ಕುಂದಾಪುರ

ಶ್ರೀಗಣೇಶ ಕ್ರೆಡಿಟ್ ಸೊಸೈಟಿ ವಾರ್ಷಿಕ ಸಾಮಾನ್ಯ ಸಭೆ;10% ಡಿವಿಡೆಂಟ್ ಘೋಷಣೆ

Share

(ನಾಲ್ಕು ಜನ ಪ್ರಗತಿಪರ ಕೃಷಿಕರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು)

ಕುಂದಾಪುರ:ಗ್ರಾಮೀಣ ಪ್ರದೇಶದ ಸ್ತ್ರೀ ಸಾಮಾನ್ಯರು ಮತ್ತು ಕೃಷಿಕರ ಶ್ರೇಯೋಭಿವೃದ್ಧಿಗಾಗಿ ಸಂಘವು ಕಳೆದ ಏಳು ವರ್ಷಗಳಿಂದ ಕೆಲಸವನ್ನು ಮಾಡಿಕೊಂಡು ಬರುತ್ತಿದೆ.ಸಂಘದ ಸದಸ್ಯರಿಗಾಗಿ ಕಡಿಮೆ ಬಡ್ಡಿ ದರದಲ್ಲಿ ಸಾಲ ವಿತರಣೆ ಮತ್ತು ಅಗತ್ಯ ಮಾಹಿತಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿಕೊಂಡು ಬರಲಾಗುತ್ತಿದೆ.ಸದಸ್ಯರು ಆಡಳಿತ ಮಂಡಳಿಗೆ ಅಗತ್ಯ ಸಲಹೆ ಸೂಚನೆಗಳನ್ನು ಕಾಲ ಕಾಲಕ್ಕೆ ನೀಡುವುದರ ಮುಖೇನ ಸಂಘದ ಬೆಳವಣಿಗೆಗೆ ಸಹಕರಿಸಬೇಕೆಂದು ಶ್ರೀಗಣೇಶ ಸೊಸೈಟಿ ಅಧ್ಯಕ್ಷ ಮುರಳೀಧರ ಐತಾಳ್ ಹೇಳಿದರು.
ಹೊಸಾಡು ಸ.ಹಿ.ಪ್ರಾ ಶಾಲೆಯಲ್ಲಿ ಭಾನುವಾರ ನಡೆದ ಶ್ರೀಗಣೇಶ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮುಳ್ಳಿಕಟ್ಟೆ ಹೊಸಾಡು ಅದರ 2022-23ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯ ಅಧ್ಯಕ್ಷತೆಯನ್ನು ವಹಸಿ ಅವರು ಮಾತನಾಡಿದರು.
2022-23ನೇ ಸಾಲಿನ ಆಡಳಿತ ವರದಿ ಹಾಗೂ ಲೆಕ್ಕ ಪರೀಶೋಧನ ವರದಿಯನ್ನು ಸಂಘದ ಸಿಇಒ ಅಶ್ವಿನಿ ಮಂಡಿಸಿದರು.2023-24ನೇ ಸಾಲಿನ ಲೆಕ್ಕ ಪರಿಶೋಧಕರ ಆಯ್ಕೆ ಹಾಗೂ ಮುಂದಿನ ಕಾರ್ಯಯೋಜನೆಗಳಿಗೆ ಅನುಮತಿ ನೀಡಲಾಯಿತು.ಹಿಂದಿನ ಸಭೆಯ ನಡಾವಳಿಯನ್ನು ಜ್ಯೋತಿ ಐತಾಳ್ ಓದಿದರು.ಸಂಘದ ಸದಸ್ಯ ಮೋಹನದಾಸ ಹೆಬ್ಬಾರ್ ಸಲಹೆ ಸೂಚನೆಗಳನ್ನು ನೀಡಿದರು.ಸಂಘದ ಸದಸ್ಯರಿಗೆ 10% ಡಿವಿಡೆಂಟ್ ಘೋಷಣೆ ಮಾಡಲಾಯಿತು.15 ಬಡ ಕುಟುಂಬದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಯಿತು.ನಾಲ್ಕು ಜನ ಪ್ರಗತಿಪರ ಕೃಷಿಕರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.ಈ ಸಂದರ್ಭ ಸಂಘದ ಎಲ್ಲಾ ನಿರ್ದೇಶಕರುಗಳು ಉಪಸ್ಥಿತರಿದ್ದರು.ಸದಸ್ಯರು ಭಾಗವಹಿಸಿದ್ದರು.ಸಲಹೆಗಾರ ವಿಶ್ವಂಭರ ಐತಾಳ್ ಪ್ರಾಸ್ತಾವಿಕವಾಗಿ ಮಾತನಾಡಿದರು.ರಾಜೇಶ ಸ್ವಾಗತಿಸಿ,ವಂದಿಸಿದರು.

Advertisement

Share
Team Kundapur Times

Recent Posts

ಪೌಷ್ಟಿಕ ಆಹಾರ ಪ್ರದರ್ಶನ,ಪೋಷಣ್ ಅಭಿಯಾನ ಕಾರ್ಯಕ್ರಮ

ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…

3 days ago

ಶಾಸಕರ ವಿರುದ್ಧ ಸಾಮಾಜಿಕ ಜಾಲಾತಾಣದಲ್ಲಿ ಅಪಪ್ರಚಾರ:ದೂರು ದಾಖಲು

ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…

3 days ago

ಮಾರಿಷಸ್ ದೇಶದಲ್ಲಿ ದುರಂತ:ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಸಾವು

ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…

4 days ago

ಕಿರಿಮಂಜೇಶ್ವರ:ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…

4 days ago

ಕನ್ನಡ ಉಪನ್ಯಾಸ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…

1 week ago

ಹಿಂದಿ ದಿವಸ್ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…

1 week ago