ಕುಂದಾಪುರ

ಕಟ್ ಬೇಲ್ತೂರು:ಪಂಚಭೂತಗಳಲ್ಲಿ ದಂಪತಿ ಲೀನಾ,ಅನಾಥ ಮಕ್ಕಳಿಗೆ ಸರಕಾರಿ ಉದ್ಯೋಗ ನೀಡಲು ಆಗ್ರಹ

Share

ಮನೆಯಲ್ಲಿ ನಿರವ ಮೌನ

ಕುಂದಾಪುರ:ನೆಲಕ್ಕೆ ಬಿದ್ದ ವಿದ್ಯುತ್ ತಂತಿಯಿಂದ ವಿದ್ಯುತ್ ಸ್ಪರ್ಶಿಸಿದ ಪರಿಣಾಮ ದಾರುಣವಾಗಿ ಸಾವನ್ನಪ್ಪಿದ ಕುಂದಾಪುರ ತಾಲೂಕಿನ ಕಟ್‍ಬೇಲ್ತೂರು ಗ್ರಾಮದ ಸುಳ್ಸೆ ನಿವಾಸಿಗಳಾದ ಮಹಾಬಲ ದೇವಾಡಿಗ (55) ಹಾಗೂ ಅವರ ಪತ್ನಿ ಲಕ್ಷ್ಮೀ ದೇವಾಡಿಗ (49) ಅವರ ಮೃತದೇಹದ ಶವ ಸಂಸ್ಕಾರದ ಕಾರ್ಯ ಸ್ವಗ್ರಾಮವಾದ ಸುಳ್ಸೆಯಲ್ಲಿ ಶನಿವಾರ ನಡೆಯಿತು.ಸಪ್ತಪತಿ ತುಳಿದು ಹಸೆಮಣೆ ಏರಿದ್ದ ಆದರ್ಶ ದಂಪತಿಗಳು ಸಾವಿನಲ್ಲೂ ಒಂದಾಗುವುದರ ಮುಖೇನ ಇಹಲೋಕವನ್ನು ತ್ಯಜಿಸಿದ್ದಾರೆ.ಅವರು ಒಂದು ಗಂಡು ಮತ್ತು ಒಂದು ಹೆಣ್ಣು ಮಗಳನ್ನು ಅಗಲಿದ್ದಾರೆ.
ಸೌಮ್ಯ ಸ್ವಭಾವವನ್ನು ಹೊಂದಿದ್ದ ಮಾಹಾಬಲ ದೇವಾಡಿಗ ಅವರು ಸೇವಂತಿಗೆ ಕೃಷಿಕರಾಗಿದ್ದು,ಗದ್ದೆ ಕೆಲಸ ಸಹಿತ ಇನ್ನಿತರ ಕೃಷಿಕೂಲಿ ಕೆಲಸಗಳನ್ನು ಮಾಡುತ್ತಾ ಕುಟುಂಬದ ನಿರ್ವಹಣೆಯನ್ನು ನೋಡಿಕೋಳ್ಳುತಿದ್ದರು.ಅವರ ಅಕಾಲಿಕ ನಿಧನದಿಂದ ಕುಟುಂಬದ ಆಧಾರ ಸ್ತಂಭ ಉರುಳಿ ಬಿದ್ದಿದ್ದು ಅವರ ಮಕ್ಕಳಿಬ್ಬರೂ ಅನಾಥರಾಗಿದ್ದಾರೆ.ದಂಪತಿಗಳ ಸಾವಿನಿಂದ ಗ್ರಾಮವು ಶೋಕ ಸಾಗರದಲ್ಲಿ ಮುಳುಗಿದೆ.

ಅನಾಥ ಮಕ್ಕಳಿಗೆ ಉದ್ಯೋಗ ನೀಡಲು ಆಗ್ರಹ:ಮೆ.ಸ್ಕಾಂ ನಿರ್ಲಕ್ಷ್ಯದಿಂದ ಸಾವನ್ನಪ್ಪಿದ ದಂಪತಿಗಳ ಕುಟುಂಬಕ್ಕೆ ಸರಕಾರ ಪರಿಹಾರದ ಧನವನ್ನು ಕೂಡಲೆ ನೀಡಬೇಕು.ತಂದೆ ತಾಯಿಯನ್ನು ಕಳೆದು ಕೊಂಡಿದ್ದ ಮಕ್ಕಳಿಗೆ ಸರಕಾರಿ ಕೆಲಸ ನೀಡಲು ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ನಾಗರಾಜ್ ಪುತ್ರನ್ ಮಾಜಿ ಅಧ್ಯಕ್ಷರು,ಹಾಲಿ ಸದಸ್ಯರು ಗ್ರಾಮ ಪಂಚಾಯತ್ ಕಟ್‍ಬೇಲ್ತೂರು:-
ಮಹಾಬಲ ದೇವಾಡಿಗ ಅವರ ಕುಟುಂಬದ ಪರಿಸ್ಥಿತಿ ತುಂಬಾ ಕಷ್ಟಕರವಾಗಿದೆ.ಅವರ ಅಕಾಲಿಕ ನಿಧನದಿಂದ ಕುಟುಂಬವು ಸಂಕಷ್ಟಕ್ಕೆ ಸಿಲುಕಿದೆ.ಮಕ್ಕಳಿಬ್ಬರು ಅನಾಥರಾಗಿದ್ದಾರೆ.ಮೆ.ಸ್ಕಾಂ ಇಲಾಖೆ ನಿರ್ಲಕ್ಷ್ಯದಿಂದ ಇವೊಂದು ಸಾವುಗಳು ಸಂಭಂವಿಸಿದ್ದರಿಂದ ಅವರ ಮಕ್ಕಳಿಗೆ ನ್ಯಾಯದ ಭಾಗವಾಗಿ ಮೆ.ಸ್ಕಾಂ ಇಲಾಖೆಯಲ್ಲಿ ಕೆಲಸವನ್ನು ನೀಡಲು ಸರಕಾರ ಕ್ರಮವನ್ನು ಕೈಗೊಳ್ಳಬೇಕು.ಈ ಬಗ್ಗೆ ಜಿಲ್ಲಾಡಳಿತಕ್ಕೂ ಮನವಿಯನ್ನು ನೀಡಲಾಗುವುದು.30 ರಿಂದ 40 ವರ್ಷಗಳಷ್ಟು ಹಳೆಯದಾದ ವಿದ್ಯುತ್ ತಂತಿಗಳನ್ನು ಬದಾಲಾವಣೆ ಮಾಡದೆ ಇದ್ದಿದ್ದರಿಂದ ಈ ಅನಾಹುತ ಸಂಭಂವಿಸಿದೆ.

ಶ್ಯಾಮಲ ಮೊಗವೀರ ಸ್ಥಳೀಯ ನಿವಾಸಿ:-
ತಂದೆ ಮತ್ತು ತಾಯಿಯ ಅಕಾಲಿಕ ಸಾವಿನಿಂದ ಮಕ್ಕಳಿಬ್ಬರೂ ಅನಾಥರಾಗಿದ್ದಾರೆ ವಿದ್ಯಾವಂತರಾದ ಅವರಿಗೆ ಸರಕಾರಿ ಕೆಲಸವನ್ನು ನೀಡಲು ಕ್ಷೇತ್ರದ ಶಾಸಕರು ಮತ್ತು ಜಿಲ್ಲಾಧಿಕಾರಿಗಳು ಕ್ರಮ ಜರುಗಿಸಬೇಕು.ಇಂತಹ ಘಟನೆಗಳು ನಮ್ಮ ತಾಲೂಕಿನಲ್ಲಿ ಮರಳುಕಳಿಸದಿರುವ ದೃಷ್ಟಿಯಿಂದ ಮೆ.ಸ್ಕಾಂ ಇಲಾಖೆ ಹಳೆ ವಿದ್ಯುತ್ ತಂತಿಗಳನ್ನು ಬದಲಿಸಿ ಹೊಸ ಸಂಪರ್ಕ ವ್ಯವಸ್ಥೆಯನ್ನು ಕಲ್ಪಿಸಲು ಕ್ರಮ ಕೈಗೊಳ್ಳಬೇಕು.

@ವರದಿ:ಜಗದೀಶ ದೇವಾಡಿಗ ಮುಳ್ಳಿಕಟ್ಟೆ

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

1 month ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

1 month ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

3 months ago