ಕುಂದಾಪುರ

ಹೆಮ್ಮಾಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಉದ್ಘಾಟನಾ ಸಮಾರಂಭ

Share

ಕುಂದಾಪುರ:ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು,ಸಮೂಹ ಸಂಪನ್ಮೂಲ ಕೇಂದ್ರ ಹೆಮ್ಮಾಡಿ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಹೆಮ್ಮಾಡಿ ಶಾಲೆಯಲ್ಲಿ ಹೆಮ್ಮಾಡಿ ಕ್ಲಸ್ಟರ್ ಮಟ್ಟದ ಕಿರಿಯ,ಹಿರಿಯ ಮತ್ತು ಪ್ರೌಢ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ ಶನಿವಾರ ಅದ್ದೂರಿಯಾಗಿ ನಡೆಯಿತು.

ನಿವೃತ್ತ ಮುಖ್ಯೋಪಾಧ್ಯಾಯರಾದ ಶಂಕರ ಮಡಿವಾಳ ಅವರು ಪ್ರತಿಭಾ ಕಾರಂಜಿ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿ,ಪುಟ್ಟ ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತಲು ಪ್ರತಿಭಾ ಕಾರಂಜಿ ಅಂತಹ ಸ್ಪರ್ಧೆಗಳು ಉತ್ತಮವಾದ ವೇದಿಕೆ ಆಗಿದೆ.ಪಾಠದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳು ಭಾಗವಹಿಸುವುದರಿಂದ ವಿದ್ಯಾರ್ಥಿ ಜೀವನದಲ್ಲಿ ಎದುರಾಗುವ ಸವಾಲುಗಳನ್ನು ನಿಭಾಯಿಸಲು ಬಹಳಷ್ಟು ಅನುಕೂಲವಾಗುತ್ತದೆ.ಕಲೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು ಮಕ್ಕಳಿಗೆ ಪೋಷಕರು ಪ್ರೋತ್ಸಾಹ ನೀಡಬೇಕು ಎಂದರು.

ಶಾಲಾ ಮುಖ್ಯೋಪಾಧ್ಯಾಯರಾದ ದಿವಾಕರ್ ಮಾಸ್ಟರ್ ಮಾತನಾಡಿ,ಹೆಮ್ಮಾಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕಿರಿಯ,ಹಿರಿಯ ಮತ್ತು ಪ್ರೌಢಶಾಲಾ ವಿಭಾಗದ ಸುಮಾರು 14 ಶಾಲೆಯ ವಿದ್ಯಾರ್ಥಿಗಳು ಭಾಗವಿಹಿಸಿದ್ದಾರೆ.ನಮ್ಮ ಶಾಲೆಯಲ್ಲಿ ನಡೆಯುತ್ತಿರುವ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಊರಿನ ದಾನಿಗಳು ಸೇರಿದಂತೆ ಹಲವಾರು ಜನ ಪ್ರತ್ಯಕ್ಷವಾಗಿ ಪರೋಕ್ಷವಾಗಿ ಸಹಕಾರವನ್ನು ನೀಡಿದ್ದಾರೆ.ಸೋತವರು ಕುಗ್ಗದೆ,ಗೆದ್ದವರು ಹಿಗ್ಗ ಬಾರದು,ಸ್ಪರ್ಧೆಯಲ್ಲಿ ಸೋಲು,ಗೆಲುವು ಎನ್ನುವುದು ಸರ್ವೆ ಸಾಮಾನ್ಯ,ವೇದಿಕೆಯನ್ನು ಸಮರ್ಥ ರೀತಿಯಲ್ಲಿ ಉಪಯೋಗಿಸಿಕೊಳ್ಳುವುದು ಮುಖ್ಯ ಎಲ್ಲರಿಗೂ ಶುಭವಾಗಲಿ ಎಂದು ಶುಭಹಾರೈಸಿದರು.

ಹೆಮ್ಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನೇತ್ರಾವತಿ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಈ ಸಂದರ್ಭ ಹೆಮ್ಮಾಡಿ ಪಂಚಾಯತ್ ಉಪಾಧ್ಯಕ್ಷೆ ಶೋಭಾ ಡಿ ಕಾಂಚನ್ ಮತ್ತು ಸದಸ್ಯೆ ರತ್ನಾ,ಹೆಮ್ಮಾಡಿ ಸಂಪನ್ಮೂಲ ಕೇಂದ್ರ ಶಿಕ್ಷಣ ಸಂಯೋಜಕ ಯೋಗೀಶ್,ಹಿರಿಯ ಎಸ್‌ಡಿಎಂಸಿ ಸದಸ್ಯೆ ಲೀಲಾವತಿ,ನಿವೃತ್ತ ಶಿಕ್ಷಕ ಅಣ್ಣಪ್ಪ,ಶಿಕ್ಷಕ ರವೀಂದ್ರ,ಸಿಆರ್‌ಪಿ ರಮನಾಥ್ ಮೇಸ್ತ,ಗುಜ್ಜಾಡಿ ಶಾಲೆ ಶಿಕ್ಷಕ ವಾಸುದೇವ ಬಂಗೇರ,ಜನತಾ ಪ್ರೌಢಶಾಲೆ ಶಿಕ್ಷಕ ಜಗದೀಶ್ ಶೆಟ್ಟಿ ಮತ್ತು ಪದವಿ ಕಾಲೇಜಿನ ಶಿಕ್ಷಕ ಅಭಿಜಿತ್,ದಾನಿಗಳಾದ ಹರೀಶ್ ಭಂಡಾರಿ, ಶಾಂತಾರಾಂ ಭಟ್, ಅಶೋಕ್ ಭಟ್ ಉಪಸ್ಥಿತರಿದ್ದರು.ಶಾಲೆ ಮುಖ್ಯ ಶಿಕ್ಷ ದಿವಾಕರ್ ಸ್ವಾಗತಿಸಿದರು.ಶಿಕ್ಷಣ ಸಂಯೋಜಕ ಯೋಗೀಶ್ ಪ್ರಾಸ್ತಾವಿಕವಾಗಿ ಮಾತನಾಡಿದರು.ಶಿಕ್ಷಕಿ ಒಲಂಪಿಯಾ ಮತ್ತು ರೇವತಿ ನಿರೂಪಿಸಿದರು.ಸುಪ್ರೀತಾ ವಂದಿಸಿದರು.ಪ್ರತಿಭಾ ಕಾರಂಜಿ ಸ್ಪಧೆಯಲ್ಲಿ ಭಾಗವಿಸಿದ್ದ ವಿದ್ಯಾರ್ಥಿಗಳು ವೇದಿಕೆ ಮೇಲೆ ತಮ್ಮ ಪ್ರತಿಭೆಯನ್ನು ಅನಾವರಣ ಮಾಡಿದರು.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

1 month ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

1 month ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

3 months ago