ಕುಂದಾಪುರ

ಆಲೂರು-ಹರ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ವಾರ್ಷಿಕ ಸಭೆ

Share

Advertisement
Advertisement

ಕುಂದಾಪುರ:ವರ್ಷದಿಂದ ವರ್ಷಕ್ಕೆ ಸಂಘವು ಗುರಿ ಮೀರಿದ ಸಾಧನೆಯೊಂದಿಗೆ ಅಭಿವೃದ್ದಿ ಹೊಂದುತ್ತಾ ಬಂದಿದೆ.ಸದಸ್ಯರು ಹಾಗೂ ಗ್ರಾಹಕರ ಸಹಕಾರದಿಂದ ವರದಿ ವರ್ಷದ ಅಂತ್ಯಕ್ಕೆ ರೂ.41,45,18,292.48 ಠೇವಣಾತಿ ಹೊಂದುವುದರೊಂದಿಗೆ ಠೇವಣಾತಿ ಸಂಗ್ರಹಣೆಯಲ್ಲಿ ಶೇ.15ರಷ್ಟು ಪ್ರಗತಿಯನ್ನು ಸಾಧಿಸಿದೆ.ಪ್ರಸ್ತುತ ವರದಿ ಸಾಲಿನಲ್ಲಿ ರೂ.68,00,561 ಲಾಭ ಗಳಿಸಲಾಗಿದೆ.ಶೇ.11 ಡಿವಿಡೆಂಡ್ ನೀಡಲು ನಿರ್ಧರಿಸಲಾಗಿದೆ ಎಂದು ಆಲೂರು-ಹರ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಚ್.ಮಂಜಯ್ಯ ಶೆಟ್ಟಿ ಹೇಳಿದರು.
ಆಲೂರು ಶ್ರೀಮೂಕಾಂಬಿಕಾ ಸಭಾ ಭವನದಲ್ಲಿ ನಡೆದ ಆಲೂರು-ಹರ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಂಘವು ಒಟ್ಟು ರೂ.3,18,10,305 ವಿವಿಧ ನಿಧಿಗಳನ್ನು ಹೊಂದಿದ್ದು.ಸದಸ್ಯರಿಗೆ ಕಡಿಮೆ ಬಡ್ಡಿಯ ಕೃಷಿ ಸಾಲಗಳ ಅವಶ್ಯಕತೆ ಪೂರೈಸುವ ನಿಟ್ಟಿನಲ್ಲಿ ಹೆಚ್ಚು ಹೆಚ್ಚು ರೈತ ಸದಸ್ಯರುಗಳಿಗೆ ಕ್ರಮಿಕ ಪತ್ತಿನ ಯಾದಾಸ್ತು ಮಿತಿ ನಿರ್ಧರಿಸಿಕೊಳ್ಳಲು ಪ್ರೋತ್ಸಾಹಿಸಿ ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ರೂ.10,54,65,609 ಸಾಲ ಪಡೆಯಲಾಗಿದೆ.ವರದಿ ಸಾಲಿನಲ್ಲಿ ರೂ.40 ಕೋಟಿಯಷ್ಟು ಸಾಲ ನೀಡಲಾಗಿದೆ ಎಂದರು.
ಸಂಘದ ವಾರ್ಷಿಕ ವರದಿ ಮಂಡಿಸಿದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವರಾಮ ಪೂಜಾರಿ ಮಾತನಾಡಿ,ಸಂಘವು ಒಟ್ಟು 5,339 ಸದಸ್ಯರನ್ನು ಹೊಂದಿದ್ದು,ರೂ.1,40,24,657 ಪಾಲು ಹಣವನ್ನು ಹೊಂದಿದೆ ಎಂದರು.ಸಂಘದ ವ್ಯಾಪ್ತಿಯ ಶಾಲೆಗಳ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಯಿತು.ಸಂಘದ ಉಪಾಧ್ಯಕ್ಷರಾದ ಎನ್.ಸಂತೋಷ್ ಕುಮಾರ್ ಶೆಟ್ಟಿ,ನಿರ್ದೇಶಕರಾದ ರತ್ನಾಕರ ಎಂ.ಆಚಾರ್ಯ, ಹೆಚ್.ಶಂಕರ ಶೆಟ್ಟಿ,ಎಂ.ಚಂದ್ರಶೇಖರ ಶೆಟ್ಟಿ,ಗಂಗಾಧರ ಆಚಾರ್ಯ,ಸುಬ್ಬ ಪೂಜಾರಿ,ರಾಜೇಶ ದೇವಾಡಿಗ,ಅಮರನಾಥ ಶೆಟ್ಟಿ,ಸುರೇಂದ್ರ,ಹರೀಶ್, ಲಲಿತಾ ಕುಲಾಲ್,ಅಕ್ಕಯ್ಯ ಯಾನೆ ಆಶಾ ಉಪಸ್ಥಿತರಿದ್ದರು.ಸಂಘದ ಮೆನೇಜರ್ ಎ.ಸಂಜೀವ ಪೂಜಾರಿ ಸ್ವಾಗತಿಸಿದರು.ಸಂಘದ ಸಿಬ್ಬಂದಿ ಗಣೇಶ್ ವಂದಿಸಿದರು.

Advertisement
Advertisement
Advertisement

Share
Team Kundapur Times

Recent Posts

ಕಿರಿಮಂಜೇಶ್ವರ ಶ್ರೀ ಅಗಸ್ತೇಶ್ವರ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಉತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ಪ್ರಸಿದ್ಧ ಶ್ರೀ ಅಗಸ್ತೇಶ್ವರ ಶ್ರೀ ಮಹಾಗಣಪತಿ ಶ್ರೀ ವಿಶಾಲಾಕ್ಷಿ ಅಮ್ಮನವರ ದೇವಸ್ಥಾನ ಕಿರಿಮಂಜೇಶ್ವರದಲ್ಲಿ ಶ್ರೀ ಗಣೇಶ ಚತುರ್ಥಿ…

17 hours ago

ಶ್ರೀ ಪ್ರಸನ್ನ ಗಣಪತಿ ದೇವಸ್ಥಾನ ಉಪ್ಕಲ್‍ಮಠ ನಾಡ:ಗಣೇಶೋತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ನಾಡ ಉಪ್ಕಲ್ ಮಠ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ 35ನೇ ವರ್ಷದ ಗಣಪತಿ ಉತ್ಸವ ಕಾರ್ಯಕ್ರಮ ನಾನಾ…

17 hours ago

ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ತೈಲ ಸೋರಿಕೆ:ಹಲವು ದ್ವಿಚಕ್ರ ವಾಹನಗಳು ಪಲ್ಟಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿಉಡುಪಿ ಕಡೆಯಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ತೈಲ ವಾಹನದಿಂದ ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಸ್ತೆ…

19 hours ago

ಶ್ರೀ ದುರ್ಗಾ ಹಾರ್ಡ್ ವೇರ್ ತಲ್ಲೂರಿನಲ್ಲಿ ಶುಭಾರಂಭ

ಕುಂದಾಪುರ:ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಬಳಿ ಬ್ಯಾಂಕ್ ಆಫ್ ಬರೋಡ ಎದುರುಗಡೆ ಇರುವ ಶ್ರೀ ಬ್ರಾಹ್ಮಿ ದುರ್ಗಾ ಕಾಂಪ್ಲೆಕ್ಸ್…

22 hours ago

ತಿಮಿಂಗಿಲ ಮೀನಿನ ಕಳೆಬರ ಪತ್ತೆ

ಕುಂದಾಪುರ:ತಾಲೂಕಿನ ಗಂಗೊಳ್ಳಿ ಮಡಿ ಲೈಟ್‍ಹೌಸ್ ಕಡಲ ತೀರದಲ್ಲಿ ಮೃತ ತಿಮಿಂಗಿಲ ಮೀನಿನ ಕಳೆಬರ ಮಂಗಳವಾರ ಪತ್ತೆಯಾಗಿದೆ.ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ…

3 days ago

ವಲಯ ಅರಣ್ಯಾಧಿಕಾರಿ ಸವಿತಾ ಆರ್ ದೇವಾಡಿಗಗೆ ಮುಖ್ಯಮಂತ್ರಿ ಪದಕ

ಕುಂದಾಪುರ:ಹೊನ್ನಾವರದಲ್ಲಿ ವಲಯ ಅರಣ್ಯಾಧಿಕಾರಿ ಆಗಿ ಸೇವೆ ಸಲ್ಲಿಸುತ್ತಿರುವ ಸವಿತಾ ಆರ್ ದೇವಾಡಿಗ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದಕ…

4 days ago