ಕುಂದಾಪುರ

ಉಪ್ಪುಂದ: ಸತೀಶ್ ಕೊಠಾರಿಗೆ ಸಾಧನ ಶ್ರೀ ಉದ್ಯಮ ರತ್ನ ಪ್ರಶಸ್ತಿ ಪ್ರದಾನ

Share

ಬೈಂದೂರು:JCI ಉಪ್ಪುಂದ ದಿಗ್ವಿಜಯ 2023 19ನೇ JC ಸಪ್ತಾಹ ಏಳನೇ ದಿನದ ಸಮಾರೋಪ ಸಮಾರಂಭದಲ್ಲಿ ಸತೀಶ್ ಕೊಠಾರಿ ಅವರಿಗೆ ಸಾಧನ ಶ್ರೀ ಉದ್ಯಮ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಸತೀಶ್ ಕೊಠಾರಿ ಅವರು
ಪ್ರಾಥಮಿಕ ಶಿಕ್ಷಣವಾದ 5ನೇ ತರಗತಿಯನ್ನು ಅರ್ಧಕ್ಕೆ ಮುಗಿಸಿ,ಮನೆಯ ಬಡತನವನ್ನು ನೀಗಿಸಬೇಕೆಂಬ ಛಲದೊಂದಿಗೆ ಬೆಂಗಳೂರಿಗೆ ತೆರಳುತ್ತಾರೆ.ಸಣ್ಣ ಪುಟ್ಟ ಹೋಟೆಲ್,ಕ್ಯಾಂಟೀನ್ ಗಳಲ್ಲಿ ಕ್ಲೀನರ್ ಆಗಿ,ವೆಸ್ಟರ್ ಆಗಿ ಕೆಲಸ ಮಾಡುತ್ತಾ ತನ್ನ ಪ್ರಾರಂಭಿಕ ದುಡಿಮೆಯನ್ನು ಆರಂಭಿಸುತ್ತಾರೆ.ಎಷ್ಟೇ ದುಡಿದರೂ ಮನೆಯ ಬಡತನದ ಪರಿಸ್ಥಿತಿ ಸುಧಾರಿಸದೇ ಇರುವುದನ್ನು ಮನಗಂಡು ಇನ್ನೂ ಹೆಚ್ಚಿನ ದುಡಿಮೆಗಾಗಿ ಬೆಂಗಳೂರನ್ನು ಬಿಟ್ಟು,ಅಣ್ಣನ ಜೊತೆಗೆ ದೂರದ ಮುಂಬೈಗೆ ಹೋಗುತ್ತಾರೆ.ಅಲ್ಲಿ ಬೆಳಿಗ್ಗೆಯ ಸಮಯದಲ್ಲಿ ಬೇರೆ ಬೇರೆ ಕೆಲಸ ಮಾಡುತ್ತಾ, ರಾತ್ರಿಯ ಸಮಯದಲ್ಲಿ ಶಾಲೆಗೆ ತೆರಳಿ ಉಳಿದ ತನ್ನ ಪ್ರಾಥಮಿಕ-ಪ್ರೌಢ ಶಿಕ್ಷಣವನ್ನು ಪೂರ್ಣಗೊಳಿಸುತ್ತಾರೆ.10ನೇ ತರಗತಿ ಪಾಸಾದ ನಂತರ ಕ್ಯಾಂಟೀನ್‌ನಲ್ಲಿ ಕೆಲಸ ಮುಂದುವರೆಸಿ, ಸಣ್ಣಪುಟ್ಟ ಕ್ಯಾಂಟೀನ್‌ಗಳನ್ನು ನಡೆಸುತ್ತಾ, ಕ್ಯಾಟರಿಂಗ್ ಉದ್ಯಮದ ಆಳ-ಅಗಲಗಳನ್ನು ಅರಿತು ಅದರಲ್ಲಿನ ಅಪಾರ ಅನುಭವಗಳನ್ನು ಗಳಿಸಿದ ನಂತರ “ಶ್ರೀ ಸ್ವಾಮಿ ಕ್ಯಾಟರಿಂಗ್ಸ್” ಎಂಬ ಬೃಹತ್ ಉದ್ದಿಮೆಯನ್ನು ಪ್ರಾರಂಭಿಸುತ್ತಾರೆ.ಮಹಾನಗರಿ ಮುಂಬೈನ ಗಣ್ಯಾತಿಗಣ್ಯರು, ಸಿನಿಮಾ ತಾರೆ- ಯರು ಇವರ ಕೈ ರುಚಿ ಭೋಜನವನ್ನು ಉಂಡು ಕೊಂಡಾಡಿದ್ದಾರೆ.ತುಂಬಾ ಕಷ್ಟ ಪಟ್ಟು ಹಗಲು ರಾತ್ರಿ ಎನ್ನದೇ ನಿರಂತರವಾಗಿ ದುಡಿದು ಐದು ಜನ ಸಹೋದರಿಯರಿಗೆ ಒಳ್ಳೆಯ ರೀತಿಯಲ್ಲಿ ಮದುವೆ ಮಾಡಿಸುತ್ತಾರೆ, ಅದೇ ರೀತಿ ಕಷ್ಟಪಟ್ಟು ದುಡಿಮೆ ಮಾಡುತ್ತಾ ಇವರ ಕುಟುಂಬವನ್ನು ಒಂದು ಹಂತದ ಉತ್ತಮ ಸ್ಥಿತಿಗೆ ತಂದು ನಿಲ್ಲಿಸುತ್ತಾರೆ. ಪ್ರಸ್ತುತ ನೂರಕ್ಕೂ ಅಧಿಕ ಸಂಖ್ಯೆಯ ಜನರಿಗೆ ಉದ್ಯೋಗ ನೀಡಿ ಅವರ ಜೀವನೋಪಾಯಕ್ಕೆ ಇವರು ಕಾರಣೀಕರ್ತರಾಗಿದ್ದಾರೆ. ಮೃದುಭಾಷಿಗಳು, ಹಿತಭಾಷಿಗಳು, ಸರಳ ವ್ಯಕ್ತಿತ್ವವನ್ನು ಹೊಂದಿದ ಇವರು ಸದಾ ಇನ್ನೊಬ್ಬರ ಒಳತಿಗಾಗಿ ಶ್ರಮಿಸುವವರು. ತಂದೆ ತಾಯಿ ತೋರಿಸಿಕೊಟ್ಟ ದಾರಿಯಂತೆ ಇವರು ಅಪಾರವಾದ ದೈವಭಕ್ತಿಯನ್ನೇ ನೆಚ್ಚಿಕೊಂಡು ದೇವರ ಕೃಪೆ ಇಲ್ಲದೇ ಒಂದು ಹುಲ್ಲು ಕಡ್ಡಿಯು ಅಲುಗಾಡದು ಎಂಬ ಮಾತಿನಂತೆ ಭಗವಂತನ ಸೇವೆಯನ್ನು ಎಷ್ಟು ಮಾಡಿದರೂ ಸಾಲದು ಎನ್ನುತ್ತಾ ಧಾರ್ಮಿಕ-ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಾರೆ.ಸುತ್ತ ಮುತ್ತಲಿನ ಎಲ್ಲಾ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರಗಳಿಗೆ ತಮ್ಮನ್ನು ತಾನು ತೊಡಗಿಸಿಕೊಂಡವರು
ಇವರ ಕಾರ್ಯವನ್ನು ಗುರುತಿಸಿ ಜೆಸಿಐ ಉಪ್ಪುಂದ ತನ್ನ 19ನೇ ವರ್ಷದ ಜೆಸಿ ಸಪ್ತಾಹದ ಸಮಾರಂಭದಲ್ಲಿ ಬಹಳ ಅಭಿಮಾನಪೂರ್ವಕವಾಗಿ ಸತೀಶ್ ಕೊಠಾರಿ ಅವರಿಗೆ“ಸಾಧನಶ್ರೀ ಉದ್ಯಮರತ್ನ ಪ್ರಶಸ್ತಿ” ಯನ್ನು ನೀಡಿ ಸನ್ಮಾನಿಸಿ ಗೌರವಿಸಲಾಯಿತು.ಇಂದು ಸಂಜೆ ಶ್ವಾನ ಪ್ರದರ್ಶನ, ತದನಂತರ ,ಸ ಮಾ ಹಿ ಪ್ರಾ ಶಾಲೆ ಕಂಚಿಕಾನು ಇಲ್ಲಿಯ ವಿಧ್ಯಾರ್ಥಿಳಿಂದ ವಿವಿಧ ರೀತಿಯ ನೃತ್ಯ ವೈಭವ ಮತ್ತು ಮಂಗಳೂರು ಅರೆಹೊಲಿ ಪ್ರತಿಷ್ಠಾನದ ನಂದಗೋಕುಲ ಕಲಾವಿದರಿಂದ ಕಾರಣೀಕ ಕ್ಷೇತ್ರದ ಪುಣ್ಯ ಕಥಾನಕದ ನೃತ್ಯರೂಪಕ ಬಿಡುವನೆ ಬ್ರಹ್ಮಲಿಂಗ ಹಾಗೂ ವಿವಿಧ ನೃತ್ಯ ವೈಭವ ನಡೆಯಿತು.ಈ ಸಂದರ್ಭದಲ್ಲಿ ವಿವಿಧ ಗಣ್ಯರುJCI ಉಪ್ಪುಂದದ ಅಧ್ಯಕ್ಷರು ,ಉಪಾಧ್ಯಕ್ಷರು, ಕಾರ್ಯದರ್ಶಿ, ಸರ್ವ ಸದಸ್ಯರು ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

7 hours ago

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

1 week ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

1 week ago

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

2 weeks ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

2 months ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

2 months ago