ಕುಂದಾಪುರ

ಸರಕಾರದ ಮಟ್ಟದಲ್ಲಿ ಮಾತನಾಡಿ ಕಾನೂನನ್ನು ಸರಿಪಡಿಸುವ ಕೆಲಸವನ್ನು-ಮಾಡಲಾಗುವುದು ಕೆ.ಗೋಪಾಲ ಪೂಜಾರಿ

Share

ಕುಂದಾಪುರ:1994 ರ ಕಾರ್ಯಾದೇಶವನ್ನು ಮಾರ್ಚ್ ತಿಂಗಳಿನಲ್ಲಿ ಆಗಿನ ಸರಕಾರ ರದ್ದು ಮಾಡಿರುವುದರಿಂದ ಇವೊಂದು ಸಮಸ್ಯೆ ಹುಟ್ಟಿಕೊಂಡಿದೆ.ಸರಕಾರದ ಮಟ್ಟದಲ್ಲಿ ಮಾತನಾಡಿ ಕಾನೂನನ್ನು ಸರಿಪಡಿಸುವ ಕೆಲಸವನ್ನು ಮಾಡಲಾಗುವುದು ಎಂದು ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಅವರು ಆರೋಪಿಸಿದರು.
ಕುಂದಾಪುರ ಮತ್ತು ಬೈಂದೂರು ತಾಲೂಕು ಲಾರಿ ಮತ್ತು ಟೆಂಪೋ ಚಾಲಕರ ಸಂಘದ ವತಿಯಿಂದ ಹೆಮ್ಮಾಡಿಯಲ್ಲಿ ನಡೆಯುತ್ತಿರುವ 3ನೇ ದಿನದ ಕಟ್ಟಡ ಸಾಮಾಗ್ರಿ ಸಾಗಾಟದ ವಾಹನಗಳ ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ಶುಕ್ರವಾರ ಭಾಗವಹಿಸಿ ಅವರು ಮಾತಾಡಿದರು.
ಕಾನೂನು ಬಾಹಿರ ಚಟುವಟಕೆಗಳನ್ನು ನಡೆಸಲು ನಮ್ಮ ಸರಕಾರ ಎಂದಿಗೂ ಅವಕಾಶ ಮಾಡಿಕೊಡುವುದಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.ಲೀಗಲ್ ಆಗಿ ಕೆಲಸ ಮಾಡಲು ಅವಕಾಶವಿರುವುದರಿಂದ ಜಿಲ್ಲೆಯ ಪರಿಸ್ಥಿತಿಯನ್ನು ಸರಕಾರದ ಗಮನಕ್ಕೆ ತಂದು ನಿರ್ಬಂಧಿಸಿದ ಕಾನೂನನ್ನು ಸರಿಪಡಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ವಿನಂತಿಸಿಕೊಳ್ಳಲಾಗುವುದು,ಈಗಾಗಲೇ ಡಿಸಿ,ಎಸ್ಪಿ ಮತ್ತು ಗಣಿ ಇಲಾಖೆ ಅವರೊಂದಿಗೆ ಮಾತನಾಡಲಾಗಿದೆ.ಮರಳಿನ ವಿಷಯಕ್ಕೆ ಸಂಬಂಧಿಸಿದಂತೆ ಯಾವ ಯಾವ ಭಾಗದಲ್ಲಿ ಮರಳನ್ನು ತೆಗೆಯಲು ಸವಕಾಶವಿದೆಯೊ ಅಂತಹ ಸ್ಥಳಗಳಲ್ಲಿ ಪಂಚಾಯತ್ ವ್ಯಾಪ್ತಿಯಲ್ಲಿ ಪರ್ಮಿಟ್ ಕೊಟ್ಟು ಜಿಪಿಎಸ್ ಮಾಡಿ ಅವಕಾಶ ಮಾಡಿಕೊಳ್ಳಲು ವಿನಂತಿಸಲಾಗುವುದು ಎಂದು ಹೇಳಿದರು.ಮಣ್ಣಿನ ಸಾಗಾಟಕ್ಕೆ ಸಂಬಂಧಪಟ್ಟಂತೆ ಜಿಪಿಎಸ್ ಅಳವಡಿಕೆ ನಿಯಮವನ್ನು ತೆಗೆದು ಹಾಕುವಂತೆ ಸರಕಾರದ ಬಳಿ ಕೇಳಿ ಕೊಳ್ಳಲಾಗುದೆಂದರು.
ಕುಂದಾಪುರ ಮತ್ತು ಬೈಂದೂರು ತಾಲೂಕು ಲಾರಿ ಮತ್ತು ಟೆಂಪೋ ಮಾಲಕರು ಮತ್ತು ಚಾಲಕ ಸಂಘದ ಜಂಟಿ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ ಬಾಳಿಕೆರೆ ಮಾತನಾಡಿ,ಬೇಡಿಕೆಗಳು ಇಡೇರುವ ತನಕ ಮುಷ್ಕರವನ್ನು ಹಿಂಪಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.ಈ ಸಂದರ್ಭ ಸಂಘದ ಜಂಟಿ ಅಧ್ಯಕ್ಷ ದಿವಾಕರ ಶೆಟ್ಟಿ ನೈಲಾಡಿ,ರಾಘವೇಂದ್ರ ಶೆಟ್ಟಿ ಮತ್ತು ಸಂಘದ ಪದಾಧಿಕಾರಿಗಳು,ಸದಸ್ಯರು ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 weeks ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 weeks ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

1 month ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

1 month ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

1 month ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

1 month ago