ಕುಂದಾಪುರ

ಕಟ್‌ಬೇಲ್ತೂರು:ಪಾಳು ಬಾವಿಗೆ ಬಿದ್ದ ಚಿರತೆ ರಕ್ಷಣೆ

Share


ಕುಂದಾಪುರ:ಕಟ್‌ಬೇಲ್ತೂರು ಗ್ರಾಮದ ಸುಳ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಮೀಪ ಇರುವ ಸುಳ್ಸೆ ಬಾಬು ಪೂಜಾರಿ ಎಂಬುವವರ ತೋಟದಲ್ಲಿರುವ ಆವರಣವಿಲ್ಲದ ಪಾಳು ಬಾವಿಗೆ ಬಿದ್ದ ಚಿರತೆಯನ್ನು ಶನಿವಾರ ರಕ್ಷಿಸಲಾಗಿದೆ.
ಆಹಾರವನ್ನು ಹುಡುಕಿಕೊಂಡು ಜನವಸತಿ ಪ್ರದೇಶದ ಕಡೆಗೆ ಬಂದಿರುವ ಅಂದಾಜು ೩ ವರ್ಷ ಪ್ರಾಯದ ಗಂಡು ಚಿರತೆಯೊಂದು ರಾತ್ರಿ ಸಮಯದಲ್ಲಿ ಆವರಣವಿಲ್ಲದ ಪಾಳು ಬಿದ್ದ ಬಾವಿಗೆ ಬಿದ್ದಿದೆ.ಬೆಳಗಿನ ಸಮಯದಲ್ಲಿ ಪ್ರಾಣಿಯೊಂದು ಕೂಗುತ್ತಿರುವ ಶಬ್ಧವನ್ನು ಗಮನಿಸಿದ ಬಾಬು ಪೂಜಾರಿ ಅವರು ಮನೆ ಹಿಂದುಗಡೆ ಇರುವ ತೋಟದಲ್ಲಿರುವ ಬಾವಿಯನ್ನು ಇಣುಕಿ ನೋಡಿದಾಗ ಚಿರತೆ ಬಾವಿಗೆ ಬಿದ್ದಿರುವುದು ಅವರ ಗಮನಕ್ಕೆ ಬಂದಿದೆ.ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿಯನ್ನು ನೀಡಿದ್ದಾರೆ.ಘಟನೆ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಬಾವಿಯೊಳಗೆ ಬೊನ್ ಇಳಿಸಿ ಸುರಕ್ಷಿತವಾಗಿ ಚಿರತೆಯನ್ನು ರಕ್ಷಿಸಿದರು,ಪ್ರಾಥಮಿಕ ಚಿಕಿತ್ಸೆಯನ್ನು ನೀಡಿದ ಬಳಿಕ ಅಭಯಾರಣ್ಯಕ್ಕೆ ಸುರಕ್ಷಿತವಾಗಿ ಬೀಡಲಾಯಿತು.ಕುಂದಾಪುರ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕ್ಲಿ ಫರ್ಡ್ ಲೋಬೋ ಅವರ ಮಾರ್ಗದರ್ಶನದಲ್ಲಿ,ಕುಂದಾಪುರ ವಲಯ ಅರಣ್ಯಾಧಿಕಾರಿ ಟಿ ಕಿರಣ್ ಬಾಬು ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.ಉಪ ವಲಯ ಅರಣ್ಯಾಧಿಕಾರಿಗಳಾದ ಉದಯ್,ದಿಲೀಪ್,ಸುನೀಲ್,ಶರತ್ ಹಾಗೂ ಗೀತ,ಅರಣ್ಯ ರಕ್ಷಕರಾದ ದೀಪಶ್ರೀ,ಮಾಲತಿ,ಉದಯ್,ಬಸವರಾಜ್,ರಾಘವೇಂದ್ರ,ಚAದ್ರಾವತಿ,ಅರಣ್ಯ ವೀಕ್ಷಕರಾದ ಸೋಮಶೇಖರ್,ಸತೀಶ್,ವಾಹನ ಚಾಲಕ ಅಶೋಕ ಚಿರತೆ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.ಸ್ಥಳೀಯರು ಸಹರಿಸಿದರು.

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 weeks ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 weeks ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

1 month ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

1 month ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

2 months ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

2 months ago