ಕುಂದಾಪುರ:ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘ ಗಂಗೊಳ್ಳಿ ಅದರ 2022-23ನೇ ಸಾಲಿನ ವಾರ್ಷಿಕ ಸರ್ವಸದಸ್ಯರ ಸಾಮಾನ್ಯ ಸಭೆ ವೀರೇಶ ಮಾಂಗಲ್ಯ ಮಂದಿರ ಗಂಗೊಳ್ಳಿಯಲ್ಲಿ ಶನಿವಾರ ನಡೆಯಿತು.ಮುಳುಗುತಜ್ಞ ದಿನೇಶ್ ಖಾರ್ವಿ ಗಂಗೊಳ್ಳಿ ಲೈಟ್ಹೌಸ್ ಅವರನ್ನು ಸಘದ ವತಿಯಿಂದ ಸನ್ಮಾನಿಸಲಾಯಿತು.
84ನೇ ವರ್ಷದ ಸಮಾನ್ಯ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ ಮಾತನಾಡಿ,ಸಂಘದ ಸದಸ್ಯರು ಮತ್ತು ಠೇವಣಿದಾರರ ಸಹಕಾರದಿಂದ ಸಂಘವು ಅಭಿವೃದ್ಧಿ ಹೊಂದಲು ಸಹಕಾರಿ ಆಗಿದೆ.ಸದಸ್ಯರು ಸೂಕ್ತವಾದ ಸಲಹೆ ಸೂಚನೆಗಳನ್ನು ನೀಡಿ ಸಂಘದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಕೇಳಿಕೊಂಡರು.ಪ್ರಸ್ತುತ ವರ್ಷದಲ್ಲಿ 48 ಕೋಟಿ.ರೂ ವಹಿವಾಟು ನಡೆಸಲಾಗಿದ್ದು,40 ಲಕ್ಷ.ರೂ ನಿವ್ವಳ ಲಾಭಾ ಗಳಿಸಲಾಗಿದೆ ಎಂದರು.ಲಾಭಾಂಶದಲ್ಲಿ ಸಂಘದ ಸದಸ್ಯರಿಗೆ 15% ಡಿವಿಡೆಂಟ್ ಘೋಷಣೆ ಮಾಡಿದರು.ಮುಂದಿನ ಯೋಜನೆ ಭಾಗವಾಗಿ ಸಂಘಕ್ಕೆ ಸ್ವಂತ ಕಟ್ಟಡ ನಿರ್ಮಾಣ ಮಾಡಲು ಗಂಗೊಳ್ಳಿ ಪೇಟೆಯಲ್ಲಿ 13ಸೆಂಟ್ಸ್ ಜಾಗವನ್ನು ಖರೀದಿಸಲಾಗಿದೆ.ಇದರ ಜತೆಗೆ ಕುಂದಾಪುರ ಭಾಗದ ಜನರಿಗೆ ಉತ್ತಮ ರೀತಿಯ ಬ್ಯಾಂಕಿಂಗ್ ಸೌಲಭ್ಯವನ್ನು ಕಲ್ಪಿಸುವ ದೃಷ್ಟಿಯಿಂದ ಹವಾನಿಯಂತ್ರಿತ ಹೊಸ ಶಾಖೆಯನ್ನು ಆರಂಭಿಸಲಾಗುವುದು ಎಂದು ಹೇಳಿದರು.ಈ ಸಂದರ್ಭ ಉಪಾಧ್ಯಕ್ಷ ಸೂರಜ್ ಖಾರ್ವಿ,ನಿರ್ದೇಶಕರಾದ ಹರೀಶ್ ಖಾರ್ವಿ,ಚಂದ್ರ,ಮೋಹನ್ ಖಾರ್ವಿ,ಗುರುರಾಜ್ ಖಾರ್ವಿ,ನಾಗ ಖಾರ್ವಿ,ರಾಜೇಶ್ ಸಾರಂಗ್,ಜ್ಯೋತಿ ಆರ್,ಸರೋಜಿನಿ,ಸುಮತಿ ಉಪಸ್ಥಿತರಿದ್ದರು.ಸಂಘದ ವ್ಯವಸ್ಥಾಪಕ ಮೋಹನ್ ಖಾರ್ವಿ ಆಡಳಿತ ವರದಿಯನ್ನು ಓದಿ ಹೇಳಿದರು.ಕೇಶವ ಖಾರ್ವಿ ನಿರೂಪಿಸಿದರು.ಸಿಇಒ ರವಿಚಂದ್ರ ಖಾರ್ವಿ ವಂದಿಸಿದರು.ಸಂಘದ ಸದಸ್ಯರು ಸಾಮಾನ್ಯ ಸಭೆಯಲ್ಲಿ ಭಾಗವಹಿಸಿದ್ದರು.
2022-23 ನೇ ಸಾಲಿನಲ್ಲಿ ಸಹಕಾರ ಕ್ಷೇತ್ರದ ವ್ಯವಹಾರದಲ್ಲಿ ಸರ್ವತೋಮುಖ ಪ್ರಗತಿ ಸಾಧಿಸಿದ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಅತ್ಯುತ್ತಮ ಸಹಕಾರಿ ಸಂಘಕ್ಕೆ ನೀಡುವ ಸಾಧನಾ ಶ್ರೀ ನೀಡಿ ಗೌರವಿಸಿದೆ .
(ಮುಳುಗುತಜ್ಞ ದಿನೇಶ್ ಖಾರ್ವಿ ಗಂಗೊಳ್ಳಿ ಲೈಟ್ಹೌಸ್ ಅವರನ್ನು ಸಘದ ವತಿಯಿಂದ ಸನ್ಮಾನಿಸಲಾಯಿತು)
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…