ಕುಂದಾಪುರ

ಹೆಮ್ಮಾಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಉದ್ಘಾಟನಾ ಸಮಾರಂಭ

Share

Advertisement
Advertisement
Advertisement

ಕುಂದಾಪುರ:ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು,ಸಮೂಹ ಸಂಪನ್ಮೂಲ ಕೇಂದ್ರ ಹೆಮ್ಮಾಡಿ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಹೆಮ್ಮಾಡಿ ಶಾಲೆಯಲ್ಲಿ ಹೆಮ್ಮಾಡಿ ಕ್ಲಸ್ಟರ್ ಮಟ್ಟದ ಕಿರಿಯ,ಹಿರಿಯ ಮತ್ತು ಪ್ರೌಢ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ ಶನಿವಾರ ಅದ್ದೂರಿಯಾಗಿ ನಡೆಯಿತು.

Advertisement

ನಿವೃತ್ತ ಮುಖ್ಯೋಪಾಧ್ಯಾಯರಾದ ಶಂಕರ ಮಡಿವಾಳ ಅವರು ಪ್ರತಿಭಾ ಕಾರಂಜಿ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿ,ಪುಟ್ಟ ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತಲು ಪ್ರತಿಭಾ ಕಾರಂಜಿ ಅಂತಹ ಸ್ಪರ್ಧೆಗಳು ಉತ್ತಮವಾದ ವೇದಿಕೆ ಆಗಿದೆ.ಪಾಠದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳು ಭಾಗವಹಿಸುವುದರಿಂದ ವಿದ್ಯಾರ್ಥಿ ಜೀವನದಲ್ಲಿ ಎದುರಾಗುವ ಸವಾಲುಗಳನ್ನು ನಿಭಾಯಿಸಲು ಬಹಳಷ್ಟು ಅನುಕೂಲವಾಗುತ್ತದೆ.ಕಲೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು ಮಕ್ಕಳಿಗೆ ಪೋಷಕರು ಪ್ರೋತ್ಸಾಹ ನೀಡಬೇಕು ಎಂದರು.

ಶಾಲಾ ಮುಖ್ಯೋಪಾಧ್ಯಾಯರಾದ ದಿವಾಕರ್ ಮಾಸ್ಟರ್ ಮಾತನಾಡಿ,ಹೆಮ್ಮಾಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕಿರಿಯ,ಹಿರಿಯ ಮತ್ತು ಪ್ರೌಢಶಾಲಾ ವಿಭಾಗದ ಸುಮಾರು 14 ಶಾಲೆಯ ವಿದ್ಯಾರ್ಥಿಗಳು ಭಾಗವಿಹಿಸಿದ್ದಾರೆ.ನಮ್ಮ ಶಾಲೆಯಲ್ಲಿ ನಡೆಯುತ್ತಿರುವ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಊರಿನ ದಾನಿಗಳು ಸೇರಿದಂತೆ ಹಲವಾರು ಜನ ಪ್ರತ್ಯಕ್ಷವಾಗಿ ಪರೋಕ್ಷವಾಗಿ ಸಹಕಾರವನ್ನು ನೀಡಿದ್ದಾರೆ.ಸೋತವರು ಕುಗ್ಗದೆ,ಗೆದ್ದವರು ಹಿಗ್ಗ ಬಾರದು,ಸ್ಪರ್ಧೆಯಲ್ಲಿ ಸೋಲು,ಗೆಲುವು ಎನ್ನುವುದು ಸರ್ವೆ ಸಾಮಾನ್ಯ,ವೇದಿಕೆಯನ್ನು ಸಮರ್ಥ ರೀತಿಯಲ್ಲಿ ಉಪಯೋಗಿಸಿಕೊಳ್ಳುವುದು ಮುಖ್ಯ ಎಲ್ಲರಿಗೂ ಶುಭವಾಗಲಿ ಎಂದು ಶುಭಹಾರೈಸಿದರು.

ಹೆಮ್ಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನೇತ್ರಾವತಿ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಈ ಸಂದರ್ಭ ಹೆಮ್ಮಾಡಿ ಪಂಚಾಯತ್ ಉಪಾಧ್ಯಕ್ಷೆ ಶೋಭಾ ಡಿ ಕಾಂಚನ್ ಮತ್ತು ಸದಸ್ಯೆ ರತ್ನಾ,ಹೆಮ್ಮಾಡಿ ಸಂಪನ್ಮೂಲ ಕೇಂದ್ರ ಶಿಕ್ಷಣ ಸಂಯೋಜಕ ಯೋಗೀಶ್,ಹಿರಿಯ ಎಸ್‌ಡಿಎಂಸಿ ಸದಸ್ಯೆ ಲೀಲಾವತಿ,ನಿವೃತ್ತ ಶಿಕ್ಷಕ ಅಣ್ಣಪ್ಪ,ಶಿಕ್ಷಕ ರವೀಂದ್ರ,ಸಿಆರ್‌ಪಿ ರಮನಾಥ್ ಮೇಸ್ತ,ಗುಜ್ಜಾಡಿ ಶಾಲೆ ಶಿಕ್ಷಕ ವಾಸುದೇವ ಬಂಗೇರ,ಜನತಾ ಪ್ರೌಢಶಾಲೆ ಶಿಕ್ಷಕ ಜಗದೀಶ್ ಶೆಟ್ಟಿ ಮತ್ತು ಪದವಿ ಕಾಲೇಜಿನ ಶಿಕ್ಷಕ ಅಭಿಜಿತ್,ದಾನಿಗಳಾದ ಹರೀಶ್ ಭಂಡಾರಿ, ಶಾಂತಾರಾಂ ಭಟ್, ಅಶೋಕ್ ಭಟ್ ಉಪಸ್ಥಿತರಿದ್ದರು.ಶಾಲೆ ಮುಖ್ಯ ಶಿಕ್ಷ ದಿವಾಕರ್ ಸ್ವಾಗತಿಸಿದರು.ಶಿಕ್ಷಣ ಸಂಯೋಜಕ ಯೋಗೀಶ್ ಪ್ರಾಸ್ತಾವಿಕವಾಗಿ ಮಾತನಾಡಿದರು.ಶಿಕ್ಷಕಿ ಒಲಂಪಿಯಾ ಮತ್ತು ರೇವತಿ ನಿರೂಪಿಸಿದರು.ಸುಪ್ರೀತಾ ವಂದಿಸಿದರು.ಪ್ರತಿಭಾ ಕಾರಂಜಿ ಸ್ಪಧೆಯಲ್ಲಿ ಭಾಗವಿಸಿದ್ದ ವಿದ್ಯಾರ್ಥಿಗಳು ವೇದಿಕೆ ಮೇಲೆ ತಮ್ಮ ಪ್ರತಿಭೆಯನ್ನು ಅನಾವರಣ ಮಾಡಿದರು.

Advertisement
Advertisement

Share
Team Kundapur Times

Recent Posts

ಓರಿಯೆಂಟೆಷನ್ ಕಾರ್ಯಕ್ರಮ ಉದ್ಘಾಟನೆ:ಓದಿನಲ್ಲಿ ನಿರಂತರತೆ ಕಾಪಾಡಿಕೊಳ್ಳುವುದು ಮುಖ್ಯ-ಸಂಸ್ಥಾಪಕ ಸುಬ್ರಹ್ಮಣ್ಯ

ಕುಂದಾಪುರ:ಬ್ರಹ್ಮವಾರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ಓರಿಯೆಂಟೆಷನ್ ಕಾರ್ಯಕ್ರಮವನ್ನು ಗುರುವಾರ ಆಯೋಜಿಸಲಾಯಿತು.ಸಂಸ್ಥೆಯ ಸಂಸ್ಥಾಪಕ ಸುಬ್ರಹ್ಮಣ್ಯ ಅವರು…

17 hours ago

ಧರೆಗುರುಳಿದ ಮಹಾರಾಜ ಸ್ವಾಮಿ ದೇವಸ್ಥಾನದ ಪ್ರಾಂಗಾಣದ ಸೀಟ್ ಮಾಡು

ಕುಂದಾಪುರ:ಆರ್ಭಟಿಸಿದ ಗಾಳಿ ರಭಸಕ್ಕೆ ಬೈಂದೂರು ತಾಲೂಕಿನ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿನ ಪ್ರಾಂಗಾಣದ ಸೀಟ್ ಮಾಡು ತುಂಡು ತುಂಡಾಗಿ…

6 days ago

ಗಾಳಿ ಆರ್ಭಟಕ್ಕೆ ನಲುಗಿದ ಕುಂದಾಪ್ರ

ಕುಂದಾಪುರ:ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಬಿಸಿದ ಗಾಳಿ ಅಬ್ಬರಕ್ಕೆ ಅಕ್ಷರಹ ಸಹ ಕುಂದಾಪ್ರ ಮತ್ತು ಬೈಂದೂರು ತಾಲೂಕಿನ ಪ್ರದೇಶಗಳು…

6 days ago

ಗಾಳಿ ಅಬ್ಬರಕ್ಕೆ ಧರೆಗುರುಳಿದ ವಿದ್ಯುತ್ ಕಂಬ:50 ಕ್ಕೂ ಹೆ0ಚ್ಚು ಕಂಬಕ್ಕೆ ಹಾನಿ

ಕುಂದಾಪುರ:ಏಕಏಕಿ ಶನಿವಾರ ಸಂಜೆ ಬೀಸಿದ ಭಾರಿ ಗಾಳಿಗೆ ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗೆ ಒಳಪಟ್ಟಿರುವ ತಲ್ಲೂರು ಉಪವಿಭಾಗದ ವ್ಯಾಪ್ತಿಯಲ್ಲಿನ ಹೆಮ್ಮಾಡಿ,ದೇವಲ್ಕುಂದ,ಆಲೂರು,ಬಡಾಕೆರೆ,ಗಂಗೊಳ್ಳಿ…

6 days ago

ಸ್ಮಶಾನಕ್ಕೆ ದಾರಿ ಕಲ್ಪಿಸುವಂತೆ ಆಗ್ರಹಿಸಿ ಗುಜ್ಜಾಡಿ ಪಂಚಾಯಿತಿ ಎದುರು ಆಹೋರಾತ್ರಿ ಧರಣಿ ಸತ್ಯಾಗ್ರಹ

ಕುಂದಾಪುರ:ತಾಲೂಕಿನ ಗುಜ್ಜಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಚುಗೋಡು ಸನ್ಯಾಸಿಬಲ್ಲೆ ಸ್ಮಶಾನ ಹಾಗೂ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಅನಾದಿ ಕಾಲದ ರಸ್ತೆಯನ್ನು…

2 weeks ago

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

1 month ago