ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕ್ ವಾರ್ಷಿಕ ಮಹಾಸಭೆ

Share

Advertisement
Advertisement
Advertisement

ಕುಂದಾಪುರ:ಸದಸ್ಯರ ಹೆಚ್ಚಿನ ಪ್ರೆÇೀತ್ಸಾಹದಿಂದ ಪ್ರತಿವರ್ಷ ಠೇವಣಿ ಸಂಗ್ರಹಣೆ ಮತ್ತು ಸಾಲ ವಸೂಲಾತಿಯಲ್ಲಿ ಗುರಿಯನ್ನು ಸಾಧಿಸಲಾಗುತ್ತಿದೆ.2022-23ನೇ ಸಾಲಿನಲ್ಲಿ 114 ಕೋಟಿ ರೂ.ಗೂ ಮಿಕ್ಕಿ ವ್ಯವಹಾರ ನಡೆಸಿದ್ದು, 40.99 ಲಕ್ಷ ರೂ. ನಿವ್ವಳ ಲಾಭ ಹೊಂದಿದೆ.ಲಾಭಾಂಶದಲ್ಲಿ ಸದಸ್ಯರಿಗೆ ಶೇ.10 ಪಾಲು ಮುನಾಫೆ ನೀಡಲು ನಿರ್ಧರಿಸಲಾಗಿದೆ ಎಂದು ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕ್‍ನ ಅಧ್ಯಕ್ಷ ಆನಂದ ಬಿಲ್ಲವ ಹೇಳಿದರು.
ಗಂಗೊಳ್ಳಿ ಶ್ರೀರಾಮ ಮಂದಿರದಲ್ಲಿ ನಡೆದ ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕಿನ 2022-23ನೇ ಸಾಲಿನ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಿರ್ದೇಶಕರಾದ ಕೆ.ಮಾಧವ ಖಾರ್ವಿ,ಹರೀಶ ಮೇಸ್ತ,ಗೋಪಾಲ ಜಿ.ನಾಯ್ಕ್,ಶ್ರೀನಿವಾಸ ಜತ್ತನ್, ಸುಭಾಶ್ಚಂದ್ರ ಪೂಜಾರಿ,ಚಂದ್ರಶೇಖರ ಪೂಜಾರಿ,ಚಂದ್ರಮತಿ ಹೆಗ್ಡೆ,ಪ್ರೇಮಾ ಸಿ.ಪೂಜಾರಿ,ಯಮುನಾ, ನಾಗರಾಜ ಎಂ. ಮತ್ತು ಲಕ್ಷ್ಮಣ ಉಪಸ್ಥಿತರಿದ್ದರು.ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ 26 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು.ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ ದಯಾನಂದ ಗಾಣಿಗ ವರದಿ ವಾಚಿಸಿದರು.ಉಪಾಧ್ಯಕ್ಷ ವಾಸುದೇವ ಶೇರುಗಾರ್ ವಂದಿಸಿದರು.

Advertisement


Share

Leave a comment

Your email address will not be published. Required fields are marked *

You cannot copy content of this page