ಕುಂದಾಪುರ

ನಾಡ:ದಲಿತ ದೌರ್ಜನ್ಯ ಎಸಗಿದ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆ

Share

ಕುಂದಾಪುರ:ಇತ್ತೀಚಿನ ದಿನಗಳಲ್ಲಿ ಸಂಘಟನೆಗಳಿಗೆ ಬರುವ ದೂರುಗಳು ಧಾರ್ಮಿಕ ವಿಚಾರಗಳಿಗೆ ಸಂಬಂಧಿಸಿದ್ದು ಆಗಿದ್ದು ಸಮಾಜದಲ್ಲಿ ನಮ್ಮನ್ನು ತುಳಿಯುವಂತಹ ಸಂಸ್ಕೃತಿ ಇನ್ನೂ ಕೂಡ ಮುಂದುವರೆದಿರುವುದು ನಮ್ಮ ಯುವ ಪೀಳಿಗೆ ಮೇಲೆ ಬಹಳಷ್ಟು ಪರಿಣಾಮ ಬೀರಿದೆ.ಧಾರ್ಮಿಕ ವಿಚಾರಕ್ಕೆ ಸಂಬಂಧಿಸಿದಂತೆ ನಾಡದಲ್ಲಿ ದಲಿದತ ಹುಡುಗರ ಮೇಲೆ ಹಲ್ಲೆ ಮಾಡಿದ ಏಳು ಆರೋಪಿಗಳನ್ನು ಕೂಡಲೆ ಬಂಧಿಸಲು ಕ್ರಮ ಕೈಗೊಳ್ಳಬೇಕೆಂದು ಕುಂದಾಪುರ ತಾಲೂಕು ಸಂಚಾಲಕ ರಾಜು ಬೆಟ್ಟಿನ ಮನೆ ಪೊಲೀಸ್ ಇಲಾಖೆಯನ್ನು ಆಗ್ರಹಿಸಿದರು.
ಬೈಂದೂರು ತಾಲೂಕಿನ ನಾಡಗುಡ್ಡೆಅಂಗಡಿಯಲ್ಲಿ ಗಣೇಶೋತ್ಸವ ಮೆರವಣಿಗೆ ಸಂದರ್ಭ ದಲಿತ ಹುಡುಗರ ಮೇಲೆ ಹಲ್ಲೆ ನಡೆಸಿದ ಮೇಲ್ವರ್ಗದ ಸಮುದಾಯದ ಯುವಕರನ್ನು ಬಂಧಿಸುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ರಾಮನಗರ-ಸೇನಾಪುರ ವತಿಯಿಂದ ನಾಡಗುಡ್ಡೆಅಂಗಡಿ ರಾಮನಗರ ಅಂಬೇಡ್ಕರ್ ಭವನದ ವಠಾರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.

ವಿಭಾಗೀಯ ಸಂಚಾಲಕರು ಮೈಸೂರು ವಿಶ್ವನಾಥ ಬೆಂಳ್ಳಂಪಳ್ಳಿ ಸಭೆಯನ್ನು ಉದ್ದೆಶೀಸಿ ಮಾತನಾಡಿ,ದಲಿತ ಯುವಕರ ಮೇಲೆ ಹಲ್ಲೆ ನಡೆಸಿದ ಆರೋಪಿಗಳ ಮೇಲೆ 307 ಪ್ರಕರಣ ದಾಖಲು ಮಾಡಿದ್ದರು ಇಲ್ಲಿ ತನಕ ಆರೋಪಿಗಳನ್ನು ಬಂಧಿಸುವಂತಹ ಕೆಲಸ ಆಗದಿರುವುದು ಹಾಸ್ಯಾಸ್ಪದವಾಗಿದೆ.ರಾಜಕೀಯ ಒತ್ತಡದಿಂದ ಆರೋಪಿಗಳನ್ನು ಬಂಧಿಸಲು ವಿಳಂಭ ನೀತಿಯನ್ನು ಅನುಸರಿಸಲಾಗುತ್ತಿದ್ದು ಆರೋಪಿಗಳನ್ನು ಬಂಧನಕ್ಕೆ ಒಳಪಡಿಸುವಂತಹ ಕೆಲಸ ಕೂಡಲೇ ಆಗಬೇಕು ಇಲ್ಲವಾದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡಲಾಗುವುದು ಎಂದು ಪೊಲೀಸ್ ಇಲಾಖೆಗೆ ಎಚ್ಚರಿಕೆಯನ್ನು ನೀಡಿದರು.
ಜಿಲ್ಲಾ ಸಂಘಟನಾ ಸಂಚಾಲಕ ಮಂಜುನಾಥ ಗಿಳಿಯಾರ ಮಾತನಾಡಿ,ರಾಜಕೀಯ ಒತ್ತಡ ಮತ್ತು ಪ್ರಭಾವಕ್ಕೆ ಒಳಗಾಗದೆ ಪೊಲೀಸ್ಇಲಾಖೆ ದಲಿತರನ್ನು ರಕ್ಷಿಸುವ ಕೆಲಸ ಮಾಡಬೇಕು ಎಂದರು.ದಲಿತ ಸಮಿತಿ ಮುಖಂಡರ ಮಾತಿಗೆ ಸ್ಪಂದನೆ ವ್ಯಕ್ತಪಡಿಸಿದ ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪನವರು ಆರೋಪಿಗಳನ್ನು ಶೀಘೃವಾಗಿ ಬಂಧಿಸಲು ಕ್ರಮ ಕೈಗೊಳ್ಳಲಾಗುದೆಂದು ಭರವಸೆಯನ್ನು ನೀಡಿದರು.

ಈ ಸಂದರ್ಭ ಜಿಲ್ಲಾ ದಲಿತ ದೌರ್ಜನ್ಯ ಸಮಿತಿ ಸಂಚಾಲಕ ವಾಸುದೇವ ಮುದೂರು,ಬೈಂದೂರು ತಾಲೂಕು ಸಂಚಾಲಕ ನಾಗರಾಜ ಉಪ್ಪುಂದ,ತಾಲೂಕು ಸಂಘಟನೆ ಸಂಚಾಲಕ ಸುರೇಶ್ ಹಕ್ಲಾಡಿ,ಜಿಲ್ಲಾ ಸಮಿತಿ ಸದಸ್ಯ ಶ್ಯಾಮ ಸುಂದರ ತೆಕ್ಕಟ್ಟೆ,ಮಂಜುನಾಥ ನಾಗೂರು,ಕೊಲ್ಲೂರು ದೇವಳದ ಸಮಿತಿ ಸದಸ್ಯ ಗೋಪಾಲಕೃಷ್ಣ ನಾಡ,ಸ್ಥಳೀಯ ಮುಖಂಡ ಸತೀಶ ಕೆ ರಾಮನಗರ,ಶಂಭು ಗುಡ್ಡಮ್ಮಾಡಿ,ರಮೇಶ ಪಡುಕೋಣೆ ಉಪಸ್ಥಿತರಿದ್ದರು.ಗಂಗೊಳ್ಳಿ ಠಾಣೆ ಪಿಎಸ್‍ಐ ಹರೀಶ್ ಆರ್ ನಾಯ್ಕ್ ಮತ್ತು ಸಿಬ್ಬಂದಿಗಳು ಹಾಜರಿದ್ದರು.ದಲಿತ ಸಮಿತಿ ಸದಸ್ಯರು ಭಾಗವಹಿಸಿದ್ದರು.

Advertisement

Share
Team Kundapur Times

Recent Posts

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

5 days ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

1 month ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

2 months ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

2 months ago

ತ್ರಾಸಿ:ನಿಂತ್ತಿದ್ದ ಲಾರಿಯಲ್ಲಿ ಚಾಲಕನ ಶವ ಪತ್ತೆ

ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…

2 months ago

ಮರವಂತೆ ಸಮುದ್ರ ಕಿನಾರೆ ಸ್ವಚ್ಚತೆ

ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…

2 months ago