ಶ್ರೀಗಣೇಶ ಕ್ರೆಡಿಟ್ ಸೊಸೈಟಿ ವಾರ್ಷಿಕ ಸಾಮಾನ್ಯ ಸಭೆ;10% ಡಿವಿಡೆಂಟ್ ಘೋಷಣೆ

(ನಾಲ್ಕು ಜನ ಪ್ರಗತಿಪರ ಕೃಷಿಕರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು)
ಕುಂದಾಪುರ:ಗ್ರಾಮೀಣ ಪ್ರದೇಶದ ಸ್ತ್ರೀ ಸಾಮಾನ್ಯರು ಮತ್ತು ಕೃಷಿಕರ ಶ್ರೇಯೋಭಿವೃದ್ಧಿಗಾಗಿ ಸಂಘವು ಕಳೆದ ಏಳು ವರ್ಷಗಳಿಂದ ಕೆಲಸವನ್ನು ಮಾಡಿಕೊಂಡು ಬರುತ್ತಿದೆ.ಸಂಘದ ಸದಸ್ಯರಿಗಾಗಿ ಕಡಿಮೆ ಬಡ್ಡಿ ದರದಲ್ಲಿ ಸಾಲ ವಿತರಣೆ ಮತ್ತು ಅಗತ್ಯ ಮಾಹಿತಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿಕೊಂಡು ಬರಲಾಗುತ್ತಿದೆ.ಸದಸ್ಯರು ಆಡಳಿತ ಮಂಡಳಿಗೆ ಅಗತ್ಯ ಸಲಹೆ ಸೂಚನೆಗಳನ್ನು ಕಾಲ ಕಾಲಕ್ಕೆ ನೀಡುವುದರ ಮುಖೇನ ಸಂಘದ ಬೆಳವಣಿಗೆಗೆ ಸಹಕರಿಸಬೇಕೆಂದು ಶ್ರೀಗಣೇಶ ಸೊಸೈಟಿ ಅಧ್ಯಕ್ಷ ಮುರಳೀಧರ ಐತಾಳ್ ಹೇಳಿದರು.
ಹೊಸಾಡು ಸ.ಹಿ.ಪ್ರಾ ಶಾಲೆಯಲ್ಲಿ ಭಾನುವಾರ ನಡೆದ ಶ್ರೀಗಣೇಶ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮುಳ್ಳಿಕಟ್ಟೆ ಹೊಸಾಡು ಅದರ 2022-23ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯ ಅಧ್ಯಕ್ಷತೆಯನ್ನು ವಹಸಿ ಅವರು ಮಾತನಾಡಿದರು.
2022-23ನೇ ಸಾಲಿನ ಆಡಳಿತ ವರದಿ ಹಾಗೂ ಲೆಕ್ಕ ಪರೀಶೋಧನ ವರದಿಯನ್ನು ಸಂಘದ ಸಿಇಒ ಅಶ್ವಿನಿ ಮಂಡಿಸಿದರು.2023-24ನೇ ಸಾಲಿನ ಲೆಕ್ಕ ಪರಿಶೋಧಕರ ಆಯ್ಕೆ ಹಾಗೂ ಮುಂದಿನ ಕಾರ್ಯಯೋಜನೆಗಳಿಗೆ ಅನುಮತಿ ನೀಡಲಾಯಿತು.ಹಿಂದಿನ ಸಭೆಯ ನಡಾವಳಿಯನ್ನು ಜ್ಯೋತಿ ಐತಾಳ್ ಓದಿದರು.ಸಂಘದ ಸದಸ್ಯ ಮೋಹನದಾಸ ಹೆಬ್ಬಾರ್ ಸಲಹೆ ಸೂಚನೆಗಳನ್ನು ನೀಡಿದರು.ಸಂಘದ ಸದಸ್ಯರಿಗೆ 10% ಡಿವಿಡೆಂಟ್ ಘೋಷಣೆ ಮಾಡಲಾಯಿತು.15 ಬಡ ಕುಟುಂಬದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಯಿತು.ನಾಲ್ಕು ಜನ ಪ್ರಗತಿಪರ ಕೃಷಿಕರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.ಈ ಸಂದರ್ಭ ಸಂಘದ ಎಲ್ಲಾ ನಿರ್ದೇಶಕರುಗಳು ಉಪಸ್ಥಿತರಿದ್ದರು.ಸದಸ್ಯರು ಭಾಗವಹಿಸಿದ್ದರು.ಸಲಹೆಗಾರ ವಿಶ್ವಂಭರ ಐತಾಳ್ ಪ್ರಾಸ್ತಾವಿಕವಾಗಿ ಮಾತನಾಡಿದರು.ರಾಜೇಶ ಸ್ವಾಗತಿಸಿ,ವಂದಿಸಿದರು.