ಉಡುಪಿ

ಮಲ್ಪೆ:ವಿಶ್ವ ಸಮುದ್ರ ಸ್ವಚ್ಛತಾ ದಿನಾಚರಣೆ

Share

ಉಡುಪಿ:ರೀಫ್ ವಾಚ್ ಮರೈನ್ ಕನ್ಸರ್ವೇಷನ್,ಹೆಚ್.ಸಿ. ಎಲ್ ಫೌಂಡೇಶನ್, ಅರಣ್ಯ ಇಲಾಖೆ ಮತ್ತು ಉಡುಪಿ ನಗರ ಸಭೆ,ಫಿಷರ್ಮೆನ್ ಅಸೋಸಿಯೇಷನ್ ವತಿಯಿಂದ ವಿಶ್ವ ಸಮುದ್ರ ದಿನಾಚರಣೆ ಅಂಗವಾಗಿ ಮಲ್ಪೆಯಲ್ಲಿ ಕಡಲ ತೀರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ನಗರ ಪಾಲಿಕೆಯ ಆಯುಕ್ತರಾದ ರಾಯಪ್ಪ ಅವರು ಸಾಂದರ್ಭಿಕ ಕಡಲಾಮೆಯನ್ನು ಬಲೆಗಳಿಂದ ರಕ್ಷಿಸುವ ವಿನೂತನ ರೀತಿಯಲ್ಲಿ ಉದ್ಘಾಟಿಸಿ ಮಾತನಾಡಿ,ತಾಜ್ಯಗಳನ್ನು ಮನೆಯಲ್ಲೇ ಸುಲಭ ರೀತಿಯಲ್ಲಿ ವಿಲೇವಾರಿ ಮಾಡಬಹುದು ಎಂದರು.
ಈ ವೇಳೆ ಮಾತನಾಡಿದ ನಗರ ಸಭೆಯ ಸದಸ್ಯರಾದ ಯೆಡ್ಲೀನ್ ಕರ್ಕಡ ಅವರು ಕಡಲ ತೀರದಲ್ಲಿರುವ ಅಂಗಡಿ ಮುಗ್ಗಟ್ಟುಗಳಿಗೆ ಇದರಿಂದ ಆದರೂ ಸ್ವಲ್ಪಮಟ್ಟಿಗೆ ಅರಿವು ಆಗಬೇಕು ಎಂದರು.
ಇನ್ನೋರ್ವ ನಗರ ಸಭೆಯ ಸದಸ್ಯರಾದ ಶ್ರೀಲಕ್ಷ್ಮೀ ಮಂಜುನಾಥ್ ಅವರು ಮಾತನಾಡಿ ,ತಾಜ್ಯ ವಿಲೇವಾರಿಗೆ ಬಗ್ಗೆ ಸ್ಥಳೀಯ ಜನರಿಗೆ ಅರಿವು ಮೂಡಿಸಬೇಕು ಎಂದರು.

ಅಧ್ಯಕ್ಷತೆಯನ್ನು ವಹಿಸಿದ್ದ ದಯಾನಂದ ಕೆ ಸುವರ್ಣ ಅವರು ತಾಜ್ಯಗಳ ಸಮಸ್ಯೆ ತಮ್ಮ ಬಾಲ್ಯದಲ್ಲಿ ಇರಲಿಲ್ಲ ಆದರೆ ಈಗ ಇದೊಂದು ಸಮಸ್ಯೆಯಾಗಿಹೋಗಿದೆ ಇಂದಿನ ಯುವ ಜನರು ಜಗೃತರಾಗಬೇಕು ಇದರಿಂದ ಕಾರ್ಯ ಪ್ರವೃತರಾಗಬೇಕು ಎಂದರು.
ಇದೆ ವೇಳೆ ರೋಹಿತ್ ಬೈಕಾಡಿ ಅವರ ನಿರ್ದೇಶನದಲ್ಲಿ ಮಂದಾರ ತಂಡವು ಕಡಲಾಮೆ ಮತ್ತು ಕಡಲ ಜೀವಿ ರಕ್ಷಣೆಯ ಕಿರು ನಾಟಕ ರಂಗ ಪ್ರಯೋಗ ಮಾಡಿತು,ನಂತರ ಸಮುದ್ರದಲ್ಲಿ ಸ್ವಚ್ಛತಾ ಅಭಿಯಾನವನ್ನು ಮಾಡಿದರು.
ಈ ಕಾರ್ಯಕ್ರಮದಲ್ಲಿ ನಗರ,ಅರಣ್ಯ ಇಲಾಖೆಯ ಉಪ ವಲಯ ಅರಣ್ಯಧಿಕಾರಿ ಗುರುರಾಜ್ ಮತ್ತು ಫಿಶರ್ಮೆನ್ ನ ರವಿರಾಜ್ ಅವರು ಶುಭಹಾರೈಸಿದರು ಇದೆ ವೇಳೆ ಬಾಲಕರ ಶ್ರೀ ರಾಮ ಮಂದಿರದ ಲಕ್ಷ್ಮಣ ಕರ್ಕೇರ,ಸಂತೋಷ್ ಉಪಸ್ಥಿತರಿದ್ದರು.ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ನ ಉಪನ್ಯಾಸಕರು ಮತ್ತು ಮಕ್ಕಳು,ನಾರಾಯಣ ಗುರು ಪ್ರೌಢ ಶಾಲೆಯ ಅಧ್ಯಾಪಕರು ಮತ್ತು ಮಕ್ಕಳು ಶ್ರಮದಾನ ಮಾಡಿದರು.
ಈ ವೇಳೆ ರೀಫ್ ವಾಚ್ ನ ರಿವಿಲ್ ಸ್ಟೀಫನ್ ಅವರು ಪ್ರಾಸ್ತಾವಿಕ ಮಾತನಾಡಿದರೆ ವಿಘ್ನೇಶ್ ಅವರು ನಿರೂಪಿಸಿ,ವೆಂಕಟೇಶ್ ಅವರು ವಂದಿಸಿದರು.

Advertisement

Share
Team Kundapur Times

Recent Posts

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

7 days ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

1 week ago

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

2 weeks ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

2 months ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

2 months ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

2 months ago