ಜುಗಾರಿ ಅಡ್ಡಕ್ಕೆ ಪೊಲೀಸ್ ದಾಳಿ,ನಗದು ವಶಕ್ಕೆ

Share

Advertisement
Advertisement

ಕುಂದಾಪುರ:ಬೈಂದೂರು ವಿಧಾನಸಭೆ ಕ್ಷೇತ್ರದ ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತ್ರಾಸಿ ಗ್ರಾಮದ ಮೊವಾಡಿ ಸರಕಾರಿ ಹಾಡಿಯಲ್ಲಿ ಇಸ್ಪೀಟು ಜುಗಾರಿ ನಡೆಯುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಗಂಗೊಳ್ಳಿ ಪೊಲೀಸ್ ಠಾಣೆಯ ಪಿಎಸ್‍ಐ ಹರೀಶ್ ಆರ್ ನಾಯ್ಕ್ ಮತ್ತು ಸಿಬ್ಬಂದಿಗಳ ತಂಡ ಆಪಾದಿತರಾದ ಪ್ರಕಾಶ್ (30),ಪ್ರದೀಪ (42),ವಿಲ್ಫ್ರೆಡ್ (29),ಸಿದ್ದ (37),ಬಾಬು (60) ಎಂಬವರನ್ನು ವಶಕ್ಕೆ ಪಡೆದ ಘಟನೆ ಮಂಗಳವಾರ ನಡೆದಿದೆ.
ಮೊವಾಡಿ ಸರಕಾರಿ ಹಾಡಿಯಲ್ಲಿ ಇಸ್ಪೀಟು ಜುಗಾರಿ ನಡೆಯುತ್ತಿದ್ದ ಬಗ್ಗೆ ಮಾಹಿತಿ ಸಿಕ್ಕ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿದ ಗಂಗೊಳ್ಳಿ ಪೊಲೀಸರು ಆಪಾದಿತರು ಸಹಿತ ಜುಗಾರಿ ಕೃತ್ಯಕ್ಕೆ ಬಳಸಿದ 65,000.ರೂ ನಗದು,ಇಸ್ಪೀಟ್ ಎಲೆಗಳು 52,ನೀಲಿ ಬಣ್ಣದ ಟಾರ್ಪಲ್ 01 ಅನ್ನು ವಶಕ್ಕೆ ಪಡೆಯಲಾಗಿದೆ.ಈ ಸಂಬಂಧ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement
Advertisement


Share

Leave a comment

Your email address will not be published. Required fields are marked *

You cannot copy content of this page