ಕುಂದಾಪುರ

ಪಡುಕೋಣೆ:ನಾಟಿ ವೈದ್ಯ ಮಾಕ್ಷಿಮ್ ಒಲಿವೆರಾ ಗಿಡಮೂಲಿಕೆ ಔಷಧ ನೀಡಿಕೆ

Share

Advertisement
Advertisement

ಕುಂದಾಪುರ:ತಾಲೂಕಿನ ನಾಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡುಕೋಣೆ ನಿವಾಸಿ ಮಾಕ್ಷಿಮ್ ಒಲಿವೆರಾ ಅವರು ಕಳೆದ 25 ವರ್ಷಗಳಿಂದ ನಾಟಿ ಔಷಧವನ್ನು ನೀಡುವುದರ ಮುಖೇನ ಸಾವಿರಾರು ಜನರನ್ನು ರೋಗ ಮುಕ್ತಗೊಳಿಸುವುದರ ಮೂಲಕ ವಿಶಿಷ್ಟವಾದ ಸಾಧನೆಗೆ ಪಾತ್ರರಾಗಿದ್ದಾರೆ ಅವರ ಸಮಾಜಿಕ ಸೇವೆಯನ್ನು ಗುರುತಿಸಿ ಹಲವಾರು ಸಂಘ ಸಂಸ್ಥೆಗಳು ಸನ್ಮಾನಿಸಿವೆ.
ನಾಟಿ ಔಷಧವನ್ನು ಕೊಡುತ್ತಿರುವ ತಮ್ಮ ತಂದೆಯೊಂದಿಗೆ ಕೂಡಿಕೊಂಡು ಮಾಕ್ಷಿಮ್ ಒಲಿವೆರಾ ಅವರು ತಮ್ಮ 20ನೇ ವಯಸ್ಸಿನಲ್ಲಿಯೇ ಪ್ರಕೃತಿಯಲ್ಲಿ ಸಿಗುವ ಔಷಧ ಗಿಡಗಳ ಮಾಹಿತಿಯನ್ನು ಪಡೆದುಕೊಂಡು ಕ್ರಮೇಣ ತಂದೆಯ ಕಾಲದ ನಂತರ ಸ್ವತಂತ್ರವಾಗಿ ನಾಟಿ ಔಷಧವನ್ನು ನೀಡುತ್ತಾ ಬಂದಿರುತ್ತಾರೆ.
ಋಷಿಮುನಿಗಳು,ವೇದ ಪಂಡಿತರ ಕಾಲದಲ್ಲಿದ್ದ ನಾಟಿ ಔಷಧ ಪದ್ಧತಿಗೆ ಶತ ಶತಮಾನಗಳಷ್ಟು ಇತಿಹಾಸವಿದೆ ಭಾರತದ ಔಷಧ ಮೂಲವೆ ನಾಟಿ ಔಷಧ ಎಂದರೆ ತಪ್ಪಾಗಲಾರದು.ಆಧುನಿಕ ಚಿಕಿತ್ಸಾ ಪದ್ಧತಿಯ ಕಾಲದಲ್ಲಿಯೂ ನಾಟಿ ಔಷಧಕ್ಕೆ ಬಹಳಷ್ಟು ಮಾನ್ಯತೆ ಇದೆ.ನಾಟಿ ಔಷಧದ ಚಿಕಿತ್ಸೆಯನ್ನು ಪಡೆದುಕೊಳ್ಳಲು ವಿದೇಶಿಗರು ಭಾರತದ ಹಳ್ಳಿಗಳತ್ತಾ ಧಾವಿಸಿ ಬರುತ್ತಿರುವುದು ಒಂದು ದೊಡ್ಡ ನಿದರ್ಶನವಾಗಿದೆ.

Advertisement

ಕನಿಷ್ಠ ದರದಲ್ಲಿ ರೋಗ ಗುಣಪಡಿಸುವಿಕೆ:ನಾಟಿ ವೈದ್ಯರಾದ ಮಾಕ್ಷಿಮ್ ಒಲಿವೆರಾ ಅವರು ಮೂತ್ರಕೋಶ ಹಾಗೂ ಪಿತ್ತಕೋಶದ ಕಲ್ಲು,ಸರ್ಪಸುತ್ತು,ಬಾವು,ಹೊಟ್ಟೆ ಸಮಸ್ಯೆ,ಹಾವು ಕಡಿತ,ಮೂಲವ್ಯಾಧಿ,6 ರೀತಿಯ ಜಾಂಡೀಸ್ ಕಾಯಿಲೆಗಳು,ಗರ್ಭಕೋಶದ ಸಮಸ್ಯೆ ಹಾಗೂ ಆರಂಭಿಕ ಹಂತದಲ್ಲಿರುವ ಕ್ಯಾನ್ಸರ್ ಸಹಿತ ಹಲವಾರು ಕಾಯಿಲೆಗಳಿಗೆ ನಾಟಿ ಔಷಧವನ್ನು ನೀಡುತ್ತಾರೆ.ಸಕ್ಕರೆ ಕಾಯಿಲೆಯಂತ ರೋಗಕ್ಕೂ ಮಾಕ್ಷಿಮ್ ಒಲಿವೆರಾ ನೀಡುವ ಔಷಧ ಪರಿಣಾಮಕಾರಿ ಕೆಲಸವನ್ನು ಮಾಡುತ್ತದೆ ಎಂದು ಔಷಧವನ್ನು ಪಡೆದುಕೊಂಡವರು ಹೇಳುತ್ತಾರೆ.ಸಾಮಾಜಿಕ ಮನೋಭಾವದಿಂದ ಕೆಲಸವನ್ನು ಮಾಡುತ್ತಿರುವ ಅವರು ರೋಗಿಗಳಿಂದ ನಿರ್ಧಿಷ್ಟವಾಗಿ ಹಣವನ್ನು ಕೇಳಿ ಪಡೆಯುವುದೆ ಇಲ್ಲ ಸ್ವ ಇಚ್ಚೆಯಿಂದ ಕೊಟ್ಟರೆ ಮಾತ್ರ ಪಡೆದುಕೊಳ್ಳುತ್ತಾರೆ ಅವರ ಕೈಗುಣದಿಂದ ಸಾವಿರಾರು ರೋಗಿಗಳು ನಾನಾ ಕಾಯಿಲೆಯಿಂದ ಗುಣ ಮುಖರಾಗಿದ್ದಾರೆ.ಮಾಕ್ಷಿಮ್ ಒಲಿವೆರಾ ಅವರಿಂದ ಚಿಕಿತ್ಸೆಯನ್ನು ಪಡೆದುಕೊಳ್ಳಲು ಊರಿನವರು ಮಾತ್ರವಲ್ಲದೆ ದೂರದ ಕೇರಳ,ಗೋವಾ ರಾಜ್ಯದಿಂದಲೂ ಜನರು ಬರುತ್ತಾರೆ.
ನಾಟಿ ಔಷಧ ಪದ್ಧತಿ ತಂದೆಯವರ ಕಾಲದಿಂದ ಬಂದ ಬಳುವಳಿ ಆಗಿದೆ.ಕಳೆದ 25 ವರ್ಷಗಳಿಂದ ನಾಟಿ ಔಷಧವನ್ನು ನೀಡುತ್ತಿದ್ದೇನೆ.ಮೂತ್ರಕೋಶ ಹಾಗೂ ಪಿತ್ತಕೋಶದ ಕಲ್ಲು,ಸರ್ಪಸುತ್ತು,ಬಾವು,ಹೊಟ್ಟೆ ಸಮಸ್ಯೆ,ಹಾವು ಕಡಿತ,ಮೂಲವ್ಯಾದಿ ಸೇರಿದಂತೆ ಹಲವರಾರು ಕಾಯಿಲೆಗಳಿಗೆ ನಾಟಿ ಔಷಧವನ್ನು ನೀಡಲಾಗುತ್ತಿದ್ದು.ಊರ,ಪರಊರಿನವರು ಮಾತ್ರವಲ್ಲದೆ ದೂರದ ಕೇರಳ,ಗೋವಾದಿಂದಲೂ ಬರುತ್ತಾರೆ ಎಂದು ಮಾಕ್ಷಿಮ್ ಒಲಿವೆರಾ ಹೇಳುತ್ತಾರೆ.
ಮಾಕ್ಷಿಮ್ ಒಲಿವೆರಾ ಅವರ ದೂರವಾಣಿ ಸಂಖ್ಯೆ -9535293305

@ಲೇಖನ-ಜಗದೀಶ ದೇವಾಡಿಗ ಮುಳ್ಳಿಕಟ್ಟೆ

Advertisement
Advertisement

Share
Team Kundapur Times

Recent Posts

ತ್ರಾಸಿ:ಹೆದ್ದಾರಿಯಲ್ಲಿ ಕಾರಿಗೆ ಅಡ್ಡ ಬಂದ ಗೂಳಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮುರುಡೇಶ್ವರ ದಿಂದ ಉಡುಪಿಗೆ ಸಾಗುತ್ತಿದ್ದ ಕಾರಿಗೆ ತ್ರಾಸಿ ಸಮೀಪ ಮೊವಾಡಿ ಕ್ರಾಸ್‍ನಲ್ಲಿ ಗೂಳಿಯೊದು ಅಡ್ಡ ಬಂದ…

15 hours ago

ಅಬ್ಬರಿಸಿದ ಮಳೆಗೆ ಉಕ್ಕೇರಿದ ಕಡಲು:ಜನರಲ್ಲಿ ಮೂಡಿದ ಆತಂಕ

ಕುಂದಾಪುರ:ಬುಧವಾರ ಸುರಿದ ಭಾರಿ ಗಾಳಿ ಮಳೆಗೆ ಕಡಲು ಉಕ್ಕೇರಿದ ಪರಿಣಾಮ ಕಂಚುಗೋಡು ಭಾಗದಲ್ಲಿ ಬೃಹತ್ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸಿದೆ.ಅಲೆಗಳ…

2 days ago

ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನಿಂದ ಸಂಭ್ರಮದ ದಸರಾ ಆಚರಣೆ

ಕುಂದಾಪುರ:ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಕುಂದಾಪುರ,ಸುಜ್ಞಾನ ಪದವಿ ಪೂರ್ವ ಕಾಲೇಜು,ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ಯಡಾಡಿ-ಮತ್ಯಾಡಿ, ಇಲ್ಲಿ ದಸರಾ ಹಬ್ಬವನ್ನು ಸಂಭ್ರಮದಿಂದ…

3 days ago

ಬಿ.ಎಚ್.ಪಿ ಮೀನುಗಾರಿಕಾ ಬೋಟ್ ಶುಭಾರಂಭ

ಕುಂದಾಪುರ:ಮೀನುಗಾರಿಕಾ ವೃತ್ತಿಯಲ್ಲಿ ಹಲವಾರು ವರ್ಷಗಳ ಅನುಭವವನ್ನು ಹೊಂದಿರುವ ಮತ್ಸೋದ್ಯಮಿಗಳಾದ ಉಪ್ಪುಂದ ನಾಗರಾಜ ಖಾರ್ವಿ ಮತ್ತು ಸುಬ್ರಹ್ಮಣ್ಯ ಖಾರ್ವಿ ಮಾಲೀಕತ್ವದ ಬಿ.ಎಚ್.ಪಿ…

4 days ago

ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಖಾಸಗಿ ಬಸ್‌:ಚಾಲಕ ಸ್ಥಳದಲ್ಲೇ ಸಾವು

ನೈಲಾಡಿ:ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ…

5 days ago

ಧರ್ಮ ಗಂಗೋತ್ರಿ ಭರತ ಶೆಟ್ಟಿ ಸಿ.ಸಿ.ಎಫ್ ಮೆಂಬರ್ ಆಗಿ ಆಯ್ಕೆ

ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಲ್ಲೂರು ನಿವಾಸಿ ಧರ್ಮಗಂಗೋತ್ರಿ ಭರತ್ ಶೆಟ್ಟಿ ಅವರು ಭಾರತ ಸಂವಿಧಾನದ ಕಾರ್ಯವನ್ನುವಿಜಿಲೆಕ್ಸ್ ಅಪರಾಧ ನಿಯಂತ್ರಣ…

6 days ago