ಕುಂದಾಪುರ

ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘ ಸಾಮಾನ್ಯ ಸಭೆ:15% ಡಿವಿಡೆಂಟ್ ಘೋಷಣೆ

Share

Advertisement
Advertisement
Advertisement

ಕುಂದಾಪುರ:ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘ ಗಂಗೊಳ್ಳಿ ಅದರ 2022-23ನೇ ಸಾಲಿನ ವಾರ್ಷಿಕ ಸರ್ವಸದಸ್ಯರ ಸಾಮಾನ್ಯ ಸಭೆ ವೀರೇಶ ಮಾಂಗಲ್ಯ ಮಂದಿರ ಗಂಗೊಳ್ಳಿಯಲ್ಲಿ ಶನಿವಾರ ನಡೆಯಿತು.ಮುಳುಗುತಜ್ಞ ದಿನೇಶ್ ಖಾರ್ವಿ ಗಂಗೊಳ್ಳಿ ಲೈಟ್‍ಹೌಸ್ ಅವರನ್ನು ಸಘದ ವತಿಯಿಂದ ಸನ್ಮಾನಿಸಲಾಯಿತು.
84ನೇ ವರ್ಷದ ಸಮಾನ್ಯ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ ಮಾತನಾಡಿ,ಸಂಘದ ಸದಸ್ಯರು ಮತ್ತು ಠೇವಣಿದಾರರ ಸಹಕಾರದಿಂದ ಸಂಘವು ಅಭಿವೃದ್ಧಿ ಹೊಂದಲು ಸಹಕಾರಿ ಆಗಿದೆ.ಸದಸ್ಯರು ಸೂಕ್ತವಾದ ಸಲಹೆ ಸೂಚನೆಗಳನ್ನು ನೀಡಿ ಸಂಘದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಕೇಳಿಕೊಂಡರು.ಪ್ರಸ್ತುತ ವರ್ಷದಲ್ಲಿ 48 ಕೋಟಿ.ರೂ ವಹಿವಾಟು ನಡೆಸಲಾಗಿದ್ದು,40 ಲಕ್ಷ.ರೂ ನಿವ್ವಳ ಲಾಭಾ ಗಳಿಸಲಾಗಿದೆ ಎಂದರು.ಲಾಭಾಂಶದಲ್ಲಿ ಸಂಘದ ಸದಸ್ಯರಿಗೆ 15% ಡಿವಿಡೆಂಟ್ ಘೋಷಣೆ ಮಾಡಿದರು.ಮುಂದಿನ ಯೋಜನೆ ಭಾಗವಾಗಿ ಸಂಘಕ್ಕೆ ಸ್ವಂತ ಕಟ್ಟಡ ನಿರ್ಮಾಣ ಮಾಡಲು ಗಂಗೊಳ್ಳಿ ಪೇಟೆಯಲ್ಲಿ 13ಸೆಂಟ್ಸ್ ಜಾಗವನ್ನು ಖರೀದಿಸಲಾಗಿದೆ.ಇದರ ಜತೆಗೆ ಕುಂದಾಪುರ ಭಾಗದ ಜನರಿಗೆ ಉತ್ತಮ ರೀತಿಯ ಬ್ಯಾಂಕಿಂಗ್ ಸೌಲಭ್ಯವನ್ನು ಕಲ್ಪಿಸುವ ದೃಷ್ಟಿಯಿಂದ ಹವಾನಿಯಂತ್ರಿತ ಹೊಸ ಶಾಖೆಯನ್ನು ಆರಂಭಿಸಲಾಗುವುದು ಎಂದು ಹೇಳಿದರು.ಈ ಸಂದರ್ಭ ಉಪಾಧ್ಯಕ್ಷ ಸೂರಜ್ ಖಾರ್ವಿ,ನಿರ್ದೇಶಕರಾದ ಹರೀಶ್ ಖಾರ್ವಿ,ಚಂದ್ರ,ಮೋಹನ್ ಖಾರ್ವಿ,ಗುರುರಾಜ್ ಖಾರ್ವಿ,ನಾಗ ಖಾರ್ವಿ,ರಾಜೇಶ್ ಸಾರಂಗ್,ಜ್ಯೋತಿ ಆರ್,ಸರೋಜಿನಿ,ಸುಮತಿ ಉಪಸ್ಥಿತರಿದ್ದರು.ಸಂಘದ ವ್ಯವಸ್ಥಾಪಕ ಮೋಹನ್ ಖಾರ್ವಿ ಆಡಳಿತ ವರದಿಯನ್ನು ಓದಿ ಹೇಳಿದರು.ಕೇಶವ ಖಾರ್ವಿ ನಿರೂಪಿಸಿದರು.ಸಿಇಒ ರವಿಚಂದ್ರ ಖಾರ್ವಿ ವಂದಿಸಿದರು.ಸಂಘದ ಸದಸ್ಯರು ಸಾಮಾನ್ಯ ಸಭೆಯಲ್ಲಿ ಭಾಗವಹಿಸಿದ್ದರು.

Advertisement

2022-23 ನೇ ಸಾಲಿನಲ್ಲಿ ಸಹಕಾರ ಕ್ಷೇತ್ರದ ವ್ಯವಹಾರದಲ್ಲಿ ಸರ್ವತೋಮುಖ ಪ್ರಗತಿ ಸಾಧಿಸಿದ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಅತ್ಯುತ್ತಮ ಸಹಕಾರಿ ಸಂಘಕ್ಕೆ ನೀಡುವ ಸಾಧನಾ ಶ್ರೀ ನೀಡಿ ಗೌರವಿಸಿದೆ ‌.

(ಮುಳುಗುತಜ್ಞ ದಿನೇಶ್ ಖಾರ್ವಿ ಗಂಗೊಳ್ಳಿ ಲೈಟ್‍ಹೌಸ್ ಅವರನ್ನು ಸಘದ ವತಿಯಿಂದ ಸನ್ಮಾನಿಸಲಾಯಿತು)

Advertisement
Advertisement

Share
Team Kundapur Times

Recent Posts

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

4 days ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

5 days ago

ಸ್ಕೂಟರ್‍ನಲ್ಲಿ ಗೋಮಾಂಸ ಸಾಗಾಟ:ಆರೋಪಿ ಅರೆಸ್ಟ್

ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…

1 week ago

ಜೂನ್.29 ರಂದು ಭೀಮ ಶಕ್ತಿ ಸಮಾವೇಶ

ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…

1 week ago

ಆಯುರ್ವೇದ ವೈದ್ಯ ಡಾ.ಶ್ರೀನಿವಾಸ್ ಪೈ

ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…

1 week ago

ವ್ಯಾಯಾಮ ಮತ್ತು ಯೋಗಾಸನ ನಡುವಿನ ವ್ಯತ್ಯಾಸ ಕಾರ್ಯಕ್ರಮ ಚಂದನ ಟಿವಿಯಲ್ಲಿ ನೇರ ಪ್ರಸಾರ

ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…

3 weeks ago