ಸಂಸದ ಬಿ.ವೈ ರಾಘವೇಂದ್ರ ಬೈಂದೂರು ಕ್ಷೇತ್ರಕ್ಕೆ ಭೇಟಿ- ಶಾಸಕರು,ಅಧಿಕಾರಿಗಳೊಂದಿಗೆ ಸಭೆ
![](https://kundapurtimes.com/wp-content/uploads/2023/09/byr-2-1024x576.jpeg)
![](https://kundapurtimes.com/wp-content/uploads/2023/09/byr-3-1024x576.jpeg)
ಬೈಂದೂರು:ಸಮಗ್ರ ಬೈಂದೂರು ಅಭಿವೃದ್ಧಿ ಕುರಿತು ಹಾಗೂ ಪ್ರಗತಿ ಪರಿಶೀಲನಾ ಸಭೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ಅವರ ನೇತೃತ್ವದಲ್ಲಿ ಶಾಸಕರ ಕಛೇರಿಯಲ್ಲಿ ಸೋಮವಾರ ನಡೆಯಿತು.ಬೈಂದೂರು ಕ್ಷೇತ್ರಕ್ಕೆ ಭೇಟಿ ನೀಡಿದ ಸಂಸದರು ಶಾಸಕರುಗಳು ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿ ಬೈಂದೂರು ಕ್ಷೇತ್ರದ ಸಮಗ್ರ ಅಭಿವೃದ್ಧಿ ಕುರಿತು ಹಾಗೂ ಮನೆ ಮನೆಗೆ ಶುದ್ದ ಕುಡಿಯುವ ನೀರಿನ ಯೋಜನೆ,ಮರವಂತೆ ಹೊರಬಂದರು ಹಾಗೂ ಗಂಗೊಳ್ಳಿ ಜಟ್ಟಿ ಅಭಿವೃದ್ಧಿ, ತ್ರಾಸಿ- ಮರವಂತೆ ಮತ್ತು ಸೋಮೇಶ್ವರ ಬೀಚ್ ಅಭಿವೃದ್ಧಿ,ಗೋಮಾಳಗಳ ಅಳತೆ ಜೊತೆಗೆ ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಚರ್ಚಿಸಿದರು.ಈ ಸಂದರ್ಭದಲ್ಲಿ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ,ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ, ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ,ಸುರೇಶ್ ಶೆಟ್ಟಿ ಉಪ್ಪುಂದ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ,ವಿವಿಧ ಇಲಾಖೆ ಅಧಿಕಾರಿಗಳು ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
ಬೈಂದೂರು – ಉಪ್ಪುಂದದಲ್ಲಿರುವ ಕಾರ್ಯಕರ್ತ ಕಛೇರಿಗೆ ಭೇಟಿ ನೀಡಿದ ಸಂಸದ ಬಿ.ವೈ ರಾಘವೇಂದ್ರ ಅವರು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕಾರ ಮಾಡಿದರು.ಈ ಸಂದರ್ಭದಲ್ಲಿ ವಿಕಲ ಚೇತನರಿಗೆ ವಿದ್ಯುತ್ ಚಾಲಿತ ವೀಲ್ ಚೇರ್ ಅನ್ನು ಹಸ್ತಾಂತರಿಸಿದರು.
![](https://kundapurtimes.com/wp-content/uploads/2023/09/WhatsApp-Image-2023-09-11-at-9.10.17-PM.jpeg)