ಬೈಂದೂರು:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ ಅದರ 2022-23ನೇ ಸಾಲಿನ ವಾರ್ಷಿಕ ಮಹಾಸಭೆ ನಾವುಂದ ಮಹಾಗಣಪತಿ ಮಾಂಗಲ್ಯ ಮಂಟಪದಲ್ಲಿ ಶನಿವಾರ ನಡೆಯಿತು.
ಮಹಾಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಸಂಘದ ಅಧ್ಯಕ್ಷೆ ಸವಿತಾ ಖಾರ್ವಿ ಮಾತನಾಡಿ,ಸಂಘದ ತ್ವರಿತಗತಿ ಬೆಳವಣಿಗೆ,ಲಾಭಾಂಶ,ಧೀರ್ಘಾವಧಿ ಗೃಹಸಾಲ ಹಾಗೂ ಮುಂದಿನ ಯೋಜನೆಗಳ ಬಗ್ಗೆ ವಿವರಿಸಿದರು.ಸಂಘದ ಲೆಕ್ಕಿಗ ರೇಖಾ ನಿವ್ವಳ ಲಾಭ್ ವಿಂಗಡಣೆ ಮತ್ತು ಮುಂದಿನ ಸಾಲಿನ ಅಂದಾಜು ಆಯ-ವ್ಯಯ ಪಟ್ಟಿ ಬಜೆಟ್ ಮಂಜೂರಾತಿಯನ್ನು ಓದಿ ಹೇಳಿದರು.ಗುಮಾಸ್ತೆ ಚೈತ್ರಾ ಹಿಂದಿನ ಮಹಾಸಭೆ ನಡವಳಿಕೆಯನ್ನು ಓದಿ ಹೇಳಿದರು.ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಶ್ರೀನಿವಾಸ ಅಡಿಗ ಸಂಘದ ಕಾರ್ಯ ಚಟುವಟಿಕೆ ಕುರಿತು ವಿವರಿಸಿದರು.ಸಂಘದ ಉಪಾಧ್ಯಕ್ಷೆ ಪೂರ್ಣಿಮಾ ಮೊಗವೀರ ನಾವುಂದ,ನಿರ್ದೇಶಕರುಗಳಾದ ಶೈಲಾ ಖಾರ್ವಿ,ಗಿರಿಜ ಖಾರ್ವಿ,ಆಶಾ ಉಳ್ಳೂರು,ಸುಜಾತ ಪೂಜಾರಿ,ಸೀತಾ ಖಾರ್ವಿ,ಮುಕಾಂಬು ಖಾರ್ವಿ,ನಬಿಸಾ ನಾವುಂದ ಉಪಸ್ಥಿತರಿದ್ದರು.ಕೆ.ಶ್ರೀನಿವಾಸ ಅಡಿಗ ಸ್ವಾಗತಿಸಿದರು.ಹರ್ಷ ವಂದಿಸಿದರು.
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…