ಬೈಂದೂರು:2023 ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಬೈಂದೂರು ಕ್ಷೇತ್ರದ ಟಿಕೆಟ್ ಕೊಡಿಸುದಾಗಿ ಸಮಾಜ ಸೇವಕ ಉದ್ಯಮಿ ಗೋವಿಂದ ಬಾಬು ಪೂಜಾರಿ ಎನ್ನುವ ವ್ಯಕ್ತಿಯೊಬ್ಬರಿಗೆ ಬರೊಬ್ಬರಿ 7. ಕೋಟಿ.ರೂ ವಂಚನೆ ಮಾಡಿರುವ ಪ್ರಕರಣದಡಿಯಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಅವರನ್ನು ಬಂಧಿಸಲಾಗಿದೆ.
ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ನಡೆಯುತ್ತಿದ್ದ ರಾಜಕೀಯ ಬೆಳವಣಿಗೆಯ ಲಾಭಾಂಶವನ್ನು ಬಳಸಿಕೊಳ್ಳಲು ಮುಂದಾಗಿದ್ದ ಚೈತ್ರ ಕುಂದಾಪುರ ಮತ್ತು ತಂಡ ಸಮಾಜ ಸೇವಕ ಗೋವಿಂದ ಬಾಬು ಪೂಜಾರಿ ಅವರಿಗೆ ಸುಳ್ಳು ಭರವಸೆಗಳನ್ನು ನೀಡಿ ಬೈಂದೂರು ಕ್ಷೇತ್ರದ ಟಿಕೆಟ್ ಕೊಡಿಸುದಾಗಿ ನಂಬಿಸಿ 7.ಕೋಟಿ.ರೂ ವಂಚಿಸಿದ್ದಾರೆ.ಬೆಂಗಳೂರಿನ ಬಂಡೇಪಾಳ್ಯ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನಂತೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ತಲೆ ಮರೆಸಿಕೊಂಡಿದ ಚೈತ್ರಾ ಕುಂದಾಪುರ ಮತ್ತು ತಂಡದವರನ್ನು ಬಂಧಿಸುವಲ್ಲಿ ಬೆಂಗಳೂರಿನ ಪೊಲೀಸರು ಯಶಸ್ವಿಯಾಗಿದ್ದಾರೆ.
ಮೊದಲನೇ ಆರೋಪಿಗಳಾದ ಚೈತ್ರಾ ಕುಂದಾಪುರ,ಗಗನ್ ಕಡೂರು,ಶ್ರೀಕಾಂತ್ ನಾಯಕ್ ಪೆಲತ್ತೂರು,ರಮೇಶ್ ಧನರಾಜ್ ಎಂಬ ಐವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು ಪ್ರಕರಣದಲ್ಲಿ ಭಾಗಿಯಾಗಿರುವ ಹಾಲಶ್ರೀ ಸ್ವಾಮೀಜಿ,ನಾಯ್ಕ್ ಎಂಬಾತನಿಗೆ ಪೊಲೀಸರು ಬಲೆ ಬಿಸಿದ್ದಾರೆ.ಪ್ರಸಾದ್ ಬೈಂದೂರು ಎಂಬಾತನನ್ನು ಬೆಂಗಳೂರಿಗೆ ಕರೆಸಿಕೊಂಡಿದ್ದ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.ಎಂಎಲ್ಎ ಟಿಕೆಟ್ ವಂಚನೆ ಪ್ರಕರಣದಲ್ಲಿ 8 ಜನ ಆರೋಪಿಗಳು ಭಾಗಿಯಾಗಿರುವ ವಿಷಯ ಬೆಳಕಿಗೆ ಬಂದಿದ್ದು ತನಿಖೆ ಚುರುಕು ಗೊಂಡಿದೆ,ಪೊಲೀಸ್ ತನಿಖೆಯಿಂದ ಸತ್ಯಾಂಶ ಹೊರ ಬೀಳಲಿದೆ.
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…
ಬ್ರಹ್ಮಾವರ:ರೆಡ್ ಕ್ರಾಸ್ ವಿಭಾಗದ ವತಿಯಿಂದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ…
ಕುಂದಾಪುರ:ಐಡಿಯಲ್ ಪ್ಲೇ ಆಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಮೂಡುಬಿದ್ರೆ ಆಳ್ವಾಸ್ ಪಿಯು ಕ್ಯಾಂಪಸ್ನಲ್ಲಿ ನಡೆದ 20ನೇ ರಾಜ್ಯ ಮಟ್ಟದ…