ಮನೆಯಲ್ಲಿ ನಿರವ ಮೌನ
ಕುಂದಾಪುರ:ನೆಲಕ್ಕೆ ಬಿದ್ದ ವಿದ್ಯುತ್ ತಂತಿಯಿಂದ ವಿದ್ಯುತ್ ಸ್ಪರ್ಶಿಸಿದ ಪರಿಣಾಮ ದಾರುಣವಾಗಿ ಸಾವನ್ನಪ್ಪಿದ ಕುಂದಾಪುರ ತಾಲೂಕಿನ ಕಟ್ಬೇಲ್ತೂರು ಗ್ರಾಮದ ಸುಳ್ಸೆ ನಿವಾಸಿಗಳಾದ ಮಹಾಬಲ ದೇವಾಡಿಗ (55) ಹಾಗೂ ಅವರ ಪತ್ನಿ ಲಕ್ಷ್ಮೀ ದೇವಾಡಿಗ (49) ಅವರ ಮೃತದೇಹದ ಶವ ಸಂಸ್ಕಾರದ ಕಾರ್ಯ ಸ್ವಗ್ರಾಮವಾದ ಸುಳ್ಸೆಯಲ್ಲಿ ಶನಿವಾರ ನಡೆಯಿತು.ಸಪ್ತಪತಿ ತುಳಿದು ಹಸೆಮಣೆ ಏರಿದ್ದ ಆದರ್ಶ ದಂಪತಿಗಳು ಸಾವಿನಲ್ಲೂ ಒಂದಾಗುವುದರ ಮುಖೇನ ಇಹಲೋಕವನ್ನು ತ್ಯಜಿಸಿದ್ದಾರೆ.ಅವರು ಒಂದು ಗಂಡು ಮತ್ತು ಒಂದು ಹೆಣ್ಣು ಮಗಳನ್ನು ಅಗಲಿದ್ದಾರೆ.
ಸೌಮ್ಯ ಸ್ವಭಾವವನ್ನು ಹೊಂದಿದ್ದ ಮಾಹಾಬಲ ದೇವಾಡಿಗ ಅವರು ಸೇವಂತಿಗೆ ಕೃಷಿಕರಾಗಿದ್ದು,ಗದ್ದೆ ಕೆಲಸ ಸಹಿತ ಇನ್ನಿತರ ಕೃಷಿಕೂಲಿ ಕೆಲಸಗಳನ್ನು ಮಾಡುತ್ತಾ ಕುಟುಂಬದ ನಿರ್ವಹಣೆಯನ್ನು ನೋಡಿಕೋಳ್ಳುತಿದ್ದರು.ಅವರ ಅಕಾಲಿಕ ನಿಧನದಿಂದ ಕುಟುಂಬದ ಆಧಾರ ಸ್ತಂಭ ಉರುಳಿ ಬಿದ್ದಿದ್ದು ಅವರ ಮಕ್ಕಳಿಬ್ಬರೂ ಅನಾಥರಾಗಿದ್ದಾರೆ.ದಂಪತಿಗಳ ಸಾವಿನಿಂದ ಗ್ರಾಮವು ಶೋಕ ಸಾಗರದಲ್ಲಿ ಮುಳುಗಿದೆ.
ಅನಾಥ ಮಕ್ಕಳಿಗೆ ಉದ್ಯೋಗ ನೀಡಲು ಆಗ್ರಹ:ಮೆ.ಸ್ಕಾಂ ನಿರ್ಲಕ್ಷ್ಯದಿಂದ ಸಾವನ್ನಪ್ಪಿದ ದಂಪತಿಗಳ ಕುಟುಂಬಕ್ಕೆ ಸರಕಾರ ಪರಿಹಾರದ ಧನವನ್ನು ಕೂಡಲೆ ನೀಡಬೇಕು.ತಂದೆ ತಾಯಿಯನ್ನು ಕಳೆದು ಕೊಂಡಿದ್ದ ಮಕ್ಕಳಿಗೆ ಸರಕಾರಿ ಕೆಲಸ ನೀಡಲು ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ನಾಗರಾಜ್ ಪುತ್ರನ್ ಮಾಜಿ ಅಧ್ಯಕ್ಷರು,ಹಾಲಿ ಸದಸ್ಯರು ಗ್ರಾಮ ಪಂಚಾಯತ್ ಕಟ್ಬೇಲ್ತೂರು:-
ಮಹಾಬಲ ದೇವಾಡಿಗ ಅವರ ಕುಟುಂಬದ ಪರಿಸ್ಥಿತಿ ತುಂಬಾ ಕಷ್ಟಕರವಾಗಿದೆ.ಅವರ ಅಕಾಲಿಕ ನಿಧನದಿಂದ ಕುಟುಂಬವು ಸಂಕಷ್ಟಕ್ಕೆ ಸಿಲುಕಿದೆ.ಮಕ್ಕಳಿಬ್ಬರು ಅನಾಥರಾಗಿದ್ದಾರೆ.ಮೆ.ಸ್ಕಾಂ ಇಲಾಖೆ ನಿರ್ಲಕ್ಷ್ಯದಿಂದ ಇವೊಂದು ಸಾವುಗಳು ಸಂಭಂವಿಸಿದ್ದರಿಂದ ಅವರ ಮಕ್ಕಳಿಗೆ ನ್ಯಾಯದ ಭಾಗವಾಗಿ ಮೆ.ಸ್ಕಾಂ ಇಲಾಖೆಯಲ್ಲಿ ಕೆಲಸವನ್ನು ನೀಡಲು ಸರಕಾರ ಕ್ರಮವನ್ನು ಕೈಗೊಳ್ಳಬೇಕು.ಈ ಬಗ್ಗೆ ಜಿಲ್ಲಾಡಳಿತಕ್ಕೂ ಮನವಿಯನ್ನು ನೀಡಲಾಗುವುದು.30 ರಿಂದ 40 ವರ್ಷಗಳಷ್ಟು ಹಳೆಯದಾದ ವಿದ್ಯುತ್ ತಂತಿಗಳನ್ನು ಬದಾಲಾವಣೆ ಮಾಡದೆ ಇದ್ದಿದ್ದರಿಂದ ಈ ಅನಾಹುತ ಸಂಭಂವಿಸಿದೆ.
ಶ್ಯಾಮಲ ಮೊಗವೀರ ಸ್ಥಳೀಯ ನಿವಾಸಿ:-
ತಂದೆ ಮತ್ತು ತಾಯಿಯ ಅಕಾಲಿಕ ಸಾವಿನಿಂದ ಮಕ್ಕಳಿಬ್ಬರೂ ಅನಾಥರಾಗಿದ್ದಾರೆ ವಿದ್ಯಾವಂತರಾದ ಅವರಿಗೆ ಸರಕಾರಿ ಕೆಲಸವನ್ನು ನೀಡಲು ಕ್ಷೇತ್ರದ ಶಾಸಕರು ಮತ್ತು ಜಿಲ್ಲಾಧಿಕಾರಿಗಳು ಕ್ರಮ ಜರುಗಿಸಬೇಕು.ಇಂತಹ ಘಟನೆಗಳು ನಮ್ಮ ತಾಲೂಕಿನಲ್ಲಿ ಮರಳುಕಳಿಸದಿರುವ ದೃಷ್ಟಿಯಿಂದ ಮೆ.ಸ್ಕಾಂ ಇಲಾಖೆ ಹಳೆ ವಿದ್ಯುತ್ ತಂತಿಗಳನ್ನು ಬದಲಿಸಿ ಹೊಸ ಸಂಪರ್ಕ ವ್ಯವಸ್ಥೆಯನ್ನು ಕಲ್ಪಿಸಲು ಕ್ರಮ ಕೈಗೊಳ್ಳಬೇಕು.
@ವರದಿ:ಜಗದೀಶ ದೇವಾಡಿಗ ಮುಳ್ಳಿಕಟ್ಟೆ
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…