ಬೈಂದೂರು:ಲಾರಿ ಟೆಂಪೋ ಮಾಲೀಕರು ಮತ್ತು ಚಾಲಕರ ಸಂಘದ ಅನಿರ್ದಿಷ್ಟಾವಧಿ ಮುಷ್ಕರ ನಾಲ್ಕನೇ ದಿನಕ್ಕೆ

ಬೈಂದೂರು:3ಎ ಲೈಸೆನ್ಸ್ ರದ್ದು ಪಡಿಸಿರುವುದನ್ನು ವಿರೋಧಿಸಿ ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗಾಗಿ ಬೈಂದೂರು ವಲಯ ಲಾರಿ ಮತ್ತು ಟೆಂಪೋ ಮಾಲಿಕರು ಹಾಗೂ ಚಾಲಕರ ಸಂಘದ ವತಿಯಿಂದ ಅನಿರ್ದಿಷ್ಟಾವಧಿ ಮುಷ್ಕರ ಬೈಂದೂರು ಯಡ್ತರೆ ಸರ್ಕಲ್ ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿದೆ.ಬೇಡಿಕೆ ಈಡೇರಿಕೆಗೆ ಆಗುವ ತನಕ ಮುಷ್ಕರ ಕೈ ಬಿಡಲ್ಲ ಎಂದು ಸಂಘದ ಘೋಷಿಸಿದೆ.
ಬೈಂದೂರು ವಲಯ ಲಾರಿ ಮಾಲಿಕರ ಹಾಗೂ ಚಾಲಕರ ಸಂಘದ ಜಂಟಿ ಅಧ್ಯಕ್ಷ ನೆಲ್ಯಾಡಿ ದಿವಾಕರ ಶೆಟ್ಟಿ ಮಾತನಾಡಿ,ಈ ವರೆಗೆ ಇಲ್ಲದ ಕಾನೂನನ್ನು ಪ್ರಸ್ತುತ ಹೇರಿರುವ ಕ್ರಮದ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು.ಕಾನೂನು ಆದೇಶಿಸಿ ಆದರೆ ಉಡುಪಿ ಜಿಲ್ಲೆ ಇಲ್ಲಿ ತುಂಡು ಭೂಮಿಗಳನ್ನು ಹೊಂದಿದ್ದು ಇಲ್ಲಿಯ ಮಣ್ಣು ಕಲ್ಲುಗಳನ್ನು ಕಾನೂನು ಬದ್ಧಗೊಳಿಸಲು ಸಾಧ್ಯವೇ ನಿಮ್ಮ ಈ ಮಧ್ಯಂತರ ಕಾನೂನಿನಿಂದ ಅದೆಷ್ಟೊ ಕುಟುಂಬಗಳು ಬೀದಿಗೆ ಬಂದಿವೆ ಇದರ ಹೊಣೆ ನೀವೆ ಹೊರಬೇಕಾಗಿದೆ. ಕೂಲಿ ಕಾರ್ಮಿಕರು ಅತಂತ್ರರಾಗಿದ್ದಾರೆ. ಸಮಸ್ಯೆಯನ್ನು ಶೀಘ್ರ ಪರಿಹರಿಸಲು ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದಾರೆ.
ಬೈಂದೂರು ರೈತರ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ನೆಲ್ಯಾಡಿ ಮಾತನಾಡಿ, ಕರ್ನಾಟಕ ರಾಜ್ಯಕ್ಕೆ ಒಂದು ಕಾನೂನು,ಉಡುಪಿ ಜಿಲ್ಲೆಗೊಂದು ಕಾನೂನು ಎನ್ನುವಂತಹ ವ್ಯವಸ್ಥೆ ನಿರ್ಮಾಣವಾಗಿದೆ.ನಮ್ಮ ಜಿಲ್ಲೆ ಪ್ರತ್ಯೇಕ ಕಾನೂನು ಮಾಡುವುದು ಸರಿಯಲ್ಲ. ಕಾನೂನು ಆದೇಶಿಸಿ ಆದರೆ ಉಡುಪಿ ಜಿಲ್ಲೆ ಇಲ್ಲಿ ತುಂಡು ಭೂಮಿಗಳನ್ನು ಹೊಂದಿದ್ದು ಇಲ್ಲಿಯ ಮಣ್ಣು ಕಲ್ಲುಗಳನ್ನು ಕಾನೂನು ಬದ್ಧಗೊಳಿಸಲು ಸಾಧ್ಯವೇ ನಿಮ್ಮ ಈ ಮಧ್ಯಂತರ ಕಾನೂನಿನಿಂದ ಅದೆಷ್ಟೊ ಕುಟುಂಬಗಳು ಬೀದಿಗೆ ಬಂದಿವೆ ಇದರ ಹೊಣೆ ನೀವೆ ಹೊರಬೇಕಾಗಿದೆ. ಕೂಲಿ ಕಾರ್ಮಿಕರು ಅತಂತ್ರರಾಗಿದ್ದಾರೆ. ಸಮಸ್ಯೆಯನ್ನು ಶೀಘ್ರ ಪರಿಹರಿಸಿ ಎಂದು ಆಗ್ರಹಿಸಿದರು.ಬೈಂದೂರು ವಲಯ ಲಾರಿ ಮಾಲಿಕರು ಹಾಗೂ ಚಾಲಕರು ಸಂಘದ ಕಾರ್ಯದರ್ಶಿ
ಕೆ ಗಣೇಶ್,ಉಪಾಧ್ಯಕ್ಷ ಮಾಧವ ಪೂಜಾರಿ ಶಿರೂರು, ಹಿರಿಯ ಸದಸ್ಯ ದೇವಪ್ಪ ಬಳೆಗಾರ ಉಪ್ಪುಂದ, ಸಂಘದ ಸದಸ್ಯರು ಉಪಸ್ಥಿತರಿದ್ದರು.ರಾಷ್ಟ್ರೀಯ ಹೆದ್ದಾರಿ ರಸ್ತೆ ಬದಿಯಲ್ಲಿ ಲಾರಿ,ಟಿಪ್ಪರ್ ಗಳನ್ನು ನಿಲ್ಲಿಸಿ ಪ್ರತಿಭಟನೆ ಮಾಡಲಾಗುತ್ತಿದೆ.