ಆಲೂರು ಹರ್ಕೂರು 30ನೇ ವರ್ಷದ ಗಣೇಶೋತ್ಸವ ಸಮಾರಂಭ

Share

ಕುಂದಾಪುರ:ಆಲೂರು – ಹರ್ಕೂರು ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ 30ನೇ ವರ್ಷದ ಗಣೇಶೋತ್ಸವ ಆಚರಣೆ ವಿಜೃಂಭಣೆಯಿಂದ ನಡೆಯಿತು.ವರ್ಷಂಪ್ರತಿ ನಡೆದು ಬಂದಂತೆ ಈ ವರ್ಷವೂ ಕೂಡ ಗಣೇಶನ ವಿಗ್ರಹವನ್ನು ಆಲೂರು ಶ್ರೀರಾಮ ಮಂದಿರದಲ್ಲಿ ಪ್ರತಿಷ್ಠಾಪಿಸಿ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ
ಮೂರು ದಿನಗಳ ಕಾಲ ಪೂಜಿಸಿ ಗುರುವಾರದಂದು ಸೌಪರ್ಣಿಕಾ ನದಿಯಲ್ಲಿ ಗಣೇಶ ವಿಗ್ರಹವನ್ನು ಜಲಸ್ತಂಭನ ಮಾಡಲಾಯಿತು.ಉತ್ಸವದಂತೆ ಆಚರಣೆಗೊಳ್ಳುವ ಗಣೇಶೋತ್ಸವ ಕಾರ್ಯಕ್ರಮ ಆಲೂರು ಹರ್ಕೂರು ಗ್ರಾಮಸ್ಥರ ಒಗ್ಗೂಡುವಿಕೆಯಿಂದ ನಡೆಯುವುದು ವಿಶೇಷವಾಗಿದೆ.ಗಣೇಶೋತ್ಸವ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕ ಮಹಾ ಅನ್ನಸಂತರ್ಪಣೆ .ಶಾಲಾ ಮಕ್ಕಳು ಮತ್ತು ಸಾರ್ವಜನಿಕರಿಂದ ಸಾಂಸ್ಕೃತಿಕ ಕಾರ್ಯಕ್ರಮ,ಸಂಗೀತ ರಸಮಂಜರಿ ಕಾರ್ಯಕ್ರಮ, ಭಜನಾ ಕಾರ್ಯಕ್ರಮ, ಯಕ್ಷಗಾನ ಕಾರ್ಯಕ್ರಮ, ಧಾರ್ಮಿಕ ಸಭಾ ಕಾರ್ಯಕ್ರಮ,ಜರಗಿತು.ಊರ ಗ್ರಾಮಸ್ಥರು ಶ್ರೀ ಮಹಾಗಣಪತಿ ದೇವರ ಪ್ರಸಾದ ಸ್ವೀಕರಿಸಿದರು.ಅದ್ದೂರಿ ಮೆರವಣಿಗೆಯೊಂದಿಗೆ ಸೌಪರ್ಣಿಕಾ ನದಿಯಲ್ಲಿ ಗಣೇಶ ವಿಗ್ರಹವನ್ನು ವಿಸರ್ಜನೆ ಮಾಡಲಾಯಿತು.ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Advertisement

Share

Leave a comment

Your email address will not be published. Required fields are marked *

You cannot copy content of this page