ಗಂಗೊಳ್ಳಿ:ವಿದ್ಯಾಗಣಪತಿ ಉತ್ಸವ,ವಿದ್ಯಾರ್ಥಿ ವೇತನ ವಿತರಣೆ

Share

Advertisement
Advertisement
Advertisement

ಗಂಗೊಳ್ಳಿ:ಬಿಲ್ಲವರ ಸಮಾಜ ಸೇವಾ ಸಂಘ ಗಂಗೊಳ್ಳಿ ವತಿಯಿಂದ 13ನೇ ವರ್ಷದ ವಿದ್ಯಾಗಣಪತಿ ಉತ್ಸವ,ವಿದ್ಯಾರ್ಥಿ ವೇತನ ಹಾಗೂ ಪ್ರತಿಭಾ ಪುರಸ್ಕಾರ ವಿತರಣಾ ಕಾರ್ಯಕ್ರಮ ಶ್ರೀ ವೀರೇಶ ಮಾಂಗಲ್ಯ ಮಂದಿರ ಗಂಗೊಳ್ಳಿಯಲ್ಲಿ ಬುಧವಾರ ನಡೆಯಿತು.ಶ್ರೀ ವಿದ್ಯಾಗಣಪತಿ ದೇವರ ಭವ್ಯ ಮೆರವಣಿಗೆ ವಿಜೃಂಭಣೆಯಿಂದ ಜರುಗಿತು.
ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಆನಂದ ಬಿಲ್ಲವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ,ಸಂಘಟಣೆಗಳನ್ನು ಹುಟ್ಟು ಹಾಕುವುದು ಸುಲಭ ಮುಂದುವರೆಸಿಕೊಂಡು ಹೋಗುವುದು ಕಷ್ಟ,ಸಂಘಗಳ ಬೆಳವಣಿಗೆಗೆ ಸಮಾಜ ಬಾಂಧವರು ಕೊಡುಗೆಗಳನ್ನು ನೀಡಿದಾಗ ಮಾತ್ರ ಸಂಘವು ಸದೃಢವಾಗಿ ಬೆಳೆಯಲು ಸಾಧ್ಯವಿದೆ.ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಿದ್ಯಾರ್ಥಿವೇತನ ನಿಡುತ್ತಿರುವುದು ಶ್ಲಾಘನೀಯ ಕೆಲಸ ಎಂದು ಹೇಳಿದರು.
ಬಿಲ್ಲವ ಸಮಾಜ ಸೇವಾ ಸಂಘ ಗಂಗೊಳ್ಳಿ ಮಾಜಿ ಅಧ್ಯಕ್ಷ ಮುತ್ತ ಬಿಲ್ಲವ ಮಾತನಾಡಿ,ಸ್ವಜಾತಿ ಬಾಂಧವರ ಸಹಕಾರ ಮತ್ತು ಹಿರಿಯರ ಆರ್ಶೀವಾದದಿಂದ ವಿದ್ಯಾಗಣಪತಿ ಉತ್ಸವ ನಡೆಯುತ್ತಾ ಬಂದಿದೆ.ವಿದ್ಯಾರ್ಥಿ ವೇತನ ಮತ್ತು ಪುರಸ್ಕಾರವನ್ನು ಪಡೆದಂತಹ ವಿದ್ಯಾರ್ಥಿಗಳು ಸಮಾಜಕ್ಕೆ ತಮ್ಮ ಕೊಡುಗೆ ನೀಡುವಂತೆ ಆಗಬೇಕು ಎಂದರು.ವಿದ್ಯಾಗಣಪತಿ ಸ್ಥಾಪಕಾಧ್ಯಕ್ಷ ಗಣೇಶ ಪೂಜಾರಿ ಉದ್ಘಾಟಿಸಿ ಶುಭಹಾರೈಸಿದಿರು.ಮಹೇಶ ಬಿ ಪೂಜಾರಿ ಬಾವಿಹಿತ್ಲು ಗಂಗೊಳ್ಳಿ ವಿದ್ಯಾರ್ಥಿವೇತನ ವಿತರಣೆ ಮಾಡಿದರು.ಗುಜ್ಜಾಡಿ ಸಂಘದ ಕೋಶಾಧಿಕಾರಿ ಪ್ರದೀಪ್ ಪೂಜಾರಿ ಬಹುಮಾನ ವಿತರಿಸಿದರು.ಬಿಲ್ಲವ ಸಮಾಜ ಸೇವಾ ಸಂಘ ಗಂಗೊಳ್ಳಿ ಅಧ್ಯಕ್ಷ ಗೋಪಾಲ ಬಿಲ್ಲವ,ರಘುರಾಮ ಪೂಜಾರಿ,ಸುರೇಶ್ ಪೂಜಾರಿ ಕೋಟೆಬಾಗಿಲು ಉಪಸ್ಥಿತರಿದ್ದರು.ಸಮಾಜ ಬಂಟಗರಡಿ ಮತ್ತು ದೈವದ 11 ಪಾರ್ಥಿಗಳನ್ನು ಸನ್ಮಾನಿಸಲಾಯಿತು.ಎಸ್‍ಎಸ್‍ಎಲ್‍ಎಸಿ ಮತ್ತು ಪಿ.ಯು.ಸಿ ಅತಿ ಹೆಚ್ಚು ಅಂಕಗಳಿಸಿದ ಸಮಾಜದ ವಿದ್ಯಾರ್ಥಿಗಳಿಗೆ,ಕ್ರೀಡಾ ಸಾಧಕರನ್ನು ಸನ್ಮಾನಿಸಲಾಯಿತು.ಸಂಘಟನಾ ಕಾರ್ಯದರ್ಶಿ ಕೃಷ್ಣ ಪೂಜಾರಿ ಮತ್ತು ಉಪನ್ಯಾಸಕಿ ಸುಮತಿ ಬಿಲ್ಲವ ನಿರೂಪಿಸಿದರು.ಪ್ರೇಮಾ ಸಿ ಪೂಜಾರಿ ವಾಚಿಸಿದರು.ರಾಧ.ಬಿ ವಂದಿಸಿದರು.

Advertisement


Share

Leave a comment

Your email address will not be published. Required fields are marked *

You cannot copy content of this page