ಕುಂದಾಪುರ

ಕಟ್ ಬೇಲ್ತೂರು:ಪಂಚಭೂತಗಳಲ್ಲಿ ದಂಪತಿ ಲೀನಾ,ಅನಾಥ ಮಕ್ಕಳಿಗೆ ಸರಕಾರಿ ಉದ್ಯೋಗ ನೀಡಲು ಆಗ್ರಹ

Share

ಮನೆಯಲ್ಲಿ ನಿರವ ಮೌನ

ಕುಂದಾಪುರ:ನೆಲಕ್ಕೆ ಬಿದ್ದ ವಿದ್ಯುತ್ ತಂತಿಯಿಂದ ವಿದ್ಯುತ್ ಸ್ಪರ್ಶಿಸಿದ ಪರಿಣಾಮ ದಾರುಣವಾಗಿ ಸಾವನ್ನಪ್ಪಿದ ಕುಂದಾಪುರ ತಾಲೂಕಿನ ಕಟ್‍ಬೇಲ್ತೂರು ಗ್ರಾಮದ ಸುಳ್ಸೆ ನಿವಾಸಿಗಳಾದ ಮಹಾಬಲ ದೇವಾಡಿಗ (55) ಹಾಗೂ ಅವರ ಪತ್ನಿ ಲಕ್ಷ್ಮೀ ದೇವಾಡಿಗ (49) ಅವರ ಮೃತದೇಹದ ಶವ ಸಂಸ್ಕಾರದ ಕಾರ್ಯ ಸ್ವಗ್ರಾಮವಾದ ಸುಳ್ಸೆಯಲ್ಲಿ ಶನಿವಾರ ನಡೆಯಿತು.ಸಪ್ತಪತಿ ತುಳಿದು ಹಸೆಮಣೆ ಏರಿದ್ದ ಆದರ್ಶ ದಂಪತಿಗಳು ಸಾವಿನಲ್ಲೂ ಒಂದಾಗುವುದರ ಮುಖೇನ ಇಹಲೋಕವನ್ನು ತ್ಯಜಿಸಿದ್ದಾರೆ.ಅವರು ಒಂದು ಗಂಡು ಮತ್ತು ಒಂದು ಹೆಣ್ಣು ಮಗಳನ್ನು ಅಗಲಿದ್ದಾರೆ.
ಸೌಮ್ಯ ಸ್ವಭಾವವನ್ನು ಹೊಂದಿದ್ದ ಮಾಹಾಬಲ ದೇವಾಡಿಗ ಅವರು ಸೇವಂತಿಗೆ ಕೃಷಿಕರಾಗಿದ್ದು,ಗದ್ದೆ ಕೆಲಸ ಸಹಿತ ಇನ್ನಿತರ ಕೃಷಿಕೂಲಿ ಕೆಲಸಗಳನ್ನು ಮಾಡುತ್ತಾ ಕುಟುಂಬದ ನಿರ್ವಹಣೆಯನ್ನು ನೋಡಿಕೋಳ್ಳುತಿದ್ದರು.ಅವರ ಅಕಾಲಿಕ ನಿಧನದಿಂದ ಕುಟುಂಬದ ಆಧಾರ ಸ್ತಂಭ ಉರುಳಿ ಬಿದ್ದಿದ್ದು ಅವರ ಮಕ್ಕಳಿಬ್ಬರೂ ಅನಾಥರಾಗಿದ್ದಾರೆ.ದಂಪತಿಗಳ ಸಾವಿನಿಂದ ಗ್ರಾಮವು ಶೋಕ ಸಾಗರದಲ್ಲಿ ಮುಳುಗಿದೆ.

ಅನಾಥ ಮಕ್ಕಳಿಗೆ ಉದ್ಯೋಗ ನೀಡಲು ಆಗ್ರಹ:ಮೆ.ಸ್ಕಾಂ ನಿರ್ಲಕ್ಷ್ಯದಿಂದ ಸಾವನ್ನಪ್ಪಿದ ದಂಪತಿಗಳ ಕುಟುಂಬಕ್ಕೆ ಸರಕಾರ ಪರಿಹಾರದ ಧನವನ್ನು ಕೂಡಲೆ ನೀಡಬೇಕು.ತಂದೆ ತಾಯಿಯನ್ನು ಕಳೆದು ಕೊಂಡಿದ್ದ ಮಕ್ಕಳಿಗೆ ಸರಕಾರಿ ಕೆಲಸ ನೀಡಲು ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ನಾಗರಾಜ್ ಪುತ್ರನ್ ಮಾಜಿ ಅಧ್ಯಕ್ಷರು,ಹಾಲಿ ಸದಸ್ಯರು ಗ್ರಾಮ ಪಂಚಾಯತ್ ಕಟ್‍ಬೇಲ್ತೂರು:-
ಮಹಾಬಲ ದೇವಾಡಿಗ ಅವರ ಕುಟುಂಬದ ಪರಿಸ್ಥಿತಿ ತುಂಬಾ ಕಷ್ಟಕರವಾಗಿದೆ.ಅವರ ಅಕಾಲಿಕ ನಿಧನದಿಂದ ಕುಟುಂಬವು ಸಂಕಷ್ಟಕ್ಕೆ ಸಿಲುಕಿದೆ.ಮಕ್ಕಳಿಬ್ಬರು ಅನಾಥರಾಗಿದ್ದಾರೆ.ಮೆ.ಸ್ಕಾಂ ಇಲಾಖೆ ನಿರ್ಲಕ್ಷ್ಯದಿಂದ ಇವೊಂದು ಸಾವುಗಳು ಸಂಭಂವಿಸಿದ್ದರಿಂದ ಅವರ ಮಕ್ಕಳಿಗೆ ನ್ಯಾಯದ ಭಾಗವಾಗಿ ಮೆ.ಸ್ಕಾಂ ಇಲಾಖೆಯಲ್ಲಿ ಕೆಲಸವನ್ನು ನೀಡಲು ಸರಕಾರ ಕ್ರಮವನ್ನು ಕೈಗೊಳ್ಳಬೇಕು.ಈ ಬಗ್ಗೆ ಜಿಲ್ಲಾಡಳಿತಕ್ಕೂ ಮನವಿಯನ್ನು ನೀಡಲಾಗುವುದು.30 ರಿಂದ 40 ವರ್ಷಗಳಷ್ಟು ಹಳೆಯದಾದ ವಿದ್ಯುತ್ ತಂತಿಗಳನ್ನು ಬದಾಲಾವಣೆ ಮಾಡದೆ ಇದ್ದಿದ್ದರಿಂದ ಈ ಅನಾಹುತ ಸಂಭಂವಿಸಿದೆ.

ಶ್ಯಾಮಲ ಮೊಗವೀರ ಸ್ಥಳೀಯ ನಿವಾಸಿ:-
ತಂದೆ ಮತ್ತು ತಾಯಿಯ ಅಕಾಲಿಕ ಸಾವಿನಿಂದ ಮಕ್ಕಳಿಬ್ಬರೂ ಅನಾಥರಾಗಿದ್ದಾರೆ ವಿದ್ಯಾವಂತರಾದ ಅವರಿಗೆ ಸರಕಾರಿ ಕೆಲಸವನ್ನು ನೀಡಲು ಕ್ಷೇತ್ರದ ಶಾಸಕರು ಮತ್ತು ಜಿಲ್ಲಾಧಿಕಾರಿಗಳು ಕ್ರಮ ಜರುಗಿಸಬೇಕು.ಇಂತಹ ಘಟನೆಗಳು ನಮ್ಮ ತಾಲೂಕಿನಲ್ಲಿ ಮರಳುಕಳಿಸದಿರುವ ದೃಷ್ಟಿಯಿಂದ ಮೆ.ಸ್ಕಾಂ ಇಲಾಖೆ ಹಳೆ ವಿದ್ಯುತ್ ತಂತಿಗಳನ್ನು ಬದಲಿಸಿ ಹೊಸ ಸಂಪರ್ಕ ವ್ಯವಸ್ಥೆಯನ್ನು ಕಲ್ಪಿಸಲು ಕ್ರಮ ಕೈಗೊಳ್ಳಬೇಕು.

@ವರದಿ:ಜಗದೀಶ ದೇವಾಡಿಗ ಮುಳ್ಳಿಕಟ್ಟೆ

Advertisement

Share
Team Kundapur Times

Recent Posts

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

2 hours ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

11 hours ago

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

1 week ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

1 week ago

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

2 weeks ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

2 months ago