ಪಡುಕೋಣೆ:ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ:ರಜತ ಮಹೋತ್ಸವ ಸಂಭ್ರಮ
![](https://kundapurtimes.com/wp-content/uploads/2023/09/WhatsApp-Image-2023-09-22-at-9.26.19-PM-1024x1024.jpeg)
ಬೈಂದೂರು:ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶ್ರೀ ಮಹಾವಿಷ್ಣು ದೇವಸ್ಥಾನ ಹಡವು-ಪಡುಕೋಣೆ ಹಾಗೂ ಶ್ರೀ ಮಹಾವಿಷ್ಣು ಫ್ರೆಂಡ್ಸ್ ಸರ್ಕಲ್ ಸಹಭಾಗಿತ್ವದಲ್ಲಿ ರಜತ ಮಹೋತ್ಸವ ಸಂಭ್ರಮ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು.ಕಳೆದ 25 ವರ್ಷಗಳಿಂದ ಶ್ರೀಮಹಾವಿಷ್ಣು ದೇವಸ್ಥಾನದಲ್ಲಿ ಗಣೇಶ ಚತುರ್ಥಿ ದಿನದಂದು ಗಣೇಶ ವಿಗ್ರಹವನ್ನು ಪ್ರತಿಷ್ಠಾಪಿಸಿ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಪೂಜಿಸಿಕೊಂಡು ಬರಲಾಗುತ್ತಿದೆ.ಮೂರೂ ದಿನಗಳ ಕಾಲ ಆಚರಣೆ ಗೊಳ್ಳುವ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮ ಗುರುವಾರ ಸಂಪನ್ನಗೊಂಡಿತು.ಮಹಾ ಅನ್ನಸಂತರ್ಪಣೆ ಸಹಿತ ಧಾರ್ಮಿಕ ಕಾರ್ಯಕ್ರಮ, ಮನರಂಜನೆ ಕಾರ್ಯಕ್ರಮ, ಧಾರ್ಮಿಕ ಸಭಾ ಕಾರ್ಯಕ್ರಮ ಜರುಗಿತು.ಮಂಗಳ ಮೂರ್ತಿ ಮೆರವಣಿಗೆ ವಿಜೃಂಭಣೆಯಿಂದ ನಡೆಯಿತು.ಸೌಪರ್ಣಿಕಾ ನದಿಯಲ್ಲಿ ಗಣೇಶ ವಿಗ್ರಹವನ್ನು ವಿಸರ್ಜನೆ ಮಾಡಲಾಯಿತು.ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷರು, ಗೌರವಾಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.