ಬೈಂದೂರು:ಸಮಗ್ರ ಬೈಂದೂರು ಅಭಿವೃದ್ಧಿ ಕುರಿತು ಹಾಗೂ ಪ್ರಗತಿ ಪರಿಶೀಲನಾ ಸಭೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ಅವರ ನೇತೃತ್ವದಲ್ಲಿ ಶಾಸಕರ ಕಛೇರಿಯಲ್ಲಿ ಸೋಮವಾರ ನಡೆಯಿತು.ಬೈಂದೂರು ಕ್ಷೇತ್ರಕ್ಕೆ ಭೇಟಿ ನೀಡಿದ ಸಂಸದರು ಶಾಸಕರುಗಳು ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿ ಬೈಂದೂರು ಕ್ಷೇತ್ರದ ಸಮಗ್ರ ಅಭಿವೃದ್ಧಿ ಕುರಿತು ಹಾಗೂ ಮನೆ ಮನೆಗೆ ಶುದ್ದ ಕುಡಿಯುವ ನೀರಿನ ಯೋಜನೆ,ಮರವಂತೆ ಹೊರಬಂದರು ಹಾಗೂ ಗಂಗೊಳ್ಳಿ ಜಟ್ಟಿ ಅಭಿವೃದ್ಧಿ, ತ್ರಾಸಿ- ಮರವಂತೆ ಮತ್ತು ಸೋಮೇಶ್ವರ ಬೀಚ್ ಅಭಿವೃದ್ಧಿ,ಗೋಮಾಳಗಳ ಅಳತೆ ಜೊತೆಗೆ ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಚರ್ಚಿಸಿದರು.ಈ ಸಂದರ್ಭದಲ್ಲಿ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ,ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ, ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ,ಸುರೇಶ್ ಶೆಟ್ಟಿ ಉಪ್ಪುಂದ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ,ವಿವಿಧ ಇಲಾಖೆ ಅಧಿಕಾರಿಗಳು ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
ಬೈಂದೂರು – ಉಪ್ಪುಂದದಲ್ಲಿರುವ ಕಾರ್ಯಕರ್ತ ಕಛೇರಿಗೆ ಭೇಟಿ ನೀಡಿದ ಸಂಸದ ಬಿ.ವೈ ರಾಘವೇಂದ್ರ ಅವರು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕಾರ ಮಾಡಿದರು.ಈ ಸಂದರ್ಭದಲ್ಲಿ ವಿಕಲ ಚೇತನರಿಗೆ ವಿದ್ಯುತ್ ಚಾಲಿತ ವೀಲ್ ಚೇರ್ ಅನ್ನು ಹಸ್ತಾಂತರಿಸಿದರು.
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…