ಉಡುಪಿ

ಮಲ್ಪೆ:ವಿಶ್ವ ಸಮುದ್ರ ಸ್ವಚ್ಛತಾ ದಿನಾಚರಣೆ

Share

Advertisement
Advertisement

ಉಡುಪಿ:ರೀಫ್ ವಾಚ್ ಮರೈನ್ ಕನ್ಸರ್ವೇಷನ್,ಹೆಚ್.ಸಿ. ಎಲ್ ಫೌಂಡೇಶನ್, ಅರಣ್ಯ ಇಲಾಖೆ ಮತ್ತು ಉಡುಪಿ ನಗರ ಸಭೆ,ಫಿಷರ್ಮೆನ್ ಅಸೋಸಿಯೇಷನ್ ವತಿಯಿಂದ ವಿಶ್ವ ಸಮುದ್ರ ದಿನಾಚರಣೆ ಅಂಗವಾಗಿ ಮಲ್ಪೆಯಲ್ಲಿ ಕಡಲ ತೀರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

Advertisement

ನಗರ ಪಾಲಿಕೆಯ ಆಯುಕ್ತರಾದ ರಾಯಪ್ಪ ಅವರು ಸಾಂದರ್ಭಿಕ ಕಡಲಾಮೆಯನ್ನು ಬಲೆಗಳಿಂದ ರಕ್ಷಿಸುವ ವಿನೂತನ ರೀತಿಯಲ್ಲಿ ಉದ್ಘಾಟಿಸಿ ಮಾತನಾಡಿ,ತಾಜ್ಯಗಳನ್ನು ಮನೆಯಲ್ಲೇ ಸುಲಭ ರೀತಿಯಲ್ಲಿ ವಿಲೇವಾರಿ ಮಾಡಬಹುದು ಎಂದರು.
ಈ ವೇಳೆ ಮಾತನಾಡಿದ ನಗರ ಸಭೆಯ ಸದಸ್ಯರಾದ ಯೆಡ್ಲೀನ್ ಕರ್ಕಡ ಅವರು ಕಡಲ ತೀರದಲ್ಲಿರುವ ಅಂಗಡಿ ಮುಗ್ಗಟ್ಟುಗಳಿಗೆ ಇದರಿಂದ ಆದರೂ ಸ್ವಲ್ಪಮಟ್ಟಿಗೆ ಅರಿವು ಆಗಬೇಕು ಎಂದರು.
ಇನ್ನೋರ್ವ ನಗರ ಸಭೆಯ ಸದಸ್ಯರಾದ ಶ್ರೀಲಕ್ಷ್ಮೀ ಮಂಜುನಾಥ್ ಅವರು ಮಾತನಾಡಿ ,ತಾಜ್ಯ ವಿಲೇವಾರಿಗೆ ಬಗ್ಗೆ ಸ್ಥಳೀಯ ಜನರಿಗೆ ಅರಿವು ಮೂಡಿಸಬೇಕು ಎಂದರು.

ಅಧ್ಯಕ್ಷತೆಯನ್ನು ವಹಿಸಿದ್ದ ದಯಾನಂದ ಕೆ ಸುವರ್ಣ ಅವರು ತಾಜ್ಯಗಳ ಸಮಸ್ಯೆ ತಮ್ಮ ಬಾಲ್ಯದಲ್ಲಿ ಇರಲಿಲ್ಲ ಆದರೆ ಈಗ ಇದೊಂದು ಸಮಸ್ಯೆಯಾಗಿಹೋಗಿದೆ ಇಂದಿನ ಯುವ ಜನರು ಜಗೃತರಾಗಬೇಕು ಇದರಿಂದ ಕಾರ್ಯ ಪ್ರವೃತರಾಗಬೇಕು ಎಂದರು.
ಇದೆ ವೇಳೆ ರೋಹಿತ್ ಬೈಕಾಡಿ ಅವರ ನಿರ್ದೇಶನದಲ್ಲಿ ಮಂದಾರ ತಂಡವು ಕಡಲಾಮೆ ಮತ್ತು ಕಡಲ ಜೀವಿ ರಕ್ಷಣೆಯ ಕಿರು ನಾಟಕ ರಂಗ ಪ್ರಯೋಗ ಮಾಡಿತು,ನಂತರ ಸಮುದ್ರದಲ್ಲಿ ಸ್ವಚ್ಛತಾ ಅಭಿಯಾನವನ್ನು ಮಾಡಿದರು.
ಈ ಕಾರ್ಯಕ್ರಮದಲ್ಲಿ ನಗರ,ಅರಣ್ಯ ಇಲಾಖೆಯ ಉಪ ವಲಯ ಅರಣ್ಯಧಿಕಾರಿ ಗುರುರಾಜ್ ಮತ್ತು ಫಿಶರ್ಮೆನ್ ನ ರವಿರಾಜ್ ಅವರು ಶುಭಹಾರೈಸಿದರು ಇದೆ ವೇಳೆ ಬಾಲಕರ ಶ್ರೀ ರಾಮ ಮಂದಿರದ ಲಕ್ಷ್ಮಣ ಕರ್ಕೇರ,ಸಂತೋಷ್ ಉಪಸ್ಥಿತರಿದ್ದರು.ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ನ ಉಪನ್ಯಾಸಕರು ಮತ್ತು ಮಕ್ಕಳು,ನಾರಾಯಣ ಗುರು ಪ್ರೌಢ ಶಾಲೆಯ ಅಧ್ಯಾಪಕರು ಮತ್ತು ಮಕ್ಕಳು ಶ್ರಮದಾನ ಮಾಡಿದರು.
ಈ ವೇಳೆ ರೀಫ್ ವಾಚ್ ನ ರಿವಿಲ್ ಸ್ಟೀಫನ್ ಅವರು ಪ್ರಾಸ್ತಾವಿಕ ಮಾತನಾಡಿದರೆ ವಿಘ್ನೇಶ್ ಅವರು ನಿರೂಪಿಸಿ,ವೆಂಕಟೇಶ್ ಅವರು ವಂದಿಸಿದರು.

Advertisement
Advertisement

Share
Team Kundapur Times

Recent Posts

ಕಿರಿಮಂಜೇಶ್ವರ ಶ್ರೀ ಅಗಸ್ತೇಶ್ವರ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಉತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ಪ್ರಸಿದ್ಧ ಶ್ರೀ ಅಗಸ್ತೇಶ್ವರ ಶ್ರೀ ಮಹಾಗಣಪತಿ ಶ್ರೀ ವಿಶಾಲಾಕ್ಷಿ ಅಮ್ಮನವರ ದೇವಸ್ಥಾನ ಕಿರಿಮಂಜೇಶ್ವರದಲ್ಲಿ ಶ್ರೀ ಗಣೇಶ ಚತುರ್ಥಿ…

18 hours ago

ಶ್ರೀ ಪ್ರಸನ್ನ ಗಣಪತಿ ದೇವಸ್ಥಾನ ಉಪ್ಕಲ್‍ಮಠ ನಾಡ:ಗಣೇಶೋತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ನಾಡ ಉಪ್ಕಲ್ ಮಠ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ 35ನೇ ವರ್ಷದ ಗಣಪತಿ ಉತ್ಸವ ಕಾರ್ಯಕ್ರಮ ನಾನಾ…

18 hours ago

ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ತೈಲ ಸೋರಿಕೆ:ಹಲವು ದ್ವಿಚಕ್ರ ವಾಹನಗಳು ಪಲ್ಟಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿಉಡುಪಿ ಕಡೆಯಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ತೈಲ ವಾಹನದಿಂದ ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಸ್ತೆ…

20 hours ago

ಶ್ರೀ ದುರ್ಗಾ ಹಾರ್ಡ್ ವೇರ್ ತಲ್ಲೂರಿನಲ್ಲಿ ಶುಭಾರಂಭ

ಕುಂದಾಪುರ:ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಬಳಿ ಬ್ಯಾಂಕ್ ಆಫ್ ಬರೋಡ ಎದುರುಗಡೆ ಇರುವ ಶ್ರೀ ಬ್ರಾಹ್ಮಿ ದುರ್ಗಾ ಕಾಂಪ್ಲೆಕ್ಸ್…

23 hours ago

ತಿಮಿಂಗಿಲ ಮೀನಿನ ಕಳೆಬರ ಪತ್ತೆ

ಕುಂದಾಪುರ:ತಾಲೂಕಿನ ಗಂಗೊಳ್ಳಿ ಮಡಿ ಲೈಟ್‍ಹೌಸ್ ಕಡಲ ತೀರದಲ್ಲಿ ಮೃತ ತಿಮಿಂಗಿಲ ಮೀನಿನ ಕಳೆಬರ ಮಂಗಳವಾರ ಪತ್ತೆಯಾಗಿದೆ.ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ…

3 days ago

ವಲಯ ಅರಣ್ಯಾಧಿಕಾರಿ ಸವಿತಾ ಆರ್ ದೇವಾಡಿಗಗೆ ಮುಖ್ಯಮಂತ್ರಿ ಪದಕ

ಕುಂದಾಪುರ:ಹೊನ್ನಾವರದಲ್ಲಿ ವಲಯ ಅರಣ್ಯಾಧಿಕಾರಿ ಆಗಿ ಸೇವೆ ಸಲ್ಲಿಸುತ್ತಿರುವ ಸವಿತಾ ಆರ್ ದೇವಾಡಿಗ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದಕ…

4 days ago