ಕುಂದಾಪುರ

ಕಟ್‌ಬೇಲ್ತೂರು:ಪಾಳು ಬಾವಿಗೆ ಬಿದ್ದ ಚಿರತೆ ರಕ್ಷಣೆ

Share

Advertisement
Advertisement


ಕುಂದಾಪುರ:ಕಟ್‌ಬೇಲ್ತೂರು ಗ್ರಾಮದ ಸುಳ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಮೀಪ ಇರುವ ಸುಳ್ಸೆ ಬಾಬು ಪೂಜಾರಿ ಎಂಬುವವರ ತೋಟದಲ್ಲಿರುವ ಆವರಣವಿಲ್ಲದ ಪಾಳು ಬಾವಿಗೆ ಬಿದ್ದ ಚಿರತೆಯನ್ನು ಶನಿವಾರ ರಕ್ಷಿಸಲಾಗಿದೆ.
ಆಹಾರವನ್ನು ಹುಡುಕಿಕೊಂಡು ಜನವಸತಿ ಪ್ರದೇಶದ ಕಡೆಗೆ ಬಂದಿರುವ ಅಂದಾಜು ೩ ವರ್ಷ ಪ್ರಾಯದ ಗಂಡು ಚಿರತೆಯೊಂದು ರಾತ್ರಿ ಸಮಯದಲ್ಲಿ ಆವರಣವಿಲ್ಲದ ಪಾಳು ಬಿದ್ದ ಬಾವಿಗೆ ಬಿದ್ದಿದೆ.ಬೆಳಗಿನ ಸಮಯದಲ್ಲಿ ಪ್ರಾಣಿಯೊಂದು ಕೂಗುತ್ತಿರುವ ಶಬ್ಧವನ್ನು ಗಮನಿಸಿದ ಬಾಬು ಪೂಜಾರಿ ಅವರು ಮನೆ ಹಿಂದುಗಡೆ ಇರುವ ತೋಟದಲ್ಲಿರುವ ಬಾವಿಯನ್ನು ಇಣುಕಿ ನೋಡಿದಾಗ ಚಿರತೆ ಬಾವಿಗೆ ಬಿದ್ದಿರುವುದು ಅವರ ಗಮನಕ್ಕೆ ಬಂದಿದೆ.ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿಯನ್ನು ನೀಡಿದ್ದಾರೆ.ಘಟನೆ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಬಾವಿಯೊಳಗೆ ಬೊನ್ ಇಳಿಸಿ ಸುರಕ್ಷಿತವಾಗಿ ಚಿರತೆಯನ್ನು ರಕ್ಷಿಸಿದರು,ಪ್ರಾಥಮಿಕ ಚಿಕಿತ್ಸೆಯನ್ನು ನೀಡಿದ ಬಳಿಕ ಅಭಯಾರಣ್ಯಕ್ಕೆ ಸುರಕ್ಷಿತವಾಗಿ ಬೀಡಲಾಯಿತು.ಕುಂದಾಪುರ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕ್ಲಿ ಫರ್ಡ್ ಲೋಬೋ ಅವರ ಮಾರ್ಗದರ್ಶನದಲ್ಲಿ,ಕುಂದಾಪುರ ವಲಯ ಅರಣ್ಯಾಧಿಕಾರಿ ಟಿ ಕಿರಣ್ ಬಾಬು ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.ಉಪ ವಲಯ ಅರಣ್ಯಾಧಿಕಾರಿಗಳಾದ ಉದಯ್,ದಿಲೀಪ್,ಸುನೀಲ್,ಶರತ್ ಹಾಗೂ ಗೀತ,ಅರಣ್ಯ ರಕ್ಷಕರಾದ ದೀಪಶ್ರೀ,ಮಾಲತಿ,ಉದಯ್,ಬಸವರಾಜ್,ರಾಘವೇಂದ್ರ,ಚAದ್ರಾವತಿ,ಅರಣ್ಯ ವೀಕ್ಷಕರಾದ ಸೋಮಶೇಖರ್,ಸತೀಶ್,ವಾಹನ ಚಾಲಕ ಅಶೋಕ ಚಿರತೆ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.ಸ್ಥಳೀಯರು ಸಹರಿಸಿದರು.

Advertisement
Advertisement
Advertisement

Share
Team Kundapur Times

Recent Posts

ತ್ರಾಸಿ:ಹೆದ್ದಾರಿಯಲ್ಲಿ ಕಾರಿಗೆ ಅಡ್ಡ ಬಂದ ಗೂಳಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮುರುಡೇಶ್ವರ ದಿಂದ ಉಡುಪಿಗೆ ಸಾಗುತ್ತಿದ್ದ ಕಾರಿಗೆ ತ್ರಾಸಿ ಸಮೀಪ ಮೊವಾಡಿ ಕ್ರಾಸ್‍ನಲ್ಲಿ ಗೂಳಿಯೊದು ಅಡ್ಡ ಬಂದ…

12 hours ago

ಅಬ್ಬರಿಸಿದ ಮಳೆಗೆ ಉಕ್ಕೇರಿದ ಕಡಲು:ಜನರಲ್ಲಿ ಮೂಡಿದ ಆತಂಕ

ಕುಂದಾಪುರ:ಬುಧವಾರ ಸುರಿದ ಭಾರಿ ಗಾಳಿ ಮಳೆಗೆ ಕಡಲು ಉಕ್ಕೇರಿದ ಪರಿಣಾಮ ಕಂಚುಗೋಡು ಭಾಗದಲ್ಲಿ ಬೃಹತ್ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸಿದೆ.ಅಲೆಗಳ…

1 day ago

ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನಿಂದ ಸಂಭ್ರಮದ ದಸರಾ ಆಚರಣೆ

ಕುಂದಾಪುರ:ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಕುಂದಾಪುರ,ಸುಜ್ಞಾನ ಪದವಿ ಪೂರ್ವ ಕಾಲೇಜು,ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ಯಡಾಡಿ-ಮತ್ಯಾಡಿ, ಇಲ್ಲಿ ದಸರಾ ಹಬ್ಬವನ್ನು ಸಂಭ್ರಮದಿಂದ…

3 days ago

ಬಿ.ಎಚ್.ಪಿ ಮೀನುಗಾರಿಕಾ ಬೋಟ್ ಶುಭಾರಂಭ

ಕುಂದಾಪುರ:ಮೀನುಗಾರಿಕಾ ವೃತ್ತಿಯಲ್ಲಿ ಹಲವಾರು ವರ್ಷಗಳ ಅನುಭವವನ್ನು ಹೊಂದಿರುವ ಮತ್ಸೋದ್ಯಮಿಗಳಾದ ಉಪ್ಪುಂದ ನಾಗರಾಜ ಖಾರ್ವಿ ಮತ್ತು ಸುಬ್ರಹ್ಮಣ್ಯ ಖಾರ್ವಿ ಮಾಲೀಕತ್ವದ ಬಿ.ಎಚ್.ಪಿ…

4 days ago

ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಖಾಸಗಿ ಬಸ್‌:ಚಾಲಕ ಸ್ಥಳದಲ್ಲೇ ಸಾವು

ನೈಲಾಡಿ:ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ…

4 days ago

ಧರ್ಮ ಗಂಗೋತ್ರಿ ಭರತ ಶೆಟ್ಟಿ ಸಿ.ಸಿ.ಎಫ್ ಮೆಂಬರ್ ಆಗಿ ಆಯ್ಕೆ

ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಲ್ಲೂರು ನಿವಾಸಿ ಧರ್ಮಗಂಗೋತ್ರಿ ಭರತ್ ಶೆಟ್ಟಿ ಅವರು ಭಾರತ ಸಂವಿಧಾನದ ಕಾರ್ಯವನ್ನುವಿಜಿಲೆಕ್ಸ್ ಅಪರಾಧ ನಿಯಂತ್ರಣ…

6 days ago