ಕುಂದಾಪುರ

ಹೆಮ್ಮಾಡಿ:ಕಟ್ಟಡ ನಿರ್ಮಾಣ ಕಾರ್ಯ ಸಹಿತ ತೋಟದ ಕೆಲಸಗಳು ಸಹ ನಡೆಯದಂತಹ ಪರಿಸ್ಥಿತಿ ಉದ್ಭವವಾಗಿದೆ-ಬಿ.ಎಂ ಸುಕುಮಾರ್ ಶೆಟ್ಟಿ

Share

Advertisement
Advertisement
Advertisement

ಕುಂದಾಪುರ:ಕಠಿಣವಾದ ಕಾನೂನನ್ನು ಜಿಲ್ಲೆಯಲ್ಲಿ ಜಾರಿ ಮಾಡಿರುವುದರಿಂದ ಲಾರಿ ಮಾಲೀಕರು ಮತ್ತು ಚಾಲಕರಿಗೆ ಬಹಳಷ್ಟು ತೊಂದರೆ ಆಗಿದ್ದು ಕಟ್ಟಡ ನಿರ್ಮಾಣ ಕಾರ್ಯ ಸಹಿತ ತೋಟದ ಕೆಲಸಗಳು ಸಹ ನಡೆಯದಂತಹ ಪರಿಸ್ಥಿತಿ ಉದ್ಭವವಾಗಿದೆ.ಜನರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಬೈಂದೂರು ಕ್ಷೇತ್ರದ ಮಾಜಿ ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಹೇಳಿದರು.ಲಾರಿ ಮತ್ತು ಟೆಂಪೊ ಮಾಲೀಕರು ಹಾಗೂ ಚಾಲಕರ ಸಂಘ ಬೈಂದೂರು ವಲಯದ ವತಿಯಿಂದ ಹೆಮ್ಮಾಡಿಯಲ್ಲಿ ನಡೆಯುತ್ತಿರುವ 5ನೇ ದಿನದ ಕಟ್ಟಡ ಸಾಮಾಗ್ರಿ ಸಾಗಾಟದ ವಾಹನಗಳ ಅನಿರ್ದಿಷ್ಟವಾಧಿ ಮುಷ್ಕರದಲ್ಲಿ ಭಾನುವಾರ ಅವರು ಮಾತನಾಡಿದರು.

Advertisement

ಕಲ್ಲು,ಮಣ್ಣು,ಮರಳು ಸಾಗಾಟದ ಲಾರಿಗಳ ಸಂಚಾರಕ್ಕೆ ಕಾನೂನಿನ ಮೂಲಕ ನಿಯಂತ್ರಣ ಹೇರಿದ್ದರಿಂದ ಉಡುಪಿ ಜಿಲ್ಲೆಗೆ ಬಹಳಷ್ಟು ತೊಂದರೆ ಆಗಿದ್ದು ಜನ ಜೀವನ ಅಸ್ಥವ್ಯಸ್ತವಾಗಿದೆ.ಕೂಲಿ ಕಾರ್ಮಿಕರಿಗೆ ಕೆಲಸವು ಸಿಗುತ್ತಿಲ್ಲ ಹೋಟೆಲ್,ಅಂಗಡಿಗಳಲ್ಲಿ ವ್ಯಾಪಾರ ಕುಂಠಿತಗೊಂಡಿದೆ ಎಂದರು.ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಯ ಮಂತ್ರಿಗಳನ್ನು ಭೇಟಿಮಾಡಿ ಜಿಲ್ಲೆಯ ಪರಿಸ್ಥಿತಿ ಬಗ್ಗೆ ಗಮನಕ್ಕೆ ತರಲಾಗುವುದು ಎಂದು ಹೇಳಿದರು.

ಲಾರಿ ಮತ್ತು ಟೆಂಪೊ ಮಾಲೀಕರು ಹಾಗೂ ಚಾಲಕರ ಸಂಘ ಬೈಂದೂರು ವಲಯದ ಜಂಟಿ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ ಬಾಳಿಕೆರೆ ಮಾತನಾಡಿ,ಸಾರ್ವಜನಿಕರಿಗೆ ತೊಂದರೆ ಆಗದ ರೀತಿಯಲ್ಲಿ ಹೆದ್ದಾರಿ ಬದಿಯಲ್ಲಿ ಗಾಡಿಗಳನ್ನು ನಿಲ್ಲಿಸಿ ಪ್ರತಿಭಟನೆ ಮಾಡುತ್ತಿದ್ದೇವೆ ನಮ್ಮ ಪ್ರತಿಭಟನೆಯನ್ನು ಹತ್ತಿಕ್ಕುವ ದೃಷ್ಟಿಯಿಂದ ರಾತ್ರೋರಾತ್ರಿ ಗಾಡಿಗಳ ಮೇಲೆ ವಾಹನವನ್ನು ತೆರವುಗೊಳಿಸಬೇಕ್ಕುನ್ನುವ ಕುರಿತು ನೋಟಿಸ್‍ನ್ನು ಅಂಟಿಸಿ ಹೋಗಲಾಗಿದೆ.ಅನ್ಯಾಯ ವಾದಾಗ ಪ್ರಜಾಪ್ರಭುತ್ವದ ವ್ಯವಸ್ಥೆ ಅಡಿಯಲ್ಲಿ ಸಾರ್ವಜನಿಕರಿಗೆ ಅಧಿಕಾರಗಳು ಮತ್ತು ಸರಕಾರದ ವಿರುದ್ಧ ಪ್ರತಿಭಟಿಸುವ ಹಕ್ಕು ಇಲ್ಲವೆ ಎಂದು ಪ್ರಶ್ನಿಸಿದರು.ಕಳೆ ಐದು ದಿನಗಳಿಂದ ಜಿಲ್ಲಾದ್ಯಂತ ಲಾರಿ ಮುಷ್ಕರ ನಡೆಯುತ್ತಿದ್ದರು ಅಧಿಕಾರಿಗಳ ಮಟ್ಟದಲ್ಲಿ ನಮ್ಮನ್ನು ಕರೆಸಿ ಸಮಸ್ಯೆಗಳನ್ನು ಇತ್ಯಾರ್ಥ ಪಡಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳದೆ ಜಿಲ್ಲಾಡಳಿತ ನಿರುತ್ಸಾಹದ ಧೋರಣೆಯನ್ನು ತಾಳುತ್ತಿದೆ ಎಂದು ದೂರಿದರು.ಬೇಡಿಕೆಗಳು ಈಡೇರಿಕೆ ಆಗುವ ತನಕ ಹೋರಾಟವನ್ನು ಕೈಬಿಡುವ ಮಾತೆ ಇಲ್ಲಾ ಎಂದು ಸ್ಪಷ್ಟಪಡಿಸಿದರು.ಈ ಸಂದರ್ಭ ಸಂಘದ ಪದಾಧಿಕಾರಿಗಳು,ಸದಸ್ಯರು ಉಪಸ್ಥಿತರಿದ್ದರು.

Advertisement
Advertisement

Share
Team Kundapur Times

Recent Posts

ಶ್ರೀ ಕೃಷ್ಣಾನಂದತೀರ್ಥಮಹಾಸ್ವಾಮಿ ಗೋಪಾಲಕೃಷ್ಣ ದೇವಸ್ಥಾನಕ್ಕೆ ಭೇಟಿ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಶಕಟಪುರ ಶ್ರೀ ವಿದ್ಯಾಪೀಠಾಧೀಶ್ವರ ಶ್ರೀ ಜಗದ್ಗುರು ಬದರೀಶಂಕರಾಚಾರ್ಯ…

1 week ago

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ “ಐಕ್ಯಂ” 2k25 ಕಾರ್ಯಕ್ರಮ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ವಾರ್ಷಿಕೋತ್ಸವ "ಐಕ್ಯಂ" 2025 ಅದ್ದೂರಿಯಿಂದ ನಡೆಯಿತು.ವಿಭಿನ್ನ ರೀತಿಯ ನೃತ್ಯ, ಸಂಗೀತದಿಂದ ಹಾಗೂ ಕಾಲೇಜಿನ ವಿದ್ಯಾರ್ಥಿಗಳೇ…

1 week ago

ಯುವಕ ಮಂಡಲ ತ್ರಾಸಿ 59ನೇ ವಾರ್ಷಿಕೋತ್ಸವ ಸಂಭ್ರಮ

ಕುಂದಾಪುರ:ಸಾಮಾಜಿಕ ಧಾರ್ಮಿಕ ಶೈಕ್ಷಣಿಕ ಕಾರ್ಯಗಳೊಂದಿಗೆ ಊರಿನ ಅಭಿವೃದ್ಧಿಗೆ ಶ್ರಮಿಸುತ್ತಿರುವ ಯುವಕ ಮಂಡಲದ ಕಾರ್ಯ ಇತರ ಸಂಘಟನೆಗಳಿಗೆ ಮಾದರಿ ಆಗಿದೆ ಎಂದು…

2 weeks ago

ಕೃಷ್ಣ ಮಠ ರಾಜಾಂಗಣದಲ್ಲಿ ಭರತ ನಾಟ್ಯ ಪ್ರದರ್ಶನ

ಉಡುಪಿ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ವಿದ್ಯಾರ್ಥಿಗಳಿಂದ ಉಡುಪಿ ಕೃಷ್ಣ ಮಠದ ರಾಜಾಂಗಣದಲ್ಲಿ ಭರತ ನಾಟ್ಯ ಪ್ರದರ್ಶನ ನಡೆಯಿತು.ವಿದ್ಯಾರ್ಥಿಗಳು ಹೆಜ್ಞೆ…

2 weeks ago

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ವಾರ್ಷಿಕ ಕ್ರೀಡಾಕೂಟ 2024-2025

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮಹಾತ್ಮ ಗಾಂಧಿ ಮೈದಾನ ಅಜ್ಜರಕಾಡುನಲ್ಲಿ ಜರುಗಿತು.ಹಿರಿಯ ದೈಹಿಕ ನಿರ್ದೇಶಕ ಯುನೈಟೆಡ್ ಉಡುಪಿ…

2 weeks ago

ಸ್ಕೈಡೈನಿಂಗ್ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿ: ಪ್ರಕೃತಿ ಸೌಂದರ್ಯಕ್ಕೆ ಮನಸೋತ ಸಚಿವ

ಕುಂದಾಪುರ:ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶವಿದ್ದು,ಇಲ್ಲಿಗೆ ಬರುವಂತೆ ಸಂಸದರು, ಶಾಸಕರು ಮನವಿ ಮಾಡಿದ್ದರು. ಆ ಹಿನ್ನೆಲೆಯಲ್ಲಿ ಈ ಭಾಗದ ಪ್ರವಾಸೋದ್ಯಮ…

3 weeks ago