಿದ್ಯಾರ್ಥಿಗಳು ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶುಭಾಶಯವನ್ನು ಕೋರಿದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…