ಕುಂದಾಪುರ:ವರ್ಷದಿಂದ ವರ್ಷಕ್ಕೆ ಸಂಘವು ಗುರಿ ಮೀರಿದ ಸಾಧನೆಯೊಂದಿಗೆ ಅಭಿವೃದ್ದಿ ಹೊಂದುತ್ತಾ ಬಂದಿದೆ.ಸದಸ್ಯರು ಹಾಗೂ ಗ್ರಾಹಕರ ಸಹಕಾರದಿಂದ ವರದಿ ವರ್ಷದ ಅಂತ್ಯಕ್ಕೆ ರೂ.41,45,18,292.48 ಠೇವಣಾತಿ ಹೊಂದುವುದರೊಂದಿಗೆ ಠೇವಣಾತಿ ಸಂಗ್ರಹಣೆಯಲ್ಲಿ ಶೇ.15ರಷ್ಟು ಪ್ರಗತಿಯನ್ನು ಸಾಧಿಸಿದೆ.ಪ್ರಸ್ತುತ ವರದಿ ಸಾಲಿನಲ್ಲಿ ರೂ.68,00,561 ಲಾಭ ಗಳಿಸಲಾಗಿದೆ.ಶೇ.11 ಡಿವಿಡೆಂಡ್ ನೀಡಲು ನಿರ್ಧರಿಸಲಾಗಿದೆ ಎಂದು ಆಲೂರು-ಹರ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಚ್.ಮಂಜಯ್ಯ ಶೆಟ್ಟಿ ಹೇಳಿದರು.
ಆಲೂರು ಶ್ರೀಮೂಕಾಂಬಿಕಾ ಸಭಾ ಭವನದಲ್ಲಿ ನಡೆದ ಆಲೂರು-ಹರ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಂಘವು ಒಟ್ಟು ರೂ.3,18,10,305 ವಿವಿಧ ನಿಧಿಗಳನ್ನು ಹೊಂದಿದ್ದು.ಸದಸ್ಯರಿಗೆ ಕಡಿಮೆ ಬಡ್ಡಿಯ ಕೃಷಿ ಸಾಲಗಳ ಅವಶ್ಯಕತೆ ಪೂರೈಸುವ ನಿಟ್ಟಿನಲ್ಲಿ ಹೆಚ್ಚು ಹೆಚ್ಚು ರೈತ ಸದಸ್ಯರುಗಳಿಗೆ ಕ್ರಮಿಕ ಪತ್ತಿನ ಯಾದಾಸ್ತು ಮಿತಿ ನಿರ್ಧರಿಸಿಕೊಳ್ಳಲು ಪ್ರೋತ್ಸಾಹಿಸಿ ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ರೂ.10,54,65,609 ಸಾಲ ಪಡೆಯಲಾಗಿದೆ.ವರದಿ ಸಾಲಿನಲ್ಲಿ ರೂ.40 ಕೋಟಿಯಷ್ಟು ಸಾಲ ನೀಡಲಾಗಿದೆ ಎಂದರು.
ಸಂಘದ ವಾರ್ಷಿಕ ವರದಿ ಮಂಡಿಸಿದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವರಾಮ ಪೂಜಾರಿ ಮಾತನಾಡಿ,ಸಂಘವು ಒಟ್ಟು 5,339 ಸದಸ್ಯರನ್ನು ಹೊಂದಿದ್ದು,ರೂ.1,40,24,657 ಪಾಲು ಹಣವನ್ನು ಹೊಂದಿದೆ ಎಂದರು.ಸಂಘದ ವ್ಯಾಪ್ತಿಯ ಶಾಲೆಗಳ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಯಿತು.ಸಂಘದ ಉಪಾಧ್ಯಕ್ಷರಾದ ಎನ್.ಸಂತೋಷ್ ಕುಮಾರ್ ಶೆಟ್ಟಿ,ನಿರ್ದೇಶಕರಾದ ರತ್ನಾಕರ ಎಂ.ಆಚಾರ್ಯ, ಹೆಚ್.ಶಂಕರ ಶೆಟ್ಟಿ,ಎಂ.ಚಂದ್ರಶೇಖರ ಶೆಟ್ಟಿ,ಗಂಗಾಧರ ಆಚಾರ್ಯ,ಸುಬ್ಬ ಪೂಜಾರಿ,ರಾಜೇಶ ದೇವಾಡಿಗ,ಅಮರನಾಥ ಶೆಟ್ಟಿ,ಸುರೇಂದ್ರ,ಹರೀಶ್, ಲಲಿತಾ ಕುಲಾಲ್,ಅಕ್ಕಯ್ಯ ಯಾನೆ ಆಶಾ ಉಪಸ್ಥಿತರಿದ್ದರು.ಸಂಘದ ಮೆನೇಜರ್ ಎ.ಸಂಜೀವ ಪೂಜಾರಿ ಸ್ವಾಗತಿಸಿದರು.ಸಂಘದ ಸಿಬ್ಬಂದಿ ಗಣೇಶ್ ವಂದಿಸಿದರು.
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…