ಉಡುಪಿ:ಕುಂದಾಪುರ ಮತ್ತು ಬೈಂದೂರು ವಲಯದ ಲಾರಿ ಮತ್ತು ಟೆಂಪೋ ಮಾಲಿಕರು ಹಾಗೂ ಚಾಲಕರ ಸಂಘದ ತುರ್ತು ಸಭೆ ಹೆಮ್ಮಾಡಿ ಜಯಶ್ರೀ ಸಭಾಂಗಣದಲ್ಲಿ ಬುಧವಾರ ನಡೆಯಿತು.
ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆಗೆ ಅವರಿಗೆ ಮನವಿಯನ್ನು ನೀಡಲಾಯಿತು.
ಕುಂದಾಪುರ ಮತ್ತು ಬೈಂದೂರು ವಲಯದ ಲಾರಿ ಮಾಲೀಕರು ಮತ್ತು ಚಾಲಕರ ಸಂಘದ ಜಂಟಿ ಅಧ್ಯಕ್ಷ ದಿವಾಕರ ಶೆಟ್ಟಿ ಮಾತನಾಡಿ,ಈ ಹಿಂದೆ ಕೆಂಪು ಕಲ್ಲು ಮತ್ತು ಮಣ್ಣು ಸಾಗಾಟ ಮಾಡಲು ಕೃಷಿ ಅಭಿವೃದ್ಧಿ ಉದ್ಧೇಶದಿಂದ 3ಎ ಅಡಿಯಲ್ಲಿ ಪರ್ಮಿಟ್ ನೀಡಿ ಕಳೆದ 5 ವರ್ಷದಿಂದ ಸರಕಾರ ಅನುಕೂಲ ಮಾಡಿಕೊಟ್ಟಿದೆ.ಪ್ರಸ್ತುತ 3ಎ ಲೈಸನ್ಸ್ನ್ನು ರದ್ದುಪಡಿಸಿದ್ದರಿಂದ ನಮಗೆ ಬಹಳಷ್ಟು ತೊಂದರೆ ಆಗಿದೆ.ಕಟ್ಟಡ ಸಾಮಾಗ್ರಿ ತುಂಬಿದ ಗಾಡಿಗಳನ್ನು ಹಿಡಿದು ನಮ್ಮ ಮೇಲೆ ಮತ್ತು ವಾಹನದ ಮೇಲೆ ಅನಗತ್ಯವಾಗಿ ಪ್ರಕರಣ ದಾಖಲಿಸಿ ಮಾನ ಮರ್ಯಾದೆ ಹರಾಜು ಹಾಕಲಾಗುತ್ತಿದೆ.ಸಂಕಷ್ಟದ ಪರಿಸ್ಥಿತಿಯಲ್ಲಿ ಅನಿರ್ಧಿಷ್ಟಾವಧಿ ಮುಷ್ಕರವನ್ನು ಕೈಗೊಳ್ಳಲಾಗಿದ್ದು.3ಎ ಅಡಿಯಲ್ಲಿ ಪರ್ಮಿಟ್ ನೀಡುವ ತನಕ ಮುಷ್ಕರವನ್ನು ಕೈಬಿಡುವ ಪ್ರಶ್ನೆಯೆ ಇಲ್ಲಾ ಎಂದು ಹೇಳಿದರು.
ಸೆ.29 ರಂದು ಶುಕ್ರವಾರ ಕುಂದಾಪುರ ಗಾಂಧಿ ಮೈದಾನದಲ್ಲಿ ಲಾರಿಗಳನ್ನು ನಿಲ್ಲಿಸಿ ಶಾಸ್ತ್ರಿ ಪಾರ್ಕ್ ನಿಂದ ತಾಲೂಕು ಕಛೇರಿ ತನಕ ಕಾಲ್ನಡಿಗೆಯಲ್ಲಿ ಸಾಗಿ ಎ.ಸಿ ಮತ್ತು ತಹಶೀಲ್ದಾರರಿಗೆ ಮನವಿಯನ್ನು ನೀಡಲಾಗುವುದು ಎಂದು ತಿಳಿಸಿದರು.
ಉಡುಪಿ ಜಿಲ್ಲಾ ರೈತ ಸಂಘದ ಪ್ರತಿನಿಧಿ ಶರತ್ ಕುಮಾರ್ ಶೆಟ್ಟಿ ಬಾಳಿಕೆರೆ ಮಾತನಾಡಿ,ನಮ್ಮ ಜಿಲ್ಲೆಯಲ್ಲಿ ಅನಗತ್ಯವಾಗಿ ತುರ್ತು ಪರಿಸ್ಥಿತಿಯನ್ನು ಹೇರಲಾಗಿದೆ.ಕೆಂಪು ಕಲ್ಲು,ಮಣ್ಣು,ಮರಳು ಸಾಗಾಟ ಹಾಗೂ ಜೆಲ್ಲಿ ಕಲ್ಲುಗಳ ಸಾಗಾಟ ಮಾಡುವ ವಾಹನಗಳ ಮೇಲೆ ಜಿಲ್ಲಾಡಳಿತ ಅವೈಜ್ಞಾನಿಕ ರೀತಿಯಲ್ಲಿ ಕ್ರಮಗಳನ್ನು ಕೈಗೊಂಡಿದ್ದರಿಂದ ಕೂಲಿ ಕಾರ್ಮಿಕರಿಗೆ,ಗೂಡಂಗಡಿಗಳಿಗೆ,ಕಟ್ಟಡ ಕಾರ್ಮಿಕರ ಹೊಟ್ಟೆ ಮೇಲೆ ಬರೆ ಬಿದ್ದಿದೆ.ಬಿಗಿ ಕಾನೂನನ್ನು ಸಡಿಲಗೊಳಿಸಿ ಹಿಂದಿನಂತೆ ಸಾಂಪ್ರದಾಯಿಕ ಸಾಗಾಟಕ್ಕೆ ಅವಕಾಶ ಮಾಡಿಕೊಡ ಬೇಕು.ಕೆಂಪು ಮಣ್ಣು ಸಾಗಾಟಕ್ಕೂ ನಿರ್ಬಂಧ ಹೇರಿದ್ದರಿಂದ ತೋಟದ ಕೆಲಸಕ್ಕೆ ರೈತರಿಗೆ ತೊಂದರೆ ಆಗುತ್ತಿದೆ ಎಂದರು.
ಈ ಸಂದರ್ಭ ಕುಂದಾಪುರ ಮತ್ತು ಬೈಂದೂರು ಭಾಗದ ಲಾರಿ ಮಾಲೀಕರು ಮತ್ತು ಚಾಲಕರು ಸಂಘದ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…