ಕುಂದಾಪುರ

ಆಲೂರು-ಹರ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ವಾರ್ಷಿಕ ಸಭೆ

Share

ಕುಂದಾಪುರ:ವರ್ಷದಿಂದ ವರ್ಷಕ್ಕೆ ಸಂಘವು ಗುರಿ ಮೀರಿದ ಸಾಧನೆಯೊಂದಿಗೆ ಅಭಿವೃದ್ದಿ ಹೊಂದುತ್ತಾ ಬಂದಿದೆ.ಸದಸ್ಯರು ಹಾಗೂ ಗ್ರಾಹಕರ ಸಹಕಾರದಿಂದ ವರದಿ ವರ್ಷದ ಅಂತ್ಯಕ್ಕೆ ರೂ.41,45,18,292.48 ಠೇವಣಾತಿ ಹೊಂದುವುದರೊಂದಿಗೆ ಠೇವಣಾತಿ ಸಂಗ್ರಹಣೆಯಲ್ಲಿ ಶೇ.15ರಷ್ಟು ಪ್ರಗತಿಯನ್ನು ಸಾಧಿಸಿದೆ.ಪ್ರಸ್ತುತ ವರದಿ ಸಾಲಿನಲ್ಲಿ ರೂ.68,00,561 ಲಾಭ ಗಳಿಸಲಾಗಿದೆ.ಶೇ.11 ಡಿವಿಡೆಂಡ್ ನೀಡಲು ನಿರ್ಧರಿಸಲಾಗಿದೆ ಎಂದು ಆಲೂರು-ಹರ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಚ್.ಮಂಜಯ್ಯ ಶೆಟ್ಟಿ ಹೇಳಿದರು.
ಆಲೂರು ಶ್ರೀಮೂಕಾಂಬಿಕಾ ಸಭಾ ಭವನದಲ್ಲಿ ನಡೆದ ಆಲೂರು-ಹರ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಂಘವು ಒಟ್ಟು ರೂ.3,18,10,305 ವಿವಿಧ ನಿಧಿಗಳನ್ನು ಹೊಂದಿದ್ದು.ಸದಸ್ಯರಿಗೆ ಕಡಿಮೆ ಬಡ್ಡಿಯ ಕೃಷಿ ಸಾಲಗಳ ಅವಶ್ಯಕತೆ ಪೂರೈಸುವ ನಿಟ್ಟಿನಲ್ಲಿ ಹೆಚ್ಚು ಹೆಚ್ಚು ರೈತ ಸದಸ್ಯರುಗಳಿಗೆ ಕ್ರಮಿಕ ಪತ್ತಿನ ಯಾದಾಸ್ತು ಮಿತಿ ನಿರ್ಧರಿಸಿಕೊಳ್ಳಲು ಪ್ರೋತ್ಸಾಹಿಸಿ ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ರೂ.10,54,65,609 ಸಾಲ ಪಡೆಯಲಾಗಿದೆ.ವರದಿ ಸಾಲಿನಲ್ಲಿ ರೂ.40 ಕೋಟಿಯಷ್ಟು ಸಾಲ ನೀಡಲಾಗಿದೆ ಎಂದರು.
ಸಂಘದ ವಾರ್ಷಿಕ ವರದಿ ಮಂಡಿಸಿದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವರಾಮ ಪೂಜಾರಿ ಮಾತನಾಡಿ,ಸಂಘವು ಒಟ್ಟು 5,339 ಸದಸ್ಯರನ್ನು ಹೊಂದಿದ್ದು,ರೂ.1,40,24,657 ಪಾಲು ಹಣವನ್ನು ಹೊಂದಿದೆ ಎಂದರು.ಸಂಘದ ವ್ಯಾಪ್ತಿಯ ಶಾಲೆಗಳ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಯಿತು.ಸಂಘದ ಉಪಾಧ್ಯಕ್ಷರಾದ ಎನ್.ಸಂತೋಷ್ ಕುಮಾರ್ ಶೆಟ್ಟಿ,ನಿರ್ದೇಶಕರಾದ ರತ್ನಾಕರ ಎಂ.ಆಚಾರ್ಯ, ಹೆಚ್.ಶಂಕರ ಶೆಟ್ಟಿ,ಎಂ.ಚಂದ್ರಶೇಖರ ಶೆಟ್ಟಿ,ಗಂಗಾಧರ ಆಚಾರ್ಯ,ಸುಬ್ಬ ಪೂಜಾರಿ,ರಾಜೇಶ ದೇವಾಡಿಗ,ಅಮರನಾಥ ಶೆಟ್ಟಿ,ಸುರೇಂದ್ರ,ಹರೀಶ್, ಲಲಿತಾ ಕುಲಾಲ್,ಅಕ್ಕಯ್ಯ ಯಾನೆ ಆಶಾ ಉಪಸ್ಥಿತರಿದ್ದರು.ಸಂಘದ ಮೆನೇಜರ್ ಎ.ಸಂಜೀವ ಪೂಜಾರಿ ಸ್ವಾಗತಿಸಿದರು.ಸಂಘದ ಸಿಬ್ಬಂದಿ ಗಣೇಶ್ ವಂದಿಸಿದರು.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

1 month ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

1 month ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

3 months ago