ಕುಂದಾಪುರ:ಉಡುಪಿ ಜಿಲ್ಲೆಯ ಬೈಂದೂರು ವೃತ್ತದ ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಮೂರು ದಿನಗಳಿಂದ ಸಾರ್ವಜನಿಕರಿಗೆ ಸ್ವಲ್ಪ ಮಟ್ಟಿನ ತೊಂದರೆಯನ್ನು ನೀಡುತ್ತಿದ್ದ ಮಾನಸಿಕ ಅಸ್ವಸ್ಥ,ಮೂಕ ಯುವಕನನ್ನು ಕೊಲ್ಲೂರು ಪೊಲೀಸರ ವಿನಂತಿ ಮೇರೆಗೆ ಗಂಗೊಳ್ಳಿಯ ಆಪತ್ಭಾಂದವ ಆಂಬ್ಯುಲೆನ್ಸ್ ಇಬ್ರಾಹಿಂ ಗಂಗೊಳ್ಳಿ ಅವರು ಕೊಲ್ಲೂರಿಗೆ ತೆರಳಿ ತನ್ನ ಆಂಬ್ಯುಲೆನ್ಸ್ ಮೂಲಕ ಯುವಕನನ್ನು ಕೇರಳ ರಾಜ್ಯದ ಸ್ನೇಹಾಲಯ ಆಶ್ರಮಕ್ಕೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ.ಸ್ನೇಹಾಲಯ ಮುಖ್ಯಸ್ಥರಾದ ಜೋಸೆಫ್ ಕ್ರಾಸ್ತಾ ಅವರು ವರು ಯುವಕನನ್ನು ಯಾವುದೇ ಫಲಾಪೇಕ್ಷೆ ಇಲ್ಲದೇ ಆತ್ಮೀಯವಾಗಿ ಬರಮಾಡಿಕೊಂಡು ಆಶ್ರಯ ನೀಡಿದರು.ಕೊಲ್ಲೂರು ಪೊಲೀಸ್ ಠಾಣಾಧಿಕಾರಿ ಜಯಶ್ರೀ ಹೊನ್ನೂರ ಹಾಗೂ ಸಿಬ್ಬಂದಿ ವರ್ಗ,ಆಂಬ್ಯುಲೆನ್ಸ್ ಚಾಲಕ ಅಬ್ರಾರ್,ಅಜಯ್ ಗೊಂಸಾಲ್ವಸ್ ತ್ರಾಸಿ, ಮಂಜುನಾಥ್ ಸಾಲಿಯಾನ್ ತ್ರಾಸಿ,ಲಿಪ್ಟನ್ ಒಲಿವೆರ ತ್ರಾಸಿ, ಹರೀಶ್ ಕೊಡಪಾಡಿ ಸಹಕಾರವನ್ನು ನೀಡಿದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…