ಕುಂದಾಪುರ

ಹೆಮ್ಮಾಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಉದ್ಘಾಟನಾ ಸಮಾರಂಭ

Share

Advertisement
Advertisement

ಕುಂದಾಪುರ:ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು,ಸಮೂಹ ಸಂಪನ್ಮೂಲ ಕೇಂದ್ರ ಹೆಮ್ಮಾಡಿ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಹೆಮ್ಮಾಡಿ ಶಾಲೆಯಲ್ಲಿ ಹೆಮ್ಮಾಡಿ ಕ್ಲಸ್ಟರ್ ಮಟ್ಟದ ಕಿರಿಯ,ಹಿರಿಯ ಮತ್ತು ಪ್ರೌಢ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ ಶನಿವಾರ ಅದ್ದೂರಿಯಾಗಿ ನಡೆಯಿತು.

Advertisement

ನಿವೃತ್ತ ಮುಖ್ಯೋಪಾಧ್ಯಾಯರಾದ ಶಂಕರ ಮಡಿವಾಳ ಅವರು ಪ್ರತಿಭಾ ಕಾರಂಜಿ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿ,ಪುಟ್ಟ ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತಲು ಪ್ರತಿಭಾ ಕಾರಂಜಿ ಅಂತಹ ಸ್ಪರ್ಧೆಗಳು ಉತ್ತಮವಾದ ವೇದಿಕೆ ಆಗಿದೆ.ಪಾಠದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳು ಭಾಗವಹಿಸುವುದರಿಂದ ವಿದ್ಯಾರ್ಥಿ ಜೀವನದಲ್ಲಿ ಎದುರಾಗುವ ಸವಾಲುಗಳನ್ನು ನಿಭಾಯಿಸಲು ಬಹಳಷ್ಟು ಅನುಕೂಲವಾಗುತ್ತದೆ.ಕಲೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು ಮಕ್ಕಳಿಗೆ ಪೋಷಕರು ಪ್ರೋತ್ಸಾಹ ನೀಡಬೇಕು ಎಂದರು.

ಶಾಲಾ ಮುಖ್ಯೋಪಾಧ್ಯಾಯರಾದ ದಿವಾಕರ್ ಮಾಸ್ಟರ್ ಮಾತನಾಡಿ,ಹೆಮ್ಮಾಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕಿರಿಯ,ಹಿರಿಯ ಮತ್ತು ಪ್ರೌಢಶಾಲಾ ವಿಭಾಗದ ಸುಮಾರು 14 ಶಾಲೆಯ ವಿದ್ಯಾರ್ಥಿಗಳು ಭಾಗವಿಹಿಸಿದ್ದಾರೆ.ನಮ್ಮ ಶಾಲೆಯಲ್ಲಿ ನಡೆಯುತ್ತಿರುವ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಊರಿನ ದಾನಿಗಳು ಸೇರಿದಂತೆ ಹಲವಾರು ಜನ ಪ್ರತ್ಯಕ್ಷವಾಗಿ ಪರೋಕ್ಷವಾಗಿ ಸಹಕಾರವನ್ನು ನೀಡಿದ್ದಾರೆ.ಸೋತವರು ಕುಗ್ಗದೆ,ಗೆದ್ದವರು ಹಿಗ್ಗ ಬಾರದು,ಸ್ಪರ್ಧೆಯಲ್ಲಿ ಸೋಲು,ಗೆಲುವು ಎನ್ನುವುದು ಸರ್ವೆ ಸಾಮಾನ್ಯ,ವೇದಿಕೆಯನ್ನು ಸಮರ್ಥ ರೀತಿಯಲ್ಲಿ ಉಪಯೋಗಿಸಿಕೊಳ್ಳುವುದು ಮುಖ್ಯ ಎಲ್ಲರಿಗೂ ಶುಭವಾಗಲಿ ಎಂದು ಶುಭಹಾರೈಸಿದರು.

ಹೆಮ್ಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನೇತ್ರಾವತಿ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಈ ಸಂದರ್ಭ ಹೆಮ್ಮಾಡಿ ಪಂಚಾಯತ್ ಉಪಾಧ್ಯಕ್ಷೆ ಶೋಭಾ ಡಿ ಕಾಂಚನ್ ಮತ್ತು ಸದಸ್ಯೆ ರತ್ನಾ,ಹೆಮ್ಮಾಡಿ ಸಂಪನ್ಮೂಲ ಕೇಂದ್ರ ಶಿಕ್ಷಣ ಸಂಯೋಜಕ ಯೋಗೀಶ್,ಹಿರಿಯ ಎಸ್‌ಡಿಎಂಸಿ ಸದಸ್ಯೆ ಲೀಲಾವತಿ,ನಿವೃತ್ತ ಶಿಕ್ಷಕ ಅಣ್ಣಪ್ಪ,ಶಿಕ್ಷಕ ರವೀಂದ್ರ,ಸಿಆರ್‌ಪಿ ರಮನಾಥ್ ಮೇಸ್ತ,ಗುಜ್ಜಾಡಿ ಶಾಲೆ ಶಿಕ್ಷಕ ವಾಸುದೇವ ಬಂಗೇರ,ಜನತಾ ಪ್ರೌಢಶಾಲೆ ಶಿಕ್ಷಕ ಜಗದೀಶ್ ಶೆಟ್ಟಿ ಮತ್ತು ಪದವಿ ಕಾಲೇಜಿನ ಶಿಕ್ಷಕ ಅಭಿಜಿತ್,ದಾನಿಗಳಾದ ಹರೀಶ್ ಭಂಡಾರಿ, ಶಾಂತಾರಾಂ ಭಟ್, ಅಶೋಕ್ ಭಟ್ ಉಪಸ್ಥಿತರಿದ್ದರು.ಶಾಲೆ ಮುಖ್ಯ ಶಿಕ್ಷ ದಿವಾಕರ್ ಸ್ವಾಗತಿಸಿದರು.ಶಿಕ್ಷಣ ಸಂಯೋಜಕ ಯೋಗೀಶ್ ಪ್ರಾಸ್ತಾವಿಕವಾಗಿ ಮಾತನಾಡಿದರು.ಶಿಕ್ಷಕಿ ಒಲಂಪಿಯಾ ಮತ್ತು ರೇವತಿ ನಿರೂಪಿಸಿದರು.ಸುಪ್ರೀತಾ ವಂದಿಸಿದರು.ಪ್ರತಿಭಾ ಕಾರಂಜಿ ಸ್ಪಧೆಯಲ್ಲಿ ಭಾಗವಿಸಿದ್ದ ವಿದ್ಯಾರ್ಥಿಗಳು ವೇದಿಕೆ ಮೇಲೆ ತಮ್ಮ ಪ್ರತಿಭೆಯನ್ನು ಅನಾವರಣ ಮಾಡಿದರು.

Advertisement
Advertisement

Share
Team Kundapur Times

Recent Posts

ಕಿರಿಮಂಜೇಶ್ವರ ಶ್ರೀ ಅಗಸ್ತೇಶ್ವರ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಉತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ಪ್ರಸಿದ್ಧ ಶ್ರೀ ಅಗಸ್ತೇಶ್ವರ ಶ್ರೀ ಮಹಾಗಣಪತಿ ಶ್ರೀ ವಿಶಾಲಾಕ್ಷಿ ಅಮ್ಮನವರ ದೇವಸ್ಥಾನ ಕಿರಿಮಂಜೇಶ್ವರದಲ್ಲಿ ಶ್ರೀ ಗಣೇಶ ಚತುರ್ಥಿ…

18 hours ago

ಶ್ರೀ ಪ್ರಸನ್ನ ಗಣಪತಿ ದೇವಸ್ಥಾನ ಉಪ್ಕಲ್‍ಮಠ ನಾಡ:ಗಣೇಶೋತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ನಾಡ ಉಪ್ಕಲ್ ಮಠ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ 35ನೇ ವರ್ಷದ ಗಣಪತಿ ಉತ್ಸವ ಕಾರ್ಯಕ್ರಮ ನಾನಾ…

18 hours ago

ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ತೈಲ ಸೋರಿಕೆ:ಹಲವು ದ್ವಿಚಕ್ರ ವಾಹನಗಳು ಪಲ್ಟಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿಉಡುಪಿ ಕಡೆಯಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ತೈಲ ವಾಹನದಿಂದ ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಸ್ತೆ…

19 hours ago

ಶ್ರೀ ದುರ್ಗಾ ಹಾರ್ಡ್ ವೇರ್ ತಲ್ಲೂರಿನಲ್ಲಿ ಶುಭಾರಂಭ

ಕುಂದಾಪುರ:ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಬಳಿ ಬ್ಯಾಂಕ್ ಆಫ್ ಬರೋಡ ಎದುರುಗಡೆ ಇರುವ ಶ್ರೀ ಬ್ರಾಹ್ಮಿ ದುರ್ಗಾ ಕಾಂಪ್ಲೆಕ್ಸ್…

23 hours ago

ತಿಮಿಂಗಿಲ ಮೀನಿನ ಕಳೆಬರ ಪತ್ತೆ

ಕುಂದಾಪುರ:ತಾಲೂಕಿನ ಗಂಗೊಳ್ಳಿ ಮಡಿ ಲೈಟ್‍ಹೌಸ್ ಕಡಲ ತೀರದಲ್ಲಿ ಮೃತ ತಿಮಿಂಗಿಲ ಮೀನಿನ ಕಳೆಬರ ಮಂಗಳವಾರ ಪತ್ತೆಯಾಗಿದೆ.ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ…

3 days ago

ವಲಯ ಅರಣ್ಯಾಧಿಕಾರಿ ಸವಿತಾ ಆರ್ ದೇವಾಡಿಗಗೆ ಮುಖ್ಯಮಂತ್ರಿ ಪದಕ

ಕುಂದಾಪುರ:ಹೊನ್ನಾವರದಲ್ಲಿ ವಲಯ ಅರಣ್ಯಾಧಿಕಾರಿ ಆಗಿ ಸೇವೆ ಸಲ್ಲಿಸುತ್ತಿರುವ ಸವಿತಾ ಆರ್ ದೇವಾಡಿಗ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದಕ…

4 days ago