ಕುಂದಾಪುರ

ಆಲೂರು-ಹರ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ವಾರ್ಷಿಕ ಸಭೆ

Share

Advertisement
Advertisement
Advertisement

ಕುಂದಾಪುರ:ವರ್ಷದಿಂದ ವರ್ಷಕ್ಕೆ ಸಂಘವು ಗುರಿ ಮೀರಿದ ಸಾಧನೆಯೊಂದಿಗೆ ಅಭಿವೃದ್ದಿ ಹೊಂದುತ್ತಾ ಬಂದಿದೆ.ಸದಸ್ಯರು ಹಾಗೂ ಗ್ರಾಹಕರ ಸಹಕಾರದಿಂದ ವರದಿ ವರ್ಷದ ಅಂತ್ಯಕ್ಕೆ ರೂ.41,45,18,292.48 ಠೇವಣಾತಿ ಹೊಂದುವುದರೊಂದಿಗೆ ಠೇವಣಾತಿ ಸಂಗ್ರಹಣೆಯಲ್ಲಿ ಶೇ.15ರಷ್ಟು ಪ್ರಗತಿಯನ್ನು ಸಾಧಿಸಿದೆ.ಪ್ರಸ್ತುತ ವರದಿ ಸಾಲಿನಲ್ಲಿ ರೂ.68,00,561 ಲಾಭ ಗಳಿಸಲಾಗಿದೆ.ಶೇ.11 ಡಿವಿಡೆಂಡ್ ನೀಡಲು ನಿರ್ಧರಿಸಲಾಗಿದೆ ಎಂದು ಆಲೂರು-ಹರ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಚ್.ಮಂಜಯ್ಯ ಶೆಟ್ಟಿ ಹೇಳಿದರು.
ಆಲೂರು ಶ್ರೀಮೂಕಾಂಬಿಕಾ ಸಭಾ ಭವನದಲ್ಲಿ ನಡೆದ ಆಲೂರು-ಹರ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಂಘವು ಒಟ್ಟು ರೂ.3,18,10,305 ವಿವಿಧ ನಿಧಿಗಳನ್ನು ಹೊಂದಿದ್ದು.ಸದಸ್ಯರಿಗೆ ಕಡಿಮೆ ಬಡ್ಡಿಯ ಕೃಷಿ ಸಾಲಗಳ ಅವಶ್ಯಕತೆ ಪೂರೈಸುವ ನಿಟ್ಟಿನಲ್ಲಿ ಹೆಚ್ಚು ಹೆಚ್ಚು ರೈತ ಸದಸ್ಯರುಗಳಿಗೆ ಕ್ರಮಿಕ ಪತ್ತಿನ ಯಾದಾಸ್ತು ಮಿತಿ ನಿರ್ಧರಿಸಿಕೊಳ್ಳಲು ಪ್ರೋತ್ಸಾಹಿಸಿ ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ರೂ.10,54,65,609 ಸಾಲ ಪಡೆಯಲಾಗಿದೆ.ವರದಿ ಸಾಲಿನಲ್ಲಿ ರೂ.40 ಕೋಟಿಯಷ್ಟು ಸಾಲ ನೀಡಲಾಗಿದೆ ಎಂದರು.
ಸಂಘದ ವಾರ್ಷಿಕ ವರದಿ ಮಂಡಿಸಿದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವರಾಮ ಪೂಜಾರಿ ಮಾತನಾಡಿ,ಸಂಘವು ಒಟ್ಟು 5,339 ಸದಸ್ಯರನ್ನು ಹೊಂದಿದ್ದು,ರೂ.1,40,24,657 ಪಾಲು ಹಣವನ್ನು ಹೊಂದಿದೆ ಎಂದರು.ಸಂಘದ ವ್ಯಾಪ್ತಿಯ ಶಾಲೆಗಳ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಯಿತು.ಸಂಘದ ಉಪಾಧ್ಯಕ್ಷರಾದ ಎನ್.ಸಂತೋಷ್ ಕುಮಾರ್ ಶೆಟ್ಟಿ,ನಿರ್ದೇಶಕರಾದ ರತ್ನಾಕರ ಎಂ.ಆಚಾರ್ಯ, ಹೆಚ್.ಶಂಕರ ಶೆಟ್ಟಿ,ಎಂ.ಚಂದ್ರಶೇಖರ ಶೆಟ್ಟಿ,ಗಂಗಾಧರ ಆಚಾರ್ಯ,ಸುಬ್ಬ ಪೂಜಾರಿ,ರಾಜೇಶ ದೇವಾಡಿಗ,ಅಮರನಾಥ ಶೆಟ್ಟಿ,ಸುರೇಂದ್ರ,ಹರೀಶ್, ಲಲಿತಾ ಕುಲಾಲ್,ಅಕ್ಕಯ್ಯ ಯಾನೆ ಆಶಾ ಉಪಸ್ಥಿತರಿದ್ದರು.ಸಂಘದ ಮೆನೇಜರ್ ಎ.ಸಂಜೀವ ಪೂಜಾರಿ ಸ್ವಾಗತಿಸಿದರು.ಸಂಘದ ಸಿಬ್ಬಂದಿ ಗಣೇಶ್ ವಂದಿಸಿದರು.

Advertisement
Advertisement
Advertisement

Share
Team Kundapur Times

Recent Posts

ಶ್ರೀ ಕೃಷ್ಣಾನಂದತೀರ್ಥಮಹಾಸ್ವಾಮಿ ಗೋಪಾಲಕೃಷ್ಣ ದೇವಸ್ಥಾನಕ್ಕೆ ಭೇಟಿ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಶಕಟಪುರ ಶ್ರೀ ವಿದ್ಯಾಪೀಠಾಧೀಶ್ವರ ಶ್ರೀ ಜಗದ್ಗುರು ಬದರೀಶಂಕರಾಚಾರ್ಯ…

7 days ago

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ “ಐಕ್ಯಂ” 2k25 ಕಾರ್ಯಕ್ರಮ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ವಾರ್ಷಿಕೋತ್ಸವ "ಐಕ್ಯಂ" 2025 ಅದ್ದೂರಿಯಿಂದ ನಡೆಯಿತು.ವಿಭಿನ್ನ ರೀತಿಯ ನೃತ್ಯ, ಸಂಗೀತದಿಂದ ಹಾಗೂ ಕಾಲೇಜಿನ ವಿದ್ಯಾರ್ಥಿಗಳೇ…

7 days ago

ಯುವಕ ಮಂಡಲ ತ್ರಾಸಿ 59ನೇ ವಾರ್ಷಿಕೋತ್ಸವ ಸಂಭ್ರಮ

ಕುಂದಾಪುರ:ಸಾಮಾಜಿಕ ಧಾರ್ಮಿಕ ಶೈಕ್ಷಣಿಕ ಕಾರ್ಯಗಳೊಂದಿಗೆ ಊರಿನ ಅಭಿವೃದ್ಧಿಗೆ ಶ್ರಮಿಸುತ್ತಿರುವ ಯುವಕ ಮಂಡಲದ ಕಾರ್ಯ ಇತರ ಸಂಘಟನೆಗಳಿಗೆ ಮಾದರಿ ಆಗಿದೆ ಎಂದು…

2 weeks ago

ಕೃಷ್ಣ ಮಠ ರಾಜಾಂಗಣದಲ್ಲಿ ಭರತ ನಾಟ್ಯ ಪ್ರದರ್ಶನ

ಉಡುಪಿ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ವಿದ್ಯಾರ್ಥಿಗಳಿಂದ ಉಡುಪಿ ಕೃಷ್ಣ ಮಠದ ರಾಜಾಂಗಣದಲ್ಲಿ ಭರತ ನಾಟ್ಯ ಪ್ರದರ್ಶನ ನಡೆಯಿತು.ವಿದ್ಯಾರ್ಥಿಗಳು ಹೆಜ್ಞೆ…

2 weeks ago

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ವಾರ್ಷಿಕ ಕ್ರೀಡಾಕೂಟ 2024-2025

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮಹಾತ್ಮ ಗಾಂಧಿ ಮೈದಾನ ಅಜ್ಜರಕಾಡುನಲ್ಲಿ ಜರುಗಿತು.ಹಿರಿಯ ದೈಹಿಕ ನಿರ್ದೇಶಕ ಯುನೈಟೆಡ್ ಉಡುಪಿ…

2 weeks ago

ಸ್ಕೈಡೈನಿಂಗ್ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿ: ಪ್ರಕೃತಿ ಸೌಂದರ್ಯಕ್ಕೆ ಮನಸೋತ ಸಚಿವ

ಕುಂದಾಪುರ:ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶವಿದ್ದು,ಇಲ್ಲಿಗೆ ಬರುವಂತೆ ಸಂಸದರು, ಶಾಸಕರು ಮನವಿ ಮಾಡಿದ್ದರು. ಆ ಹಿನ್ನೆಲೆಯಲ್ಲಿ ಈ ಭಾಗದ ಪ್ರವಾಸೋದ್ಯಮ…

3 weeks ago