ಗಂಗೊಳ್ಳಿ:ಅರುಣ ನಾಪತ್ತೆ
ಕುಂದಾಪುರ:10ನೇ ತರಗತಿಯಲ್ಲಿ ವಿದ್ಯಾಭ್ಯಾಸವನ್ನು ಮಾಡುತ್ತಿರುವ ಅರುಣ (15) ಎನ್ನುವ ಬಾಲಕ ಸೆ.20 ರಂದು ಮಧ್ಯಾಹ್ನ 3 ಗಂಟೆಗೆ ಕುಂದಾಪುರಕ್ಕೆ ಹೋಗುವುದಾಗಿ ಮನೆಯಲ್ಲಿ ಹೇಳಿ ಹೋಗಿದ್ದು ಈ ವರೆಗೆ ಮನೆಗೆ ಬಾರದೆ ಕಾಣೆಯಾಗಿರುತ್ತಾನೆ.ಪಿರ್ಯಾದಿದಾರರ ತಮ್ಮ ನೀಡಿದ ದೂರಿನಂತೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗೋದಿ ಮೈ ಬಣ್ಣವನ್ನು ಹೊಂದಿರುವ ಅರುಣ 5 ಅಡಿ ಎತ್ತರವಿದ್ದು,ಕಪ್ಪನೆ ಕೂದಲು,ಸಾಧಾರಣ ಮೈ ಕಟ್ಟು ಹೊಂದಿರುತ್ತಾನೆ.ಮನೆಯಿಂದ ಹೊರಡುವ ವೇಳೆ ಕಪ್ಪು ಬಣ್ಣದ ಅರ್ಧ ತೋಳಿನ ಟೀ ಶರ್ಟ್, ಕಪ್ಪು ಬಣ್ಣದ ಜೀನ್ಸ ಪ್ಯಾಂಟ್ ಧರಿಸಿದ್ದು ಕನ್ನಡ ಭಾಷೆಯನ್ನು ಮಾತನಾಡುತ್ತಾನೆ.ಈ ವ್ಯಕ್ತಿಯ ಬಗ್ಗೆ ಮಾಹಿತಿ ತಿಳಿದು ಬಂದಲ್ಲಿ ಗಂಗೊಳ್ಳಿ ಪಿಎಸ್ಐ ಅಥವಾ ಪೊಲೀಸ್ ನಿಯಂತ್ರಣ ಕೋಣೆಗೆ ತಿಳಿಸಲು ಕೋರಲಾಗಿದೆ.