ಕುಂದಾಪುರ

ಗಂಗೊಳ್ಳಿ:ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸಮಾರೋಪ ಸಮಾರಂಭ

Share

Advertisement
Advertisement

ಕುಂದಾಪುರ:ಉಡುಪಿ ಜಿಲ್ಲಾ ಪಂಚಾಯತ್,ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ ಉಡುಪಿ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಸ.ವಿ. ಆಂಗ್ಲ ಮಾಧ್ಯಮ ಪ್ರೌಢಶಾಲೆ ಗಂಗೊಳ್ಳಿ ಆಶ್ರಯದಲ್ಲಿ ಗಂಗೊಳ್ಳಿ ಎಸ್.ವಿ. ಪದವಿ ಪೂರ್ವ ಕಾಲೇಜಿನ ವಠಾರದಲ್ಲಿ ನಡೆದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ-ಬಾಲಕಿಯರ ಉಡುಪಿ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದ ಸಮಾರೋಪ ಸಮಾರಂಭ ಗುರುವಾರ ನಡೆಯಿತು.
ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಎಂ.ನಾಗೇಂದ್ರ ಪೈ,ಶಾಲೆಯ ಶಿಕ್ಷಕ-ರಕ್ಷಕ ಸಮಿತಿ ಉಪಾಧ್ಯಕ್ಷ ಜಿ.ವಿಠಲ ಶೆಣೈ ವಿಜೇತರಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು.ಪಂಚಾಯತ್ ಸದಸ್ಯ ಬಿ.ರಾಘವೇಂದ್ರ ಪೈ,ಎಸ್.ವಿ.ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್ ಮತ್ತು ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ನಾಗರಾಜ ಶೆಟ್ಟಿ,ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಸೂರಜ್ ಸಾರಂಗ್ ಮತ್ತು ಲಾವಣ್ಯ ಉಪಸ್ಥಿತರಿದ್ದರು.ಸಹಶಿಕ್ಷಕಿ ಸುಜಾತಾ ಸ್ವಾಗತಿಸಿ,ನಿರ್ವಹಿಸಿದರು.
ಫಲಿತಾಂಶ :-
17 ವರ್ಷದ ಒಳಗಿನ
:ಬಾಲಕರ ವಿಭಾಗ:ಬ್ರಹ್ಮಾವರ ತಾಲೂಕು ಚೇತನಾ ಹೈಸ್ಕೂಲ್ (ಪ್ರಥಮ), ಕುಂದಾಪುರ ತಾಲೂಕು ಎಸ್.ವಿ. ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ (ದ್ವಿತೀಯ)
ಬಾಲಕಿಯರ ವಿಭಾಗ:ಕಾರ್ಕಳ ತಾಲೂಕು ಸರಕಾರಿ ಪ್ರೌಢಶಾಲೆ ಪೆರ್ವಾಜೆ (ಪ್ರಥಮ), ಬ್ರಹ್ಮಾವರ ತಾಲೂಕು ಎಸ್.ವಿ.ವಿ.ಎನ್. ಆಂಗ್ಲ ಮಾಧ್ಯಮ ಶಾಲೆ ಹೇರಾಡಿ (ದ್ವಿತೀಯ)
14 ವರ್ಷದ ಒಳಗಿನ:ಬಾಲಕರ ವಿಭಾಗ:ಬ್ರಹ್ಮಾವರ ತಾಲೂಕು ಎಸ್.ವಿ.ವಿ.ಎನ್. ಆಂಗ್ಲ ಮಾಧ್ಯಮ ಶಾಲೆ ಹೇರಾಡಿ (ಪ್ರಥಮ),ಕುಂದಾಪುರ ತಾಲೂಕು ಎಸ್.ವಿ. ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ (ದ್ವಿತೀಯ)
ಬಾಲಕಿಯರ ವಿಭಾಗ:ಬ್ರಹ್ಮಾವರ ತಾಲೂಕು ಎಸ್.ವಿ.ವಿ.ಎನ್. ಆಂಗ್ಲ ಮಾಧ್ಯಮ ಶಾಲೆ ಹೇರಾಡಿ (ಪ್ರಥಮ), ಕಾರ್ಕಳ ತಾಲೂಕು ಸರಕಾರಿ ಪ್ರೌಢಶಾಲೆ ಪೆರ್ವಾಜೆ (ದ್ವಿತೀಯ)

Advertisement
Advertisement
Advertisement

Share
Team Kundapur Times

Recent Posts

ತ್ರಾಸಿ:ಹೆದ್ದಾರಿಯಲ್ಲಿ ಕಾರಿಗೆ ಅಡ್ಡ ಬಂದ ಗೂಳಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮುರುಡೇಶ್ವರ ದಿಂದ ಉಡುಪಿಗೆ ಸಾಗುತ್ತಿದ್ದ ಕಾರಿಗೆ ತ್ರಾಸಿ ಸಮೀಪ ಮೊವಾಡಿ ಕ್ರಾಸ್‍ನಲ್ಲಿ ಗೂಳಿಯೊದು ಅಡ್ಡ ಬಂದ…

14 hours ago

ಅಬ್ಬರಿಸಿದ ಮಳೆಗೆ ಉಕ್ಕೇರಿದ ಕಡಲು:ಜನರಲ್ಲಿ ಮೂಡಿದ ಆತಂಕ

ಕುಂದಾಪುರ:ಬುಧವಾರ ಸುರಿದ ಭಾರಿ ಗಾಳಿ ಮಳೆಗೆ ಕಡಲು ಉಕ್ಕೇರಿದ ಪರಿಣಾಮ ಕಂಚುಗೋಡು ಭಾಗದಲ್ಲಿ ಬೃಹತ್ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸಿದೆ.ಅಲೆಗಳ…

2 days ago

ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನಿಂದ ಸಂಭ್ರಮದ ದಸರಾ ಆಚರಣೆ

ಕುಂದಾಪುರ:ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಕುಂದಾಪುರ,ಸುಜ್ಞಾನ ಪದವಿ ಪೂರ್ವ ಕಾಲೇಜು,ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ಯಡಾಡಿ-ಮತ್ಯಾಡಿ, ಇಲ್ಲಿ ದಸರಾ ಹಬ್ಬವನ್ನು ಸಂಭ್ರಮದಿಂದ…

3 days ago

ಬಿ.ಎಚ್.ಪಿ ಮೀನುಗಾರಿಕಾ ಬೋಟ್ ಶುಭಾರಂಭ

ಕುಂದಾಪುರ:ಮೀನುಗಾರಿಕಾ ವೃತ್ತಿಯಲ್ಲಿ ಹಲವಾರು ವರ್ಷಗಳ ಅನುಭವವನ್ನು ಹೊಂದಿರುವ ಮತ್ಸೋದ್ಯಮಿಗಳಾದ ಉಪ್ಪುಂದ ನಾಗರಾಜ ಖಾರ್ವಿ ಮತ್ತು ಸುಬ್ರಹ್ಮಣ್ಯ ಖಾರ್ವಿ ಮಾಲೀಕತ್ವದ ಬಿ.ಎಚ್.ಪಿ…

4 days ago

ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಖಾಸಗಿ ಬಸ್‌:ಚಾಲಕ ಸ್ಥಳದಲ್ಲೇ ಸಾವು

ನೈಲಾಡಿ:ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ…

5 days ago

ಧರ್ಮ ಗಂಗೋತ್ರಿ ಭರತ ಶೆಟ್ಟಿ ಸಿ.ಸಿ.ಎಫ್ ಮೆಂಬರ್ ಆಗಿ ಆಯ್ಕೆ

ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಲ್ಲೂರು ನಿವಾಸಿ ಧರ್ಮಗಂಗೋತ್ರಿ ಭರತ್ ಶೆಟ್ಟಿ ಅವರು ಭಾರತ ಸಂವಿಧಾನದ ಕಾರ್ಯವನ್ನುವಿಜಿಲೆಕ್ಸ್ ಅಪರಾಧ ನಿಯಂತ್ರಣ…

6 days ago