ಬೈಂದೂರು:ಸಮಗ್ರ ಬೈಂದೂರು ಅಭಿವೃದ್ಧಿ ಕುರಿತು ಹಾಗೂ ಪ್ರಗತಿ ಪರಿಶೀಲನಾ ಸಭೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ಅವರ ನೇತೃತ್ವದಲ್ಲಿ ಶಾಸಕರ ಕಛೇರಿಯಲ್ಲಿ ಸೋಮವಾರ ನಡೆಯಿತು.ಬೈಂದೂರು ಕ್ಷೇತ್ರಕ್ಕೆ ಭೇಟಿ ನೀಡಿದ ಸಂಸದರು ಶಾಸಕರುಗಳು ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿ ಬೈಂದೂರು ಕ್ಷೇತ್ರದ ಸಮಗ್ರ ಅಭಿವೃದ್ಧಿ ಕುರಿತು ಹಾಗೂ ಮನೆ ಮನೆಗೆ ಶುದ್ದ ಕುಡಿಯುವ ನೀರಿನ ಯೋಜನೆ,ಮರವಂತೆ ಹೊರಬಂದರು ಹಾಗೂ ಗಂಗೊಳ್ಳಿ ಜಟ್ಟಿ ಅಭಿವೃದ್ಧಿ, ತ್ರಾಸಿ- ಮರವಂತೆ ಮತ್ತು ಸೋಮೇಶ್ವರ ಬೀಚ್ ಅಭಿವೃದ್ಧಿ,ಗೋಮಾಳಗಳ ಅಳತೆ ಜೊತೆಗೆ ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಚರ್ಚಿಸಿದರು.ಈ ಸಂದರ್ಭದಲ್ಲಿ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ,ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ, ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ,ಸುರೇಶ್ ಶೆಟ್ಟಿ ಉಪ್ಪುಂದ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ,ವಿವಿಧ ಇಲಾಖೆ ಅಧಿಕಾರಿಗಳು ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
ಬೈಂದೂರು – ಉಪ್ಪುಂದದಲ್ಲಿರುವ ಕಾರ್ಯಕರ್ತ ಕಛೇರಿಗೆ ಭೇಟಿ ನೀಡಿದ ಸಂಸದ ಬಿ.ವೈ ರಾಘವೇಂದ್ರ ಅವರು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕಾರ ಮಾಡಿದರು.ಈ ಸಂದರ್ಭದಲ್ಲಿ ವಿಕಲ ಚೇತನರಿಗೆ ವಿದ್ಯುತ್ ಚಾಲಿತ ವೀಲ್ ಚೇರ್ ಅನ್ನು ಹಸ್ತಾಂತರಿಸಿದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…