ಕುಂದಾಪುರ:ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು,ಸಮೂಹ ಸಂಪನ್ಮೂಲ ಕೇಂದ್ರ ಹೆಮ್ಮಾಡಿ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಹೆಮ್ಮಾಡಿ ಶಾಲೆಯಲ್ಲಿ ಹೆಮ್ಮಾಡಿ ಕ್ಲಸ್ಟರ್ ಮಟ್ಟದ ಕಿರಿಯ,ಹಿರಿಯ ಮತ್ತು ಪ್ರೌಢ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ ಶನಿವಾರ ಅದ್ದೂರಿಯಾಗಿ ನಡೆಯಿತು.
ನಿವೃತ್ತ ಮುಖ್ಯೋಪಾಧ್ಯಾಯರಾದ ಶಂಕರ ಮಡಿವಾಳ ಅವರು ಪ್ರತಿಭಾ ಕಾರಂಜಿ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿ,ಪುಟ್ಟ ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತಲು ಪ್ರತಿಭಾ ಕಾರಂಜಿ ಅಂತಹ ಸ್ಪರ್ಧೆಗಳು ಉತ್ತಮವಾದ ವೇದಿಕೆ ಆಗಿದೆ.ಪಾಠದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳು ಭಾಗವಹಿಸುವುದರಿಂದ ವಿದ್ಯಾರ್ಥಿ ಜೀವನದಲ್ಲಿ ಎದುರಾಗುವ ಸವಾಲುಗಳನ್ನು ನಿಭಾಯಿಸಲು ಬಹಳಷ್ಟು ಅನುಕೂಲವಾಗುತ್ತದೆ.ಕಲೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು ಮಕ್ಕಳಿಗೆ ಪೋಷಕರು ಪ್ರೋತ್ಸಾಹ ನೀಡಬೇಕು ಎಂದರು.
ಶಾಲಾ ಮುಖ್ಯೋಪಾಧ್ಯಾಯರಾದ ದಿವಾಕರ್ ಮಾಸ್ಟರ್ ಮಾತನಾಡಿ,ಹೆಮ್ಮಾಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕಿರಿಯ,ಹಿರಿಯ ಮತ್ತು ಪ್ರೌಢಶಾಲಾ ವಿಭಾಗದ ಸುಮಾರು 14 ಶಾಲೆಯ ವಿದ್ಯಾರ್ಥಿಗಳು ಭಾಗವಿಹಿಸಿದ್ದಾರೆ.ನಮ್ಮ ಶಾಲೆಯಲ್ಲಿ ನಡೆಯುತ್ತಿರುವ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಊರಿನ ದಾನಿಗಳು ಸೇರಿದಂತೆ ಹಲವಾರು ಜನ ಪ್ರತ್ಯಕ್ಷವಾಗಿ ಪರೋಕ್ಷವಾಗಿ ಸಹಕಾರವನ್ನು ನೀಡಿದ್ದಾರೆ.ಸೋತವರು ಕುಗ್ಗದೆ,ಗೆದ್ದವರು ಹಿಗ್ಗ ಬಾರದು,ಸ್ಪರ್ಧೆಯಲ್ಲಿ ಸೋಲು,ಗೆಲುವು ಎನ್ನುವುದು ಸರ್ವೆ ಸಾಮಾನ್ಯ,ವೇದಿಕೆಯನ್ನು ಸಮರ್ಥ ರೀತಿಯಲ್ಲಿ ಉಪಯೋಗಿಸಿಕೊಳ್ಳುವುದು ಮುಖ್ಯ ಎಲ್ಲರಿಗೂ ಶುಭವಾಗಲಿ ಎಂದು ಶುಭಹಾರೈಸಿದರು.
ಹೆಮ್ಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನೇತ್ರಾವತಿ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಈ ಸಂದರ್ಭ ಹೆಮ್ಮಾಡಿ ಪಂಚಾಯತ್ ಉಪಾಧ್ಯಕ್ಷೆ ಶೋಭಾ ಡಿ ಕಾಂಚನ್ ಮತ್ತು ಸದಸ್ಯೆ ರತ್ನಾ,ಹೆಮ್ಮಾಡಿ ಸಂಪನ್ಮೂಲ ಕೇಂದ್ರ ಶಿಕ್ಷಣ ಸಂಯೋಜಕ ಯೋಗೀಶ್,ಹಿರಿಯ ಎಸ್ಡಿಎಂಸಿ ಸದಸ್ಯೆ ಲೀಲಾವತಿ,ನಿವೃತ್ತ ಶಿಕ್ಷಕ ಅಣ್ಣಪ್ಪ,ಶಿಕ್ಷಕ ರವೀಂದ್ರ,ಸಿಆರ್ಪಿ ರಮನಾಥ್ ಮೇಸ್ತ,ಗುಜ್ಜಾಡಿ ಶಾಲೆ ಶಿಕ್ಷಕ ವಾಸುದೇವ ಬಂಗೇರ,ಜನತಾ ಪ್ರೌಢಶಾಲೆ ಶಿಕ್ಷಕ ಜಗದೀಶ್ ಶೆಟ್ಟಿ ಮತ್ತು ಪದವಿ ಕಾಲೇಜಿನ ಶಿಕ್ಷಕ ಅಭಿಜಿತ್,ದಾನಿಗಳಾದ ಹರೀಶ್ ಭಂಡಾರಿ, ಶಾಂತಾರಾಂ ಭಟ್, ಅಶೋಕ್ ಭಟ್ ಉಪಸ್ಥಿತರಿದ್ದರು.ಶಾಲೆ ಮುಖ್ಯ ಶಿಕ್ಷ ದಿವಾಕರ್ ಸ್ವಾಗತಿಸಿದರು.ಶಿಕ್ಷಣ ಸಂಯೋಜಕ ಯೋಗೀಶ್ ಪ್ರಾಸ್ತಾವಿಕವಾಗಿ ಮಾತನಾಡಿದರು.ಶಿಕ್ಷಕಿ ಒಲಂಪಿಯಾ ಮತ್ತು ರೇವತಿ ನಿರೂಪಿಸಿದರು.ಸುಪ್ರೀತಾ ವಂದಿಸಿದರು.ಪ್ರತಿಭಾ ಕಾರಂಜಿ ಸ್ಪಧೆಯಲ್ಲಿ ಭಾಗವಿಸಿದ್ದ ವಿದ್ಯಾರ್ಥಿಗಳು ವೇದಿಕೆ ಮೇಲೆ ತಮ್ಮ ಪ್ರತಿಭೆಯನ್ನು ಅನಾವರಣ ಮಾಡಿದರು.
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಶಕಟಪುರ ಶ್ರೀ ವಿದ್ಯಾಪೀಠಾಧೀಶ್ವರ ಶ್ರೀ ಜಗದ್ಗುರು ಬದರೀಶಂಕರಾಚಾರ್ಯ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ವಾರ್ಷಿಕೋತ್ಸವ "ಐಕ್ಯಂ" 2025 ಅದ್ದೂರಿಯಿಂದ ನಡೆಯಿತು.ವಿಭಿನ್ನ ರೀತಿಯ ನೃತ್ಯ, ಸಂಗೀತದಿಂದ ಹಾಗೂ ಕಾಲೇಜಿನ ವಿದ್ಯಾರ್ಥಿಗಳೇ…
ಕುಂದಾಪುರ:ಸಾಮಾಜಿಕ ಧಾರ್ಮಿಕ ಶೈಕ್ಷಣಿಕ ಕಾರ್ಯಗಳೊಂದಿಗೆ ಊರಿನ ಅಭಿವೃದ್ಧಿಗೆ ಶ್ರಮಿಸುತ್ತಿರುವ ಯುವಕ ಮಂಡಲದ ಕಾರ್ಯ ಇತರ ಸಂಘಟನೆಗಳಿಗೆ ಮಾದರಿ ಆಗಿದೆ ಎಂದು…
ಉಡುಪಿ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ವಿದ್ಯಾರ್ಥಿಗಳಿಂದ ಉಡುಪಿ ಕೃಷ್ಣ ಮಠದ ರಾಜಾಂಗಣದಲ್ಲಿ ಭರತ ನಾಟ್ಯ ಪ್ರದರ್ಶನ ನಡೆಯಿತು.ವಿದ್ಯಾರ್ಥಿಗಳು ಹೆಜ್ಞೆ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮಹಾತ್ಮ ಗಾಂಧಿ ಮೈದಾನ ಅಜ್ಜರಕಾಡುನಲ್ಲಿ ಜರುಗಿತು.ಹಿರಿಯ ದೈಹಿಕ ನಿರ್ದೇಶಕ ಯುನೈಟೆಡ್ ಉಡುಪಿ…
ಕುಂದಾಪುರ:ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶವಿದ್ದು,ಇಲ್ಲಿಗೆ ಬರುವಂತೆ ಸಂಸದರು, ಶಾಸಕರು ಮನವಿ ಮಾಡಿದ್ದರು. ಆ ಹಿನ್ನೆಲೆಯಲ್ಲಿ ಈ ಭಾಗದ ಪ್ರವಾಸೋದ್ಯಮ…