ಕುಂದಾಪುರ:ಗುಜ್ಜಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಲೈಟ್ಹೌಸ್ ಮಡಿ ಪರಿಸರದಲ್ಲಿ ಕಡಲ ಅಲೆಗೆ ಸಿಲುಕಿ ಮೃತಪಟ್ಟು ತೆರೆಗಳ ನಡುವೆ ತೆಲುತ್ತಿದ್ದ ಅಪರೂಪದ ಜಾತಿಗೆ ಸೇರಿದ ಕಡಲಾಮೆ ಶುಕ್ರವಾರ ಪತ್ತೆಯಾಗಿದೆ.
ಮೀನುಗಾರ ನಾಗರಾಜ್ ಖಾರ್ವಿ ಸಮುದ್ರಕ್ಕೆ ಮೀನುಗಾರಿಕೆ ತೆರಳಿದ ಸಂದರ್ಭ ಅಲೆಗಳ ಮಧ್ಯೆ ಕಡಲಾಮೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ ಆಗಿದೆ.ಮೃತ ಕಡಲಾಮೆಯನ್ನು ಅವರು ತಮ್ಮ ಮರ್ಗಿ ಪಾತಿ ದೋಣಿಯಲ್ಲಿ ದಡಕ್ಕೆ ತಂದಿದ್ದರು.ಅತಿಯಾದ ವಾಸನೆಯಿಂದ ಕೂಡಿದ ಕಡಲಾಮೆಯನ್ನು ಬಳಿಕ ಸ್ಥಳೀಯರ ಸಹಕಾರದಿಂದ ಮಣ್ಣಿನಲ್ಲಿ ಹೂಳಲಾಯಿತು.
ಕಡಲಾಮೆ ಸಮುದ್ರದಲ್ಲಿ ಮತ್ಸö್ಯ ಸಂಪತ್ತನ್ನು ಸಂರಕ್ಷಣೆ ಮಾಡುವುದಲ್ಲದೆ ಮೀನುಗಳು ಸಮುದ್ರ ತೀರ ಪ್ರದೇಶಕ್ಕೆ ಬರುವಂತೆ ಸಹಾಯ ಮಾಡುತ್ತವೆ.ಮೀನುಗಾರರು ಕಡಲಾಮೆಗಳನ್ನು ಪೂಜನೀಯ ಭಾವನೆಯಲ್ಲಿ ನೋಡುತ್ತಾರೆ ಎಂದು ಮೀನುಗಾರರಾದ ವಿಶ್ವನಾಥ್ ಗಂಗೊಳ್ಳಿ ಹೇಳಿದರು.
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಶಕಟಪುರ ಶ್ರೀ ವಿದ್ಯಾಪೀಠಾಧೀಶ್ವರ ಶ್ರೀ ಜಗದ್ಗುರು ಬದರೀಶಂಕರಾಚಾರ್ಯ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ವಾರ್ಷಿಕೋತ್ಸವ "ಐಕ್ಯಂ" 2025 ಅದ್ದೂರಿಯಿಂದ ನಡೆಯಿತು.ವಿಭಿನ್ನ ರೀತಿಯ ನೃತ್ಯ, ಸಂಗೀತದಿಂದ ಹಾಗೂ ಕಾಲೇಜಿನ ವಿದ್ಯಾರ್ಥಿಗಳೇ…
ಕುಂದಾಪುರ:ಸಾಮಾಜಿಕ ಧಾರ್ಮಿಕ ಶೈಕ್ಷಣಿಕ ಕಾರ್ಯಗಳೊಂದಿಗೆ ಊರಿನ ಅಭಿವೃದ್ಧಿಗೆ ಶ್ರಮಿಸುತ್ತಿರುವ ಯುವಕ ಮಂಡಲದ ಕಾರ್ಯ ಇತರ ಸಂಘಟನೆಗಳಿಗೆ ಮಾದರಿ ಆಗಿದೆ ಎಂದು…
ಉಡುಪಿ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ವಿದ್ಯಾರ್ಥಿಗಳಿಂದ ಉಡುಪಿ ಕೃಷ್ಣ ಮಠದ ರಾಜಾಂಗಣದಲ್ಲಿ ಭರತ ನಾಟ್ಯ ಪ್ರದರ್ಶನ ನಡೆಯಿತು.ವಿದ್ಯಾರ್ಥಿಗಳು ಹೆಜ್ಞೆ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮಹಾತ್ಮ ಗಾಂಧಿ ಮೈದಾನ ಅಜ್ಜರಕಾಡುನಲ್ಲಿ ಜರುಗಿತು.ಹಿರಿಯ ದೈಹಿಕ ನಿರ್ದೇಶಕ ಯುನೈಟೆಡ್ ಉಡುಪಿ…
ಕುಂದಾಪುರ:ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶವಿದ್ದು,ಇಲ್ಲಿಗೆ ಬರುವಂತೆ ಸಂಸದರು, ಶಾಸಕರು ಮನವಿ ಮಾಡಿದ್ದರು. ಆ ಹಿನ್ನೆಲೆಯಲ್ಲಿ ಈ ಭಾಗದ ಪ್ರವಾಸೋದ್ಯಮ…