ಕುಂದಾಪುರ

ಸೌಪರ್ಣಿಕಾ ನದಿಯಲ್ಲಿ ಅಕ್ರಮ ಮರಳುಗಾರಿಕೆ:ಆರೋಪಿಗಳು ವಶಕ್ಕೆ

Share

ಕುಂದಾಪುರ:ಯಾವುದೇ ರೀತಿ ಪರವಾನಗಿ ಪಡೆಯದೆ ಕುಂದಾಪುರ ತಾಲೂಕಿನ ತ್ರಾಸಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊವಾಡಿ ಗಂಡ್‍ಬೇರು ಸೌಪರ್ಣಿಕಾ ನದಿಯಲ್ಲಿ ತಡರಾತ್ರಿ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದ ಆರೋಪಿಗಳಾದ ಆಲ್ಟನ್ ಆನಗೋಡು(42),ಉತ್ತರ ಪ್ರದೇಶ ರಾಜ್ಯದ ನಿವಾಸಿಗಳಾದ ಮೈನೇಜರ್ (30) ಮತ್ತು ದಿನೇಶ (22)ಜಿತೇಂದ್ರ ಕುಮಾರ್ (25),ಗುದ್ದು ಕುಮಾರ (20) ಎನ್ನುವ ವ್ಯಕ್ತಿಗಳನ್ನು ಗಂಗೊಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ರಾತ್ರಿ ಸಮಯದಲ್ಲಿ ಸೌಪರ್ಣಿಕಾ ನದಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ ಎನ್ನುವ ಕ್ಲಪ್ತ ಮಾಹಿತಿ ಮೇರೆಗೆ ಗಂಗೊಳ್ಳಿ ಪೊಲೀಸ್ ಠಾಣೆಯ ಪಿಎಸ್‍ಐ ಹರೀಶ್ ಆರ್ ನಾಯ್ಕ್ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ದಾಳಿ ನಡೆಸಿ ಮರಳುಗಾರಿಕೆಗೆ ಬಳಸುತ್ತಿದ್ದ ಅಂದಾಜು 2.ಲ್ಷಕ.ರೂ ಮೌಲ್ಯದ ಪ್ಲೈವುಡ್ ಪೈಬರ್ ಕೋಟ್ ದೋಣಿ 02 ಹಾಗೂ 2000.ರೂ ಮೌಲ್ಯದ ಪ್ಲಾಸ್ಟಿಕ್ ಬುಟ್ಟಿ 08,ಅಂದಾಜು 1,800.ರೂ ಮೌಲ್ಯದ ಕಬ್ಬಿಣದ ಬಕೆಟ್ 06,200.ರೂ ಮೌಲ್ಯದ ಮರದ ಹಲಗೆ,ಅಂದಾಜು 6000.ರೂ ಮೌಲ್ಯದ ಕಬ್ಬಿಣದ ಸ್ಟ್ಯಾಂಡ್ 01 ಮತ್ತು ಅಂದಾಜು 3,500.ರೂ ಮೌಲ್ಯದ ಒಂದು ಯೂನಿಟ್ ಮರಳು ಸಹಿತ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.ಘಟನೆಯ ಸ್ಥಳದಲ್ಲಿ ಹಾಜರಿದ್ದ ಪಂಚರ ಸಮಕ್ಷಮ ಮಹಜರು ಮುಖೇನ ವಸ್ತುಗಳನ್ನು ಸ್ವಾಧೀನಪಡಿಸಿಕೊಂಡು ಕಾನೂನು ಕ್ರಮವನ್ನು ಪೆÇಲೀಸರು ಕೈಗೊಂಡಿದ್ದಾರೆ.ಈ ಸಂಬಂಧ ಪ್ರಕರಣ ದಾಖಲಾಗಿದೆ.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

2 months ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

4 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago