ಕುಂದಾಪುರ

ಕಟ್‌ಬೇಲ್ತೂರು:ಪಾಳು ಬಾವಿಗೆ ಬಿದ್ದ ಚಿರತೆ ರಕ್ಷಣೆ

Share


ಕುಂದಾಪುರ:ಕಟ್‌ಬೇಲ್ತೂರು ಗ್ರಾಮದ ಸುಳ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಮೀಪ ಇರುವ ಸುಳ್ಸೆ ಬಾಬು ಪೂಜಾರಿ ಎಂಬುವವರ ತೋಟದಲ್ಲಿರುವ ಆವರಣವಿಲ್ಲದ ಪಾಳು ಬಾವಿಗೆ ಬಿದ್ದ ಚಿರತೆಯನ್ನು ಶನಿವಾರ ರಕ್ಷಿಸಲಾಗಿದೆ.
ಆಹಾರವನ್ನು ಹುಡುಕಿಕೊಂಡು ಜನವಸತಿ ಪ್ರದೇಶದ ಕಡೆಗೆ ಬಂದಿರುವ ಅಂದಾಜು ೩ ವರ್ಷ ಪ್ರಾಯದ ಗಂಡು ಚಿರತೆಯೊಂದು ರಾತ್ರಿ ಸಮಯದಲ್ಲಿ ಆವರಣವಿಲ್ಲದ ಪಾಳು ಬಿದ್ದ ಬಾವಿಗೆ ಬಿದ್ದಿದೆ.ಬೆಳಗಿನ ಸಮಯದಲ್ಲಿ ಪ್ರಾಣಿಯೊಂದು ಕೂಗುತ್ತಿರುವ ಶಬ್ಧವನ್ನು ಗಮನಿಸಿದ ಬಾಬು ಪೂಜಾರಿ ಅವರು ಮನೆ ಹಿಂದುಗಡೆ ಇರುವ ತೋಟದಲ್ಲಿರುವ ಬಾವಿಯನ್ನು ಇಣುಕಿ ನೋಡಿದಾಗ ಚಿರತೆ ಬಾವಿಗೆ ಬಿದ್ದಿರುವುದು ಅವರ ಗಮನಕ್ಕೆ ಬಂದಿದೆ.ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿಯನ್ನು ನೀಡಿದ್ದಾರೆ.ಘಟನೆ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಬಾವಿಯೊಳಗೆ ಬೊನ್ ಇಳಿಸಿ ಸುರಕ್ಷಿತವಾಗಿ ಚಿರತೆಯನ್ನು ರಕ್ಷಿಸಿದರು,ಪ್ರಾಥಮಿಕ ಚಿಕಿತ್ಸೆಯನ್ನು ನೀಡಿದ ಬಳಿಕ ಅಭಯಾರಣ್ಯಕ್ಕೆ ಸುರಕ್ಷಿತವಾಗಿ ಬೀಡಲಾಯಿತು.ಕುಂದಾಪುರ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕ್ಲಿ ಫರ್ಡ್ ಲೋಬೋ ಅವರ ಮಾರ್ಗದರ್ಶನದಲ್ಲಿ,ಕುಂದಾಪುರ ವಲಯ ಅರಣ್ಯಾಧಿಕಾರಿ ಟಿ ಕಿರಣ್ ಬಾಬು ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.ಉಪ ವಲಯ ಅರಣ್ಯಾಧಿಕಾರಿಗಳಾದ ಉದಯ್,ದಿಲೀಪ್,ಸುನೀಲ್,ಶರತ್ ಹಾಗೂ ಗೀತ,ಅರಣ್ಯ ರಕ್ಷಕರಾದ ದೀಪಶ್ರೀ,ಮಾಲತಿ,ಉದಯ್,ಬಸವರಾಜ್,ರಾಘವೇಂದ್ರ,ಚAದ್ರಾವತಿ,ಅರಣ್ಯ ವೀಕ್ಷಕರಾದ ಸೋಮಶೇಖರ್,ಸತೀಶ್,ವಾಹನ ಚಾಲಕ ಅಶೋಕ ಚಿರತೆ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.ಸ್ಥಳೀಯರು ಸಹರಿಸಿದರು.

Advertisement

Share
Team Kundapur Times

Recent Posts

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

7 minutes ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

9 hours ago

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

1 week ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

1 week ago

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

2 weeks ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

2 months ago