ಉಡುಪಿ

ಮಲ್ಪೆ:ವಿಶ್ವ ಸಮುದ್ರ ಸ್ವಚ್ಛತಾ ದಿನಾಚರಣೆ

Share

ಉಡುಪಿ:ರೀಫ್ ವಾಚ್ ಮರೈನ್ ಕನ್ಸರ್ವೇಷನ್,ಹೆಚ್.ಸಿ. ಎಲ್ ಫೌಂಡೇಶನ್, ಅರಣ್ಯ ಇಲಾಖೆ ಮತ್ತು ಉಡುಪಿ ನಗರ ಸಭೆ,ಫಿಷರ್ಮೆನ್ ಅಸೋಸಿಯೇಷನ್ ವತಿಯಿಂದ ವಿಶ್ವ ಸಮುದ್ರ ದಿನಾಚರಣೆ ಅಂಗವಾಗಿ ಮಲ್ಪೆಯಲ್ಲಿ ಕಡಲ ತೀರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ನಗರ ಪಾಲಿಕೆಯ ಆಯುಕ್ತರಾದ ರಾಯಪ್ಪ ಅವರು ಸಾಂದರ್ಭಿಕ ಕಡಲಾಮೆಯನ್ನು ಬಲೆಗಳಿಂದ ರಕ್ಷಿಸುವ ವಿನೂತನ ರೀತಿಯಲ್ಲಿ ಉದ್ಘಾಟಿಸಿ ಮಾತನಾಡಿ,ತಾಜ್ಯಗಳನ್ನು ಮನೆಯಲ್ಲೇ ಸುಲಭ ರೀತಿಯಲ್ಲಿ ವಿಲೇವಾರಿ ಮಾಡಬಹುದು ಎಂದರು.
ಈ ವೇಳೆ ಮಾತನಾಡಿದ ನಗರ ಸಭೆಯ ಸದಸ್ಯರಾದ ಯೆಡ್ಲೀನ್ ಕರ್ಕಡ ಅವರು ಕಡಲ ತೀರದಲ್ಲಿರುವ ಅಂಗಡಿ ಮುಗ್ಗಟ್ಟುಗಳಿಗೆ ಇದರಿಂದ ಆದರೂ ಸ್ವಲ್ಪಮಟ್ಟಿಗೆ ಅರಿವು ಆಗಬೇಕು ಎಂದರು.
ಇನ್ನೋರ್ವ ನಗರ ಸಭೆಯ ಸದಸ್ಯರಾದ ಶ್ರೀಲಕ್ಷ್ಮೀ ಮಂಜುನಾಥ್ ಅವರು ಮಾತನಾಡಿ ,ತಾಜ್ಯ ವಿಲೇವಾರಿಗೆ ಬಗ್ಗೆ ಸ್ಥಳೀಯ ಜನರಿಗೆ ಅರಿವು ಮೂಡಿಸಬೇಕು ಎಂದರು.

ಅಧ್ಯಕ್ಷತೆಯನ್ನು ವಹಿಸಿದ್ದ ದಯಾನಂದ ಕೆ ಸುವರ್ಣ ಅವರು ತಾಜ್ಯಗಳ ಸಮಸ್ಯೆ ತಮ್ಮ ಬಾಲ್ಯದಲ್ಲಿ ಇರಲಿಲ್ಲ ಆದರೆ ಈಗ ಇದೊಂದು ಸಮಸ್ಯೆಯಾಗಿಹೋಗಿದೆ ಇಂದಿನ ಯುವ ಜನರು ಜಗೃತರಾಗಬೇಕು ಇದರಿಂದ ಕಾರ್ಯ ಪ್ರವೃತರಾಗಬೇಕು ಎಂದರು.
ಇದೆ ವೇಳೆ ರೋಹಿತ್ ಬೈಕಾಡಿ ಅವರ ನಿರ್ದೇಶನದಲ್ಲಿ ಮಂದಾರ ತಂಡವು ಕಡಲಾಮೆ ಮತ್ತು ಕಡಲ ಜೀವಿ ರಕ್ಷಣೆಯ ಕಿರು ನಾಟಕ ರಂಗ ಪ್ರಯೋಗ ಮಾಡಿತು,ನಂತರ ಸಮುದ್ರದಲ್ಲಿ ಸ್ವಚ್ಛತಾ ಅಭಿಯಾನವನ್ನು ಮಾಡಿದರು.
ಈ ಕಾರ್ಯಕ್ರಮದಲ್ಲಿ ನಗರ,ಅರಣ್ಯ ಇಲಾಖೆಯ ಉಪ ವಲಯ ಅರಣ್ಯಧಿಕಾರಿ ಗುರುರಾಜ್ ಮತ್ತು ಫಿಶರ್ಮೆನ್ ನ ರವಿರಾಜ್ ಅವರು ಶುಭಹಾರೈಸಿದರು ಇದೆ ವೇಳೆ ಬಾಲಕರ ಶ್ರೀ ರಾಮ ಮಂದಿರದ ಲಕ್ಷ್ಮಣ ಕರ್ಕೇರ,ಸಂತೋಷ್ ಉಪಸ್ಥಿತರಿದ್ದರು.ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ನ ಉಪನ್ಯಾಸಕರು ಮತ್ತು ಮಕ್ಕಳು,ನಾರಾಯಣ ಗುರು ಪ್ರೌಢ ಶಾಲೆಯ ಅಧ್ಯಾಪಕರು ಮತ್ತು ಮಕ್ಕಳು ಶ್ರಮದಾನ ಮಾಡಿದರು.
ಈ ವೇಳೆ ರೀಫ್ ವಾಚ್ ನ ರಿವಿಲ್ ಸ್ಟೀಫನ್ ಅವರು ಪ್ರಾಸ್ತಾವಿಕ ಮಾತನಾಡಿದರೆ ವಿಘ್ನೇಶ್ ಅವರು ನಿರೂಪಿಸಿ,ವೆಂಕಟೇಶ್ ಅವರು ವಂದಿಸಿದರು.

Advertisement

Share
Team Kundapur Times

Recent Posts

ಪೌಷ್ಟಿಕ ಆಹಾರ ಪ್ರದರ್ಶನ,ಪೋಷಣ್ ಅಭಿಯಾನ ಕಾರ್ಯಕ್ರಮ

ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…

3 days ago

ಶಾಸಕರ ವಿರುದ್ಧ ಸಾಮಾಜಿಕ ಜಾಲಾತಾಣದಲ್ಲಿ ಅಪಪ್ರಚಾರ:ದೂರು ದಾಖಲು

ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…

3 days ago

ಮಾರಿಷಸ್ ದೇಶದಲ್ಲಿ ದುರಂತ:ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಸಾವು

ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…

4 days ago

ಕಿರಿಮಂಜೇಶ್ವರ:ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…

4 days ago

ಕನ್ನಡ ಉಪನ್ಯಾಸ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…

1 week ago

ಹಿಂದಿ ದಿವಸ್ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…

1 week ago