ಕುಂದಾಪುರ:ಗುಜ್ಜಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಲೈಟ್ಹೌಸ್ ಮಡಿ ಪರಿಸರದಲ್ಲಿ ಕಡಲ ಅಲೆಗೆ ಸಿಲುಕಿ ಮೃತಪಟ್ಟು ತೆರೆಗಳ ನಡುವೆ ತೆಲುತ್ತಿದ್ದ ಅಪರೂಪದ ಜಾತಿಗೆ ಸೇರಿದ ಕಡಲಾಮೆ ಶುಕ್ರವಾರ ಪತ್ತೆಯಾಗಿದೆ.
ಮೀನುಗಾರ ನಾಗರಾಜ್ ಖಾರ್ವಿ ಸಮುದ್ರಕ್ಕೆ ಮೀನುಗಾರಿಕೆ ತೆರಳಿದ ಸಂದರ್ಭ ಅಲೆಗಳ ಮಧ್ಯೆ ಕಡಲಾಮೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ ಆಗಿದೆ.ಮೃತ ಕಡಲಾಮೆಯನ್ನು ಅವರು ತಮ್ಮ ಮರ್ಗಿ ಪಾತಿ ದೋಣಿಯಲ್ಲಿ ದಡಕ್ಕೆ ತಂದಿದ್ದರು.ಅತಿಯಾದ ವಾಸನೆಯಿಂದ ಕೂಡಿದ ಕಡಲಾಮೆಯನ್ನು ಬಳಿಕ ಸ್ಥಳೀಯರ ಸಹಕಾರದಿಂದ ಮಣ್ಣಿನಲ್ಲಿ ಹೂಳಲಾಯಿತು.
ಕಡಲಾಮೆ ಸಮುದ್ರದಲ್ಲಿ ಮತ್ಸö್ಯ ಸಂಪತ್ತನ್ನು ಸಂರಕ್ಷಣೆ ಮಾಡುವುದಲ್ಲದೆ ಮೀನುಗಳು ಸಮುದ್ರ ತೀರ ಪ್ರದೇಶಕ್ಕೆ ಬರುವಂತೆ ಸಹಾಯ ಮಾಡುತ್ತವೆ.ಮೀನುಗಾರರು ಕಡಲಾಮೆಗಳನ್ನು ಪೂಜನೀಯ ಭಾವನೆಯಲ್ಲಿ ನೋಡುತ್ತಾರೆ ಎಂದು ಮೀನುಗಾರರಾದ ವಿಶ್ವನಾಥ್ ಗಂಗೊಳ್ಳಿ ಹೇಳಿದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…